<p><strong>ಮನಗೂಳಿ</strong>:ಪಟ್ಟಣದ ಪಟ್ಟಿಕಂಥಿ ಹಿರೇಮಠದ ಲಿಂಗೈಕ್ಯ ಸಂಗನಬಸವ ಶಿವಾಚಾರ್ಯರ 18ನೇ ಸ್ಮರಣೋತ್ಸವ, ಲಿಂಗೈಕ್ಯ ಮಹಾಂತ ಶಿವಾಚಾರ್ಯರ 70ನೇ ಯಾತ್ರಾ ಮಹೋತ್ಸವ ಶನಿವಾರ ಅಪಾರ ಭಕ್ತರ ಸಮ್ಮುಖ ಅದ್ಧೂರಿಯಿಂದ ನಡೆಯಿತು.</p>.<p>ಬೆಳ್ಳಿ ಪಲ್ಲಕ್ಕಿಯಲ್ಲಿ ಉಭಯ ಶ್ರೀಗಳ ರಜತ ಮೂರ್ತಿಯನ್ನಿಟ್ಟು, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮಂಗಳವಾದ್ಯಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಪಟ್ಟಣಿಗರು ಸೇರಿದಂತೆ, ಸುತ್ತಮುತ್ತಲಿನ ಹಳ್ಳಿಗಳ ಜನರು ಮೆರವಣಿಗೆಯಲ್ಲಿ ಭಾಗಿಯಾದರು.</p>.<p>ಮಠದ ಡಾ.ಮಹಾಂತಲಿಂಗ ಶಿವಾಚಾರ್ಯರ ಸಿಂಹಾಸನಾರೋಹಣ ಧಾರ್ಮಿಕ ಸಮಾರಂಭವೂ ಈ ಸಂದರ್ಭ ನಡೆಯಿತು. ಇದರ ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಡಾ.ಸಿದ್ಧಲಿಂಗ ಶಿವಾಚಾರ್ಯರು ಆಶೀರ್ವಚನ ನೀಡಿ, ‘ಪ್ರಸ್ತುತ ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ತಂದೆ–ತಾಯಿಯನ್ನೇ ದೇವರು ಎಂದುಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಪ್ರತಿಯೊಬ್ಬರೂ ಇಷ್ಟಲಿಂಗದ ಮಹತ್ವ ಅರಿತು, ಇಷ್ಟಲಿಂಗ ಪೂಜೆ ಮತ್ತು ವಿಭೂತಿ ಧಾರಣೆ ಮಾಡಿಕೊಳ್ಳಬೇಕು’ ಎಂದು ಇದೇ ಸಂದರ್ಭ ಸಲಹೆ ನೀಡಿದರು.</p>.<p>ಡಾ.ಶಿವಕುಮಾರ ಸ್ವಾಮೀಜಿ, ಭೃಂಗೇಶವರ ಶಿವಾಚಾರ್ಯರು, ಅಭಿನವ ಸಂಗನಬಸವ ಶಿವಾಚಾರ್ಯರು, ಶಿವಪ್ರಕಾಶ ಶಿವಾಚಾರ್ಯರು, ಜನತಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸುಭಾಷಗೌಡ ಪಾಟೀಲ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಚಂದ್ರಶೇಖರಗೌಡ ಪಾಟೀಲ ಸಭೆಯಲ್ಲಿ ಉಪಸ್ಥಿತರಿದ್ದರು.</p>.<p>ಜೆಡಿಎಸ್ ಮುಖಂಡ ಅಪ್ಪುಗೌಡ ಪಾಟೀಲ ಮನಗೂಳಿ ಸ್ವಾಗತಿಸಿದರು. ಶಿಕ್ಷಕ ಸಿದ್ರಾಮ ಬಿರಾದಾರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮನಗೂಳಿ</strong>:ಪಟ್ಟಣದ ಪಟ್ಟಿಕಂಥಿ ಹಿರೇಮಠದ ಲಿಂಗೈಕ್ಯ ಸಂಗನಬಸವ ಶಿವಾಚಾರ್ಯರ 18ನೇ ಸ್ಮರಣೋತ್ಸವ, ಲಿಂಗೈಕ್ಯ ಮಹಾಂತ ಶಿವಾಚಾರ್ಯರ 70ನೇ ಯಾತ್ರಾ ಮಹೋತ್ಸವ ಶನಿವಾರ ಅಪಾರ ಭಕ್ತರ ಸಮ್ಮುಖ ಅದ್ಧೂರಿಯಿಂದ ನಡೆಯಿತು.</p>.<p>ಬೆಳ್ಳಿ ಪಲ್ಲಕ್ಕಿಯಲ್ಲಿ ಉಭಯ ಶ್ರೀಗಳ ರಜತ ಮೂರ್ತಿಯನ್ನಿಟ್ಟು, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮಂಗಳವಾದ್ಯಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಪಟ್ಟಣಿಗರು ಸೇರಿದಂತೆ, ಸುತ್ತಮುತ್ತಲಿನ ಹಳ್ಳಿಗಳ ಜನರು ಮೆರವಣಿಗೆಯಲ್ಲಿ ಭಾಗಿಯಾದರು.</p>.<p>ಮಠದ ಡಾ.ಮಹಾಂತಲಿಂಗ ಶಿವಾಚಾರ್ಯರ ಸಿಂಹಾಸನಾರೋಹಣ ಧಾರ್ಮಿಕ ಸಮಾರಂಭವೂ ಈ ಸಂದರ್ಭ ನಡೆಯಿತು. ಇದರ ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಡಾ.ಸಿದ್ಧಲಿಂಗ ಶಿವಾಚಾರ್ಯರು ಆಶೀರ್ವಚನ ನೀಡಿ, ‘ಪ್ರಸ್ತುತ ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ತಂದೆ–ತಾಯಿಯನ್ನೇ ದೇವರು ಎಂದುಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಪ್ರತಿಯೊಬ್ಬರೂ ಇಷ್ಟಲಿಂಗದ ಮಹತ್ವ ಅರಿತು, ಇಷ್ಟಲಿಂಗ ಪೂಜೆ ಮತ್ತು ವಿಭೂತಿ ಧಾರಣೆ ಮಾಡಿಕೊಳ್ಳಬೇಕು’ ಎಂದು ಇದೇ ಸಂದರ್ಭ ಸಲಹೆ ನೀಡಿದರು.</p>.<p>ಡಾ.ಶಿವಕುಮಾರ ಸ್ವಾಮೀಜಿ, ಭೃಂಗೇಶವರ ಶಿವಾಚಾರ್ಯರು, ಅಭಿನವ ಸಂಗನಬಸವ ಶಿವಾಚಾರ್ಯರು, ಶಿವಪ್ರಕಾಶ ಶಿವಾಚಾರ್ಯರು, ಜನತಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸುಭಾಷಗೌಡ ಪಾಟೀಲ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಚಂದ್ರಶೇಖರಗೌಡ ಪಾಟೀಲ ಸಭೆಯಲ್ಲಿ ಉಪಸ್ಥಿತರಿದ್ದರು.</p>.<p>ಜೆಡಿಎಸ್ ಮುಖಂಡ ಅಪ್ಪುಗೌಡ ಪಾಟೀಲ ಮನಗೂಳಿ ಸ್ವಾಗತಿಸಿದರು. ಶಿಕ್ಷಕ ಸಿದ್ರಾಮ ಬಿರಾದಾರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>