<p><strong>ವಿಜಯಪುರ</strong>: ಮುಖ್ಯಮಂತ್ರಿಯಾಗಲು ಹಿಂದೂ ಸಮಾಜವನ್ನು ಒಡೆಯುವ ದುಸ್ಸಾಹಸಕ್ಕೆ ಸಚಿವ ಎಂ.ಬಿ.ಪಾಟೀಲರು ಕೈ ಹಾಕಬಾರದು. ಈ ಹಿಂದೆಯೂ ಪ್ರತ್ಯೇಕ ಲಿಂಗಾಯತ ಧರ್ಮ ವಿಷಯ ಮುನ್ನೆಲೆಗೆ ತಂದು ಕೈ ಸುಟ್ಟುಕೊಂಡಿದ್ದೀರಿ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಎಚ್ಚರಿಸಿದರು.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿ ಮುಖ್ಯಮಂತ್ರಿ ಆಗುವ ಇರಾದೆಯಲ್ಲಿರುವ ಸಚಿವ ಎಂ.ಬಿ.ಪಾಟೀಲರು ಧರ್ಮ ವಿಭಜನೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.</p>.<p>2028ರಲ್ಲಿ ಮುಖ್ಯಮಂತ್ರಿ ಆಗುವ ಕನಸು ಕಾಣಬೇಡಿ. ನವೆಂಬರ್ ಕ್ರಾಂತಿಯಲ್ಲಿಯೇ ನೀವು ಮುಖ್ಯಮಂತ್ರಿ ಆಗಬೇಕು, ಹೊರತು ಮುಂದೆ ಆಗಲು ಸಾಧ್ಯವಿಲ್ಲ. 2028ರಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದರು.</p>.<p><strong>ಜನರೇ ದಂಗೆ ಏಳುತ್ತಾರೆ:</strong></p>.<p>ಕನೇರಿ ಶ್ರೀಗಳ ಮನಸ್ಸಿಗೆ ನೋವು ಮಾಡುವ ಕೆಲಸ ನಡೆದಿದೆ. ಇದೇ ರೀತಿ ಪರಿಸ್ಥಿತಿ ಮುಂದುವರೆದರೆ ಜನರೇ ದಂಗೆ ಏಳುತ್ತಾರೆ, ನಾವು ಸಹ ಧರ್ಮಸ್ಥಳ ಮಾದರಿಯಲ್ಲಿ ಹೋರಾಟ ನಡೆಸಲು ಬದ್ಧ ಎಂದರು.</p>.<p>ಸಹಜವಾದ ಮಾತಿಗೆ ದೊಡ್ಡದು ಮಾಡುವ ಕೆಲಸ ನಡೆದಿದೆ, ರಾಜ್ಯ ಸರ್ಕಾರ ಈ ವಿಷಯದಲ್ಲಿ ಶ್ರೀಗಳ ಮೇಲೆ ನಿರ್ಬಂಧ ಹೇರಿ ಈ ವಿಷಯ ದೊಡ್ಡದು ಮಾಡಿದೆ ಎಂದರು.</p>.<p>ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಒತ್ತಾಯಿಸಿ 35 ದಿನಗಳಿಂದ ಹೋರಾಟ ನಡೆಯುತ್ತಿದೆ, ಆ ಸ್ಥಳಕ್ಕೆ ಮುಖ್ಯಮಂತ್ರಿಗಳು ಭೇಟಿ ನೀಡಬೇಕಿತ್ತು, ಆದರೆ ಈ ಸರ್ಕಾರ ಮಾತ್ರ ಯಾರಿಗೂ ಸ್ಪಂದನೆಯೇ ಇಲ್ಲದಂತಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಮುಖ್ಯಮಂತ್ರಿಯಾಗಲು ಹಿಂದೂ ಸಮಾಜವನ್ನು ಒಡೆಯುವ ದುಸ್ಸಾಹಸಕ್ಕೆ ಸಚಿವ ಎಂ.ಬಿ.ಪಾಟೀಲರು ಕೈ ಹಾಕಬಾರದು. ಈ ಹಿಂದೆಯೂ ಪ್ರತ್ಯೇಕ ಲಿಂಗಾಯತ ಧರ್ಮ ವಿಷಯ ಮುನ್ನೆಲೆಗೆ ತಂದು ಕೈ ಸುಟ್ಟುಕೊಂಡಿದ್ದೀರಿ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಎಚ್ಚರಿಸಿದರು.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿ ಮುಖ್ಯಮಂತ್ರಿ ಆಗುವ ಇರಾದೆಯಲ್ಲಿರುವ ಸಚಿವ ಎಂ.ಬಿ.ಪಾಟೀಲರು ಧರ್ಮ ವಿಭಜನೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.</p>.<p>2028ರಲ್ಲಿ ಮುಖ್ಯಮಂತ್ರಿ ಆಗುವ ಕನಸು ಕಾಣಬೇಡಿ. ನವೆಂಬರ್ ಕ್ರಾಂತಿಯಲ್ಲಿಯೇ ನೀವು ಮುಖ್ಯಮಂತ್ರಿ ಆಗಬೇಕು, ಹೊರತು ಮುಂದೆ ಆಗಲು ಸಾಧ್ಯವಿಲ್ಲ. 2028ರಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದರು.</p>.<p><strong>ಜನರೇ ದಂಗೆ ಏಳುತ್ತಾರೆ:</strong></p>.<p>ಕನೇರಿ ಶ್ರೀಗಳ ಮನಸ್ಸಿಗೆ ನೋವು ಮಾಡುವ ಕೆಲಸ ನಡೆದಿದೆ. ಇದೇ ರೀತಿ ಪರಿಸ್ಥಿತಿ ಮುಂದುವರೆದರೆ ಜನರೇ ದಂಗೆ ಏಳುತ್ತಾರೆ, ನಾವು ಸಹ ಧರ್ಮಸ್ಥಳ ಮಾದರಿಯಲ್ಲಿ ಹೋರಾಟ ನಡೆಸಲು ಬದ್ಧ ಎಂದರು.</p>.<p>ಸಹಜವಾದ ಮಾತಿಗೆ ದೊಡ್ಡದು ಮಾಡುವ ಕೆಲಸ ನಡೆದಿದೆ, ರಾಜ್ಯ ಸರ್ಕಾರ ಈ ವಿಷಯದಲ್ಲಿ ಶ್ರೀಗಳ ಮೇಲೆ ನಿರ್ಬಂಧ ಹೇರಿ ಈ ವಿಷಯ ದೊಡ್ಡದು ಮಾಡಿದೆ ಎಂದರು.</p>.<p>ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಒತ್ತಾಯಿಸಿ 35 ದಿನಗಳಿಂದ ಹೋರಾಟ ನಡೆಯುತ್ತಿದೆ, ಆ ಸ್ಥಳಕ್ಕೆ ಮುಖ್ಯಮಂತ್ರಿಗಳು ಭೇಟಿ ನೀಡಬೇಕಿತ್ತು, ಆದರೆ ಈ ಸರ್ಕಾರ ಮಾತ್ರ ಯಾರಿಗೂ ಸ್ಪಂದನೆಯೇ ಇಲ್ಲದಂತಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>