<p>ವಿಜಯಪುರ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಅವಾಚ್ಯ ಶಬ್ಧಗಳಿಂದ(ಕಚ್ಚೆ ಹರುಕ) ನಿಂದಿಸಿರುವ ಸಿ.ಟಿ.ರವಿ ತಕ್ಷಣ ಕ್ಷಮೆಯಾಚಿಸಬೇಕು. ಇಲ್ಲವಾದರೆ ಜನ ಪಾಠ ಕಲಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಆಗ್ರಹಿಸಿದ್ದಾರೆ.</p>.<p>ಆಡಳಿತ ಪಕ್ಷದವರ ಭ್ರಷ್ಟಾಚಾರವನ್ನು ಬಯಲಿಗೆಳೆಯುವಾಗ ಲೂಟಿ ಹೊಡೆದಿದ್ದಾರೆ, ದರೋಡೆ ಮಾಡಿದ್ದಾರೆ ಎಂಬ ಪದ ಬಳಸುವುದು ಸಾಮಾನ್ಯ. ಹಿರಿಯ ನಾಯಕ ಸಿದ್ದರಾಮಯ್ಯ ಬಗ್ಗೆ ರವಿ ಈ ರೀತಿ ಪದಪ್ರಯೋಗ ಮಾಡಿರುವುದು ಅವರಿಗೆ ಶೋಭೆ ತರುವುದಿಲ್ಲ. ಇದು ಬಿಜೆಪಿಯವರ ಕೆಟ್ಟ ಸಂಸ್ಕೃತಿ ತೋರಿಸುತ್ತದೆ ಎಂದು ಹೇಳಿದರು.</p>.<p class="Subhead">ಖಾಲಿ ಕುರ್ಚಿ ಎದುರು ಭಾಷಣ:</p>.<p>ದೊಡ್ಡ ಬಳ್ಳಾಪುರದಲ್ಲಿ ನಡೆದ ಬಿಜೆಪಿ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಖಾಲಿ ಕುರ್ಚಿಗಳನ್ನು ಉದ್ದೇಶಿಸಿ ಮಾತನಾಡಿದರು. ಜನರೇ ಇರಲಿಲ್ಲ ಎಂದು ಎಂ.ಬಿ.ಪಾಟೀಲ ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಅವಾಚ್ಯ ಶಬ್ಧಗಳಿಂದ(ಕಚ್ಚೆ ಹರುಕ) ನಿಂದಿಸಿರುವ ಸಿ.ಟಿ.ರವಿ ತಕ್ಷಣ ಕ್ಷಮೆಯಾಚಿಸಬೇಕು. ಇಲ್ಲವಾದರೆ ಜನ ಪಾಠ ಕಲಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಆಗ್ರಹಿಸಿದ್ದಾರೆ.</p>.<p>ಆಡಳಿತ ಪಕ್ಷದವರ ಭ್ರಷ್ಟಾಚಾರವನ್ನು ಬಯಲಿಗೆಳೆಯುವಾಗ ಲೂಟಿ ಹೊಡೆದಿದ್ದಾರೆ, ದರೋಡೆ ಮಾಡಿದ್ದಾರೆ ಎಂಬ ಪದ ಬಳಸುವುದು ಸಾಮಾನ್ಯ. ಹಿರಿಯ ನಾಯಕ ಸಿದ್ದರಾಮಯ್ಯ ಬಗ್ಗೆ ರವಿ ಈ ರೀತಿ ಪದಪ್ರಯೋಗ ಮಾಡಿರುವುದು ಅವರಿಗೆ ಶೋಭೆ ತರುವುದಿಲ್ಲ. ಇದು ಬಿಜೆಪಿಯವರ ಕೆಟ್ಟ ಸಂಸ್ಕೃತಿ ತೋರಿಸುತ್ತದೆ ಎಂದು ಹೇಳಿದರು.</p>.<p class="Subhead">ಖಾಲಿ ಕುರ್ಚಿ ಎದುರು ಭಾಷಣ:</p>.<p>ದೊಡ್ಡ ಬಳ್ಳಾಪುರದಲ್ಲಿ ನಡೆದ ಬಿಜೆಪಿ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಖಾಲಿ ಕುರ್ಚಿಗಳನ್ನು ಉದ್ದೇಶಿಸಿ ಮಾತನಾಡಿದರು. ಜನರೇ ಇರಲಿಲ್ಲ ಎಂದು ಎಂ.ಬಿ.ಪಾಟೀಲ ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>