‘ಗೃಹ ಲಕ್ಷ್ಮಿ ಹಣದಿಂದ ಮಹಿಳೆಯರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಮತ್ತು ಅವರಿಗೆ ಒಳ್ಳೆಯ ಬಟ್ಟೆ ತೊಡಿಸಲು ಸಾಧ್ಯವಾಗಿದೆ. ಅನ್ನಭಾಗ್ಯದಿಂದ ಮೂರು ಹೊತ್ತು ಊಟ ಸಿಗುತ್ತಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ತತ್ತರಿಸಿರುವ ಬಡ, ಮಧ್ಯಮ ಕುಟುಂಬಗಳಿಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಆಸರೆಯಾಗಿವೆ. ಕುಮಾರಸ್ವಾಮಿ ಪ್ರಕಾರ, ಇವೆಲ್ಲವೂ ದಾರಿ ತಪ್ಪಿದಂತೆಯೇ’ ಎಂದು ಅವರು ಪ್ರಶ್ನಿಸಿದರು.