<p><strong>ವಿಜಯಪುರ:</strong> ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಬಿ.ಪಾಟೀಲ್ ಅವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.</p>.<p>ಬೆಂಗಳೂರಿನ ಲೋಕಭವನದಲ್ಲಿ ನಡೆದ ಪ್ರವಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿಶ್ವಗುರು ಬಸವಣ್ಣ ಸೇರಿದಂತೆ ಬಸವಾದಿ ಶರಣರ ಹಾಗೂ ಸಿದ್ದೇಶ್ವರ ಸ್ವಾಮೀಜಿ ಅವರ ಹೆಸರಲ್ಲಿ ಎಂ.ಬಿ.ಪಾಟೀಲ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.</p>.<p>ಮಾಜಿ ಸಚಿವ, ಶಿಕ್ಷಣ ಪ್ರೇಮಿ, ನಿರಂತರ 25 ವರ್ಷಗಳ ಕಾಲ ಕರ್ನಾಟಕ ಶಾಸನ ಸಭೆ ಸದಸ್ಯರಾಗಿದ್ದ ದಿ.ಬಿ.ಎಂ.ಪಾಟೀಲ್ ಅವರ ಜೇಷ್ಠ ಪುತ್ರರಾಗಿರುವ ಎಂ.ಬಿ.ಪಾಟೀಲ್ ವಿಜಯಪುರದಲ್ಲಿ 7 ಅಕ್ಟೋಬರ್ 1964 ರಂದು ಜನಿಸಿ, ಬೆಂಗಳೂರು, ವಿಜಯಪುರದಲ್ಲಿ ತಮ್ಮ ಶಿಕ್ಷಣ ಪಡೆದುಕೊಂಡಿದ್ದಾರೆ. ಬಿ.ಇ. ಸಿವಿಲ್ ಪದವೀಧರರಾಗಿದ್ದಾರೆ.</p>.<p>ತಂದೆ ಬಿ.ಎಂ.ಪಾಟೀಲ್ ಅವರ ಅಕಾಲಿಕ ನಿಧನದ ನಂತರ ಅವರು ಮುನ್ನಡೆಸಿದ ಬಿಜಾಪುರ ಲಿಂಗಾಯತ ಶಿಕ್ಷಣ ಸಂಸ್ಥೆಯ ನೇತೃತ್ವ ವಹಿಸಿಕೊಂಡರು. ಜೊತೆಗೆ ತಂದೆಯವರ ನಿಧನದ ಹಿನ್ನಲೆಯಲ್ಲಿ ತೆರವಾದ ತಿಕೋಟಾ ವಿಧಾನಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಚುನಾಯಿತರಾಗಿ ತಮ್ಮ 26ನೇ ವಯಸ್ಸಿನಲ್ಲಿ (1991-1994) ಶಾಸಕರಾದರು. ನಂತರ 1998 ರಲ್ಲಿ ವಿಜಯಪುರದಿಂದ ಲೋಕಸಭೆ ಸದಸ್ಯರಾಗಿ ಆಯ್ಕೆಗೊಂಡರು.</p>.<p>2004ರಲ್ಲಿ ತಿಕೋಟಾ ಕ್ಷೇತ್ರದಿಂದ ಶಾಸಕರಾದರು. ಕ್ಷೇತ್ರ ಪುನರ್ ವಿಂಗಡನೆಯ ನಂತರ 2008ರಲ್ಲಿ ಬಬಲೇಶ್ವರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. 2013ರಲ್ಲಿ ಬಬಲೇಶ್ವರ ಕ್ಷೇತ್ರದಿಂದ ಶಾಸಕರಾಗಿ ಪುನರ್ ಆಯ್ಕೆಯಾದ ಅವರು ಸಿದ್ಧರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ 5 ವರ್ಷಗಳ ಕಾಲ ಜಲಸಂಪನ್ಮೂಲ ಸಚಿವರಾಗಿ, ನೀರಾವರಿ ಇಲಾಖೆಗೆ ಕಾಯಕಲ್ಪ ಒದಗಿಸಿದ್ದಾರೆ.</p>.<p>ಕೃಷ್ಣಾ ಮೇಲ್ದಂಡೆ ಯೋಜನೆ, ಆಣೆಕಟ್ಟುಗಳ, ನಾಲೆಗಳ ಆಧುನೀಕರಣ, ಭದ್ರಾಮೇಲ್ದಂಡೆ ಯೋಜನೆ, ರಾಮಥಾಳ ಸೂಕ್ಷ್ಮ ನೀರಾವರಿ ಯೋಜನೆ, ಮೆಕೆದಾಟು, ಎತ್ತಿನಹೊಳೆ, ಅತ್ಯಂತ ಎತ್ತರದ ಪ್ರದೇಶಕ್ಕೆ ನೀರಾವರಿ ಒದಗಿಸುವ ತುಬಚಿ-ಬಬಲೇಶ್ವರ ಏತನೀರಾವರಿ, ಆಡಳಿತ ಯಂತ್ರದಲ್ಲಿ ವ್ಯಾಪಕ ಸುಧಾರಣೆಗಳು, ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ರಾಜ್ಯದ ಜಲಸಂಪನ್ಮೂಲ ಇಲಾಖೆಗೆ ಮಾಂತ್ರಿಕ ಸ್ಪರ್ಶ ನೀಡಿದರು. ಈ ಕಾರಣಕ್ಕೆ ಅವರನ್ನು ‘ನೀರಿನ ಪಾಟೀಲ್‘, ‘ಕೆನಾಲ್ ಪಾಟೀಲ್’ ಎಂದೇ ರೈತ ಸಮುದಾಯದಲ್ಲಿ ಹೆಸರಾಗಿದ್ದಾರೆ.</p>.<p>ಕಾವೇರಿ, ಕೃಷ್ಣಾ, ಮಹದಾಯಿ ಅಂತರ ರಾಜ್ಯ ಜಲವಿವಾದಗಳಲ್ಲಿ ಸ್ವತಃ ಸುಪ್ರಿಂಕೋರ್ಟ್ ಕಲಾಪಗಳಲ್ಲಿ ಭಾಗವಹಿಸಿ, ತಮಗೆ ವಹಿಸಿರುವ ಜವಾಬ್ದಾರಿ ನಿರ್ವಹಿಸಿದ್ದಾರೆ. 2018ರಲ್ಲಿ ಬಬಲೇಶ್ವರ ಕ್ಷೇತ್ರದಿಂದ ಪುನರಾಯ್ಕೆಯಾದ ನಂತರ ಸಮ್ಮಿಶ್ರ ಸರ್ಕಾರದಲ್ಲಿ ಎಂ. ಬಿ. ಪಾಟೀಲ ಅವರು ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.</p>.<p>ಗೃಹ ಸಚಿವರಾಗಿ ಅಲ್ಪಾವಧಿಯಲ್ಲಿ ಅಧಿಕಾರದಲ್ಲಿದ್ದರೂ ಪೊಲೀಸ್ ಇಲಾಖೆಯಲ್ಲಿ ಮಹತ್ತರ ಬದಲಾವಣೆ ಗಳನ್ನು ತರಲು ಕಾರಣರಾಗಿದ್ದಾರೆ. ಪೊಲೀಸ್ ಸಿಬ್ಬಂದಿಯ ಕಲ್ಯಾಣಕ್ಕಾಗಿ ಔರಾದ್ಕರ್ ಸಮಿತಿಯ ವರದಿಯನ್ನು ಜಾರಿಗೆ ತರುವಲ್ಲಿ ಗುರುತರ ಪಾತ್ರ ವಹಿಸಿದ್ದಾರೆ. ಈ ವರದಿಯು ಪೊಲೀಸ್ ಸಿಬ್ಬಂದಿಯ ವೇತನದಲ್ಲಿ ಹೆಚ್ಚಳ, ಬಡ್ತಿ ಹಾಗೂ ಇನ್ನಿತರ ಬದಲಾವಣೆಗಳನ್ನು ಶಿಫಾರಸ್ಸು ಮಾಡಿತ್ತು.</p>.<p>ಎಂ.ಬಿ.ಪಾಟೀಲ ಅವರು ಗೃಹ ಮಂತ್ರಿಯಾಗಿ ತಮಗೆ ಲಭ್ಯವಿದ್ದ ಝೀರೋ ಟ್ರಾಫಿಕ್ ಸೌಲಭ್ಯವನ್ನು ನಿರಾಕರಿಸಿದರು. ಗೃಹ ಮಂತ್ರಿಗಳ ಪ್ರಯಾಣದ ಸಂದರ್ಭದಲ್ಲಿ ಅನುಸರಿಸುತ್ತಿದ್ದ ಪೊಲೀಸ್ ವಂದನೆ (ಸಲ್ಯೂಟ್) ಸಂಸ್ಕೃತಿಯನ್ನು ನಿಲ್ಲಿಸಿದರು.</p>.<p>2022 ಫೆಬ್ರುವರಿಯಲ್ಲಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡು, ಕರ್ನಾಟಕದಾದ್ಯಂತ ಸಂಚರಿಸಿ, ಪಕ್ಷವನ್ನು ಸಂಘಟಿಸಿ, 2023 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸಿದ್ದಾರೆ.</p>.<p>2023ರಲ್ಲಿ ಸಿದ್ದರಾಮಯ್ಯನವರ ಸಚಿವ ಸಂಪುಟದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿ 2026 ರವರೆಗೆ ಕಾರ್ಯನಿರ್ವಹಿಸಿದ್ದಾರೆ. ಇದೀಗ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಮತ್ತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.</p>.<p>ಕಳೆದ 32 ವರ್ಷಗಳಿಂದ ಕಟ್ಟಾ ಕಾಂಗ್ರೆಸ್ಸಿಗರಾಗಿ ಪಕ್ಷಕ್ಕೆ ಸೇವೆ ಸಲ್ಲಿಸಿರುವ ಎಂ.ಬಿ.ಪಾಟೀಲ್ ಅವರು ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿದ್ದಾರೆ. ಎರಡು ಬಾರಿ ತಿಕೋಟಾ ಹಾಗೂ ನಾಲ್ಕು ಬಾರಿ ಬಬಲೇಶ್ವರ ಕ್ಷೇತ್ರದಿಂದ ಸೇರಿದಂತೆ ಒಟ್ಟು 6 ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ವಿಜಯಪುರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ.</p>.<p>ಎಂ.ಬಿ.ಪಾಟೀಲ್ ಅವರಿಗೆ ಪತ್ನಿ ಆಶಾ, ಬಸನಗೌಡ ಹಾಗೂ ಧ್ರುವ ಇಬ್ಬರು ಪುತ್ರರು ಇದ್ದಾರೆ. ಇವರ ಸಹೋದರ ಸುನೀಲಗೌಡ ಪಾಟೀಲ ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳ ವಿಧಾನಪರಿಷತ್ ಸದಸ್ಯರಾಗಿದ್ದಾರೆ. ಬಿಜಾಪುರ ಲಿಂಗಾಯತ ಶಿಕ್ಷಣ ಸಂಸ್ಥೆ ಅಧ್ಯಕ್ಷರಾಗಿ ಕಳೆದ 33 ವರ್ಷಗಳಿಂದ ಸುಧೀರ್ಘ ಸೇವೆ ಸಲ್ಲಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-26-1104490924</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಬಿ.ಪಾಟೀಲ್ ಅವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.</p>.<p>ಬೆಂಗಳೂರಿನ ಲೋಕಭವನದಲ್ಲಿ ನಡೆದ ಪ್ರವಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿಶ್ವಗುರು ಬಸವಣ್ಣ ಸೇರಿದಂತೆ ಬಸವಾದಿ ಶರಣರ ಹಾಗೂ ಸಿದ್ದೇಶ್ವರ ಸ್ವಾಮೀಜಿ ಅವರ ಹೆಸರಲ್ಲಿ ಎಂ.ಬಿ.ಪಾಟೀಲ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.</p>.<p>ಮಾಜಿ ಸಚಿವ, ಶಿಕ್ಷಣ ಪ್ರೇಮಿ, ನಿರಂತರ 25 ವರ್ಷಗಳ ಕಾಲ ಕರ್ನಾಟಕ ಶಾಸನ ಸಭೆ ಸದಸ್ಯರಾಗಿದ್ದ ದಿ.ಬಿ.ಎಂ.ಪಾಟೀಲ್ ಅವರ ಜೇಷ್ಠ ಪುತ್ರರಾಗಿರುವ ಎಂ.ಬಿ.ಪಾಟೀಲ್ ವಿಜಯಪುರದಲ್ಲಿ 7 ಅಕ್ಟೋಬರ್ 1964 ರಂದು ಜನಿಸಿ, ಬೆಂಗಳೂರು, ವಿಜಯಪುರದಲ್ಲಿ ತಮ್ಮ ಶಿಕ್ಷಣ ಪಡೆದುಕೊಂಡಿದ್ದಾರೆ. ಬಿ.ಇ. ಸಿವಿಲ್ ಪದವೀಧರರಾಗಿದ್ದಾರೆ.</p>.<p>ತಂದೆ ಬಿ.ಎಂ.ಪಾಟೀಲ್ ಅವರ ಅಕಾಲಿಕ ನಿಧನದ ನಂತರ ಅವರು ಮುನ್ನಡೆಸಿದ ಬಿಜಾಪುರ ಲಿಂಗಾಯತ ಶಿಕ್ಷಣ ಸಂಸ್ಥೆಯ ನೇತೃತ್ವ ವಹಿಸಿಕೊಂಡರು. ಜೊತೆಗೆ ತಂದೆಯವರ ನಿಧನದ ಹಿನ್ನಲೆಯಲ್ಲಿ ತೆರವಾದ ತಿಕೋಟಾ ವಿಧಾನಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಚುನಾಯಿತರಾಗಿ ತಮ್ಮ 26ನೇ ವಯಸ್ಸಿನಲ್ಲಿ (1991-1994) ಶಾಸಕರಾದರು. ನಂತರ 1998 ರಲ್ಲಿ ವಿಜಯಪುರದಿಂದ ಲೋಕಸಭೆ ಸದಸ್ಯರಾಗಿ ಆಯ್ಕೆಗೊಂಡರು.</p>.<p>2004ರಲ್ಲಿ ತಿಕೋಟಾ ಕ್ಷೇತ್ರದಿಂದ ಶಾಸಕರಾದರು. ಕ್ಷೇತ್ರ ಪುನರ್ ವಿಂಗಡನೆಯ ನಂತರ 2008ರಲ್ಲಿ ಬಬಲೇಶ್ವರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. 2013ರಲ್ಲಿ ಬಬಲೇಶ್ವರ ಕ್ಷೇತ್ರದಿಂದ ಶಾಸಕರಾಗಿ ಪುನರ್ ಆಯ್ಕೆಯಾದ ಅವರು ಸಿದ್ಧರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ 5 ವರ್ಷಗಳ ಕಾಲ ಜಲಸಂಪನ್ಮೂಲ ಸಚಿವರಾಗಿ, ನೀರಾವರಿ ಇಲಾಖೆಗೆ ಕಾಯಕಲ್ಪ ಒದಗಿಸಿದ್ದಾರೆ.</p>.<p>ಕೃಷ್ಣಾ ಮೇಲ್ದಂಡೆ ಯೋಜನೆ, ಆಣೆಕಟ್ಟುಗಳ, ನಾಲೆಗಳ ಆಧುನೀಕರಣ, ಭದ್ರಾಮೇಲ್ದಂಡೆ ಯೋಜನೆ, ರಾಮಥಾಳ ಸೂಕ್ಷ್ಮ ನೀರಾವರಿ ಯೋಜನೆ, ಮೆಕೆದಾಟು, ಎತ್ತಿನಹೊಳೆ, ಅತ್ಯಂತ ಎತ್ತರದ ಪ್ರದೇಶಕ್ಕೆ ನೀರಾವರಿ ಒದಗಿಸುವ ತುಬಚಿ-ಬಬಲೇಶ್ವರ ಏತನೀರಾವರಿ, ಆಡಳಿತ ಯಂತ್ರದಲ್ಲಿ ವ್ಯಾಪಕ ಸುಧಾರಣೆಗಳು, ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ರಾಜ್ಯದ ಜಲಸಂಪನ್ಮೂಲ ಇಲಾಖೆಗೆ ಮಾಂತ್ರಿಕ ಸ್ಪರ್ಶ ನೀಡಿದರು. ಈ ಕಾರಣಕ್ಕೆ ಅವರನ್ನು ‘ನೀರಿನ ಪಾಟೀಲ್‘, ‘ಕೆನಾಲ್ ಪಾಟೀಲ್’ ಎಂದೇ ರೈತ ಸಮುದಾಯದಲ್ಲಿ ಹೆಸರಾಗಿದ್ದಾರೆ.</p>.<p>ಕಾವೇರಿ, ಕೃಷ್ಣಾ, ಮಹದಾಯಿ ಅಂತರ ರಾಜ್ಯ ಜಲವಿವಾದಗಳಲ್ಲಿ ಸ್ವತಃ ಸುಪ್ರಿಂಕೋರ್ಟ್ ಕಲಾಪಗಳಲ್ಲಿ ಭಾಗವಹಿಸಿ, ತಮಗೆ ವಹಿಸಿರುವ ಜವಾಬ್ದಾರಿ ನಿರ್ವಹಿಸಿದ್ದಾರೆ. 2018ರಲ್ಲಿ ಬಬಲೇಶ್ವರ ಕ್ಷೇತ್ರದಿಂದ ಪುನರಾಯ್ಕೆಯಾದ ನಂತರ ಸಮ್ಮಿಶ್ರ ಸರ್ಕಾರದಲ್ಲಿ ಎಂ. ಬಿ. ಪಾಟೀಲ ಅವರು ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.</p>.<p>ಗೃಹ ಸಚಿವರಾಗಿ ಅಲ್ಪಾವಧಿಯಲ್ಲಿ ಅಧಿಕಾರದಲ್ಲಿದ್ದರೂ ಪೊಲೀಸ್ ಇಲಾಖೆಯಲ್ಲಿ ಮಹತ್ತರ ಬದಲಾವಣೆ ಗಳನ್ನು ತರಲು ಕಾರಣರಾಗಿದ್ದಾರೆ. ಪೊಲೀಸ್ ಸಿಬ್ಬಂದಿಯ ಕಲ್ಯಾಣಕ್ಕಾಗಿ ಔರಾದ್ಕರ್ ಸಮಿತಿಯ ವರದಿಯನ್ನು ಜಾರಿಗೆ ತರುವಲ್ಲಿ ಗುರುತರ ಪಾತ್ರ ವಹಿಸಿದ್ದಾರೆ. ಈ ವರದಿಯು ಪೊಲೀಸ್ ಸಿಬ್ಬಂದಿಯ ವೇತನದಲ್ಲಿ ಹೆಚ್ಚಳ, ಬಡ್ತಿ ಹಾಗೂ ಇನ್ನಿತರ ಬದಲಾವಣೆಗಳನ್ನು ಶಿಫಾರಸ್ಸು ಮಾಡಿತ್ತು.</p>.<p>ಎಂ.ಬಿ.ಪಾಟೀಲ ಅವರು ಗೃಹ ಮಂತ್ರಿಯಾಗಿ ತಮಗೆ ಲಭ್ಯವಿದ್ದ ಝೀರೋ ಟ್ರಾಫಿಕ್ ಸೌಲಭ್ಯವನ್ನು ನಿರಾಕರಿಸಿದರು. ಗೃಹ ಮಂತ್ರಿಗಳ ಪ್ರಯಾಣದ ಸಂದರ್ಭದಲ್ಲಿ ಅನುಸರಿಸುತ್ತಿದ್ದ ಪೊಲೀಸ್ ವಂದನೆ (ಸಲ್ಯೂಟ್) ಸಂಸ್ಕೃತಿಯನ್ನು ನಿಲ್ಲಿಸಿದರು.</p>.<p>2022 ಫೆಬ್ರುವರಿಯಲ್ಲಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡು, ಕರ್ನಾಟಕದಾದ್ಯಂತ ಸಂಚರಿಸಿ, ಪಕ್ಷವನ್ನು ಸಂಘಟಿಸಿ, 2023 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸಿದ್ದಾರೆ.</p>.<p>2023ರಲ್ಲಿ ಸಿದ್ದರಾಮಯ್ಯನವರ ಸಚಿವ ಸಂಪುಟದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿ 2026 ರವರೆಗೆ ಕಾರ್ಯನಿರ್ವಹಿಸಿದ್ದಾರೆ. ಇದೀಗ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಮತ್ತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.</p>.<p>ಕಳೆದ 32 ವರ್ಷಗಳಿಂದ ಕಟ್ಟಾ ಕಾಂಗ್ರೆಸ್ಸಿಗರಾಗಿ ಪಕ್ಷಕ್ಕೆ ಸೇವೆ ಸಲ್ಲಿಸಿರುವ ಎಂ.ಬಿ.ಪಾಟೀಲ್ ಅವರು ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿದ್ದಾರೆ. ಎರಡು ಬಾರಿ ತಿಕೋಟಾ ಹಾಗೂ ನಾಲ್ಕು ಬಾರಿ ಬಬಲೇಶ್ವರ ಕ್ಷೇತ್ರದಿಂದ ಸೇರಿದಂತೆ ಒಟ್ಟು 6 ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ವಿಜಯಪುರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ.</p>.<p>ಎಂ.ಬಿ.ಪಾಟೀಲ್ ಅವರಿಗೆ ಪತ್ನಿ ಆಶಾ, ಬಸನಗೌಡ ಹಾಗೂ ಧ್ರುವ ಇಬ್ಬರು ಪುತ್ರರು ಇದ್ದಾರೆ. ಇವರ ಸಹೋದರ ಸುನೀಲಗೌಡ ಪಾಟೀಲ ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳ ವಿಧಾನಪರಿಷತ್ ಸದಸ್ಯರಾಗಿದ್ದಾರೆ. ಬಿಜಾಪುರ ಲಿಂಗಾಯತ ಶಿಕ್ಷಣ ಸಂಸ್ಥೆ ಅಧ್ಯಕ್ಷರಾಗಿ ಕಳೆದ 33 ವರ್ಷಗಳಿಂದ ಸುಧೀರ್ಘ ಸೇವೆ ಸಲ್ಲಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-26-1104490924</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>