<p><strong>ವಿಜಯಪುರ:</strong> ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಜುಲೈ 11ರಿಂದ 14ರ ವರೆಗೆ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.</p>.<p>ಜುಲೈ 11ರಂದು ಬೆಳಿಗ್ಗೆ 10.30ಕ್ಕೆ ತಿಕೋಟಾ ತಾಲ್ಲೂಕಿನ ಕೊರಬು ಗಲ್ಲಿ ₹ 4.95 ಕೋಟಿ ವೆಚ್ಚದಲ್ಲಿ ತುಬಚಿ ಬಬಲೇಶ್ವರ ಏತನೀರಾವರಿ ಯೋಜನೆಯ ಡಿ.ಸಿ-2 ರಿಂದ ಜಂಕ್ಷನ್ ವರೆಗೆ ವಯಾ ತಿಕೋಟಾ ಕೆರೆ ಮತ್ತು ಕೊರಬು ಗಲ್ಲಿ ಮಸೂತಿ ವರೆಗೆ 5 ಕಿ.ಮೀ ರಸ್ತೆ ಸುಧಾರಣೆ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.</p>.<p>ಬಳಿಕ ಮಧ್ಯಾಹ್ನ 12ಕ್ಕೆ ₹4.95 ಕೋಟಿ ವೆಚ್ಚದಲ್ಲಿ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆಯವರೆಗೆ 5.2 ಕಿ.ಮೀ ವಯಾ ಉತ್ತರ ಕಾಲುವೆ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಲಿದ್ದಾರೆ.</p>.<p>ಜುಲೈ 12ರಂದು ಬೆಳಿಗ್ಗೆ 10ಕ್ಕೆ ವಿಜಯಪುರ ನಗರದ ಜಾಮಿಯಾ ಮಸೀದಿ ರಸ್ತೆಯ ರೊಡಗಿಮಡ್ಡಿ ಖಬರಸ್ಥಾನ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ₹2 ಕೋಟಿ ವೆಚ್ಚದಲ್ಲಿ ಕೋಟೆಗೋಡೆ ಕಂದಕ, ಮನಗೂಳಿ ಅಗಸಿಯಿಂದ ಕಸ್ತೂರಿ ಕಾಲೊನಿವರೆಗೆ ಹಾಗೂ ₹1 ಕೋಟಿ ವೆಚ್ಚದಲ್ಲಿ ರೊಡಗಿಮಡ್ಡಿ ಖಬರಸ್ಥಾನದಿಂದ ಸಿಂದಗಿ ರಸ್ತೆಯ ರೈಲ್ವೆ ಸೇತುವೆವರೆಗಿನ ಕಂದಕದಲ್ಲಿನ ಹೂಳು ತೆಗೆಯುವುದು ಹಾಗೂ ಪ್ರವಾಸ ನಿಯಂತ್ರಣ ಕಾಮಗಾರಿಗಳಿಗೆ ಚಾಲನೆ ನೀಡುವರು.</p>.<p>ನಂತರ ಬೆಳಿಗ್ಗೆ 10.30ಕ್ಕೆ ಇಂಡಿ ರಸ್ತೆ ಶಹಾಪೇಟ ಓಣಿ ಯಲ್ಲಮ್ಮ ದೇವಸ್ಥಾನದ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ₹ 2 ಕೋಟಿ ವೆಚ್ಚದಲ್ಲಿ ಶಹಾಪೇಟೆ, ಸುಣಗಾರ ಗಲ್ಲಿಯಿಂದ ಸ್ಟೇಷನ್ ಹಿಂದಿನ ರಸ್ತೆ ಮೂಲಕ ಅಪ್ಸರಾ ಥೇಟರ್ ವರೆಗೆ ಮಳೆನೀರು ಚರಂಡಿ ಕಾಮಗಾರಿ ಮತ್ತು ಪ್ರವಾಹ ನಿಯಂತ್ರಣ ಕಾಮಗಾರಿಗೆ ಚಾಲನೆ ನೀಡುವರು.</p>.<p>13 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಬಿ.ಎಂ.ಪಾಟೀಲ ರಸ್ತೆ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಲಿದ್ದಾರೆ.</p>.<p>ಜುಲೈ14 ರಂದು ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳೊಂದಿಗೆ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಜುಲೈ 11ರಿಂದ 14ರ ವರೆಗೆ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.</p>.<p>ಜುಲೈ 11ರಂದು ಬೆಳಿಗ್ಗೆ 10.30ಕ್ಕೆ ತಿಕೋಟಾ ತಾಲ್ಲೂಕಿನ ಕೊರಬು ಗಲ್ಲಿ ₹ 4.95 ಕೋಟಿ ವೆಚ್ಚದಲ್ಲಿ ತುಬಚಿ ಬಬಲೇಶ್ವರ ಏತನೀರಾವರಿ ಯೋಜನೆಯ ಡಿ.ಸಿ-2 ರಿಂದ ಜಂಕ್ಷನ್ ವರೆಗೆ ವಯಾ ತಿಕೋಟಾ ಕೆರೆ ಮತ್ತು ಕೊರಬು ಗಲ್ಲಿ ಮಸೂತಿ ವರೆಗೆ 5 ಕಿ.ಮೀ ರಸ್ತೆ ಸುಧಾರಣೆ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.</p>.<p>ಬಳಿಕ ಮಧ್ಯಾಹ್ನ 12ಕ್ಕೆ ₹4.95 ಕೋಟಿ ವೆಚ್ಚದಲ್ಲಿ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆಯವರೆಗೆ 5.2 ಕಿ.ಮೀ ವಯಾ ಉತ್ತರ ಕಾಲುವೆ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಲಿದ್ದಾರೆ.</p>.<p>ಜುಲೈ 12ರಂದು ಬೆಳಿಗ್ಗೆ 10ಕ್ಕೆ ವಿಜಯಪುರ ನಗರದ ಜಾಮಿಯಾ ಮಸೀದಿ ರಸ್ತೆಯ ರೊಡಗಿಮಡ್ಡಿ ಖಬರಸ್ಥಾನ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ₹2 ಕೋಟಿ ವೆಚ್ಚದಲ್ಲಿ ಕೋಟೆಗೋಡೆ ಕಂದಕ, ಮನಗೂಳಿ ಅಗಸಿಯಿಂದ ಕಸ್ತೂರಿ ಕಾಲೊನಿವರೆಗೆ ಹಾಗೂ ₹1 ಕೋಟಿ ವೆಚ್ಚದಲ್ಲಿ ರೊಡಗಿಮಡ್ಡಿ ಖಬರಸ್ಥಾನದಿಂದ ಸಿಂದಗಿ ರಸ್ತೆಯ ರೈಲ್ವೆ ಸೇತುವೆವರೆಗಿನ ಕಂದಕದಲ್ಲಿನ ಹೂಳು ತೆಗೆಯುವುದು ಹಾಗೂ ಪ್ರವಾಸ ನಿಯಂತ್ರಣ ಕಾಮಗಾರಿಗಳಿಗೆ ಚಾಲನೆ ನೀಡುವರು.</p>.<p>ನಂತರ ಬೆಳಿಗ್ಗೆ 10.30ಕ್ಕೆ ಇಂಡಿ ರಸ್ತೆ ಶಹಾಪೇಟ ಓಣಿ ಯಲ್ಲಮ್ಮ ದೇವಸ್ಥಾನದ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ₹ 2 ಕೋಟಿ ವೆಚ್ಚದಲ್ಲಿ ಶಹಾಪೇಟೆ, ಸುಣಗಾರ ಗಲ್ಲಿಯಿಂದ ಸ್ಟೇಷನ್ ಹಿಂದಿನ ರಸ್ತೆ ಮೂಲಕ ಅಪ್ಸರಾ ಥೇಟರ್ ವರೆಗೆ ಮಳೆನೀರು ಚರಂಡಿ ಕಾಮಗಾರಿ ಮತ್ತು ಪ್ರವಾಹ ನಿಯಂತ್ರಣ ಕಾಮಗಾರಿಗೆ ಚಾಲನೆ ನೀಡುವರು.</p>.<p>13 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಬಿ.ಎಂ.ಪಾಟೀಲ ರಸ್ತೆ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಲಿದ್ದಾರೆ.</p>.<p>ಜುಲೈ14 ರಂದು ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳೊಂದಿಗೆ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>