ಬರದ ಬೀಡಾಗಿದ್ದ ಸಂಗಾಪುರ ಎಸ್. ಎಚ್. ಗ್ರಾಮಕ್ಕೆ ಎಂ. ಬಿ. ಪಾಟೀಲರು ಜಲಸಂಪನ್ಮೂಲ ಸಚಿವರಾಗಿ ಮಾಡಿರುವ ನೀರಾವರಿ ಕೆಲಸಗಳಿಂದ ಈಗ ಸಮೃದ್ಧಿಯ ನಾಡಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ರೈತರು, ಕೂಲಿಕಾರ್ಮಿಕರು ಸೇರಿದಂತೆ ಪಕ್ಷಾತೀತವಾಗಿ 300ಕ್ಕೂ ಹೆಚ್ಚು ಜನ ಸ್ವಯಂ ಪ್ರೇರಿತರಾಗಿ ₹18 ಲಕ್ಷ ದೇಣಿಗೆ ಸಂಗ್ರಹಿಸಿ, ಕಂಚಿನ ಪುತ್ಥಳಿ ನಿರ್ಮಿಸಿದ್ದೇವೆ ಎಂದು ಗ್ರಾಮದ ಮುಖಂಡರಾದ ರಮೇಶ ಬಡ್ರಿ, ಮಲ್ಲು ದಳವಾಯಿ, ಬಸವರಾಜ ಬಡ್ರಿ, ಈರಪ್ಪ ಚೀರಲದಿನ್ನಿ ಸಂಗಪ್ಪ ಗಿರಗಾವಿ, ರಮೇಶ ಬರಗಿ ತಿಳಿಸಿದ್ದಾರೆ.