<p><strong>ವಿಜಯಪುರ</strong>: ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 149 ಎಕರೆ ಜಮೀನು ಇದೆ. ಅಲ್ಲಿ ಸರ್ಕಾರಿ ಆಸ್ಪತ್ರೆ ಉತ್ತಮವಾಗಿದ್ದು, ವೈದ್ಯಕೀಯ ಕಾಲೇಜು ಸ್ಥಾಪಿಸಿದರೆ ಬಡವರ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಸಹಾಯವಾಗುತ್ತದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಅಪ್ಪುಗೌಡ ಪಾಟೀಲ ಮನಗೂಳಿ ಹೇಳಿದರು.</p>.<p>ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯಿಂದ ನಗರದಲ್ಲಿ ನಡೆಯುತ್ತಿರುವ ಧರಣಿಗೆ ಬುಧವಾರ ಬೆಂಬಲ ವ್ಯಕ್ತಪಡಿಸಿ ಅವರು ಮಾತನಾಡಿದರು.</p>.<p>ನಮ್ಮ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವಲ್ಲಿ ನಮ್ಮ ಸಂಸದರು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ನಮ್ಮ ಜಿಲ್ಲೆಯಲ್ಲಿ ಬಡವರು, ಹಿಂದುಳಿದವರು ಇರುವುದರಿಂದ ಅತಿಹೆಚ್ಚು ಶುಲ್ಕ ಕೊಟ್ಟು ವೈದ್ಯಕೀಯ ಶಿಕ್ಷಣ ಪಡೆಯಲು ಕಷ್ಟವಾಗುತ್ತದೆ. ಎಲ್ಲಾ ಮಕ್ಕಳು ಉಚಿತ ಶಿಕ್ಷಣ ಪಡೆಯುವಂತಾಗಬೇಕು ಎಂದರು.</p>.<p>ಹೋರಾಟಕ್ಕೆ ಜೆಡಿಎಸ್ ಸಂಪೂರ್ಣ ಬೆಂಬಲ ಇದೆ. ಮುಂದಿನ ಹೋರಾಟದಲ್ಲಿ ಪಕ್ಷ ಜೊತೆ ಇರುತ್ತದೆ ಎಂದು ಹೇಳಿದರು.</p>.<p>ಉತ್ತರ ಕರ್ನಾಟಕದ ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷ ಶಂಕರಗೌಡ ಬಿರಾದಾರ ಮಾತನಾಡಿ, ಸರ್ಕಾರ ಅತೀ ಶೀಘ್ರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಸರ್ಕಾರ ಜಾಗವಿಲ್ಲದ ಜಿಲ್ಲೆಗಳಿಗೆ ಸಾವಿರಾರು ಕೋಟಿ ಅನುದಾನ ನೀಡಿ ವೈದ್ಯಕೀಯ ಕಾಲೇಜು ಮಾಡಲು ಅವಕಾಶ ಮಾಡಿಕೊಡುತ್ತಾರೆ. ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ವಿಜಯಪುರ ಜಿಲ್ಲೆಗೆ ದ್ರೋಹ ಬಗೆಯುತ್ತಿದ್ದಾರೆ. ಇದನ್ನು ಸಂಪೂರ್ಣವಾಗಿ ನಾವು ವಿರೋಧಿಸುತ್ತೇವೆ ಎಂದು ಹೇಳಿದರು.</p>.<p>ಮುಖಂಡರಾದ ಸಲೀಂ ನಾಗಠಾಣ, ಮೆಹಬೂಬ ಚೌದರಿ, ಪ್ರಕಾಶ ಸಬರದ, ಕೆ.ಆರ್. ಪೂಜಾರಿ, ಟಿಪ್ಪು ಮೇಲಿನಮನಿ, ರಾಜು ಮೇತ್ರಿ, ಈರಣ್ಣ ಹೂನಳ್ಳಿ, ಹುಸೇನಸಾಬ್, ಈರಪ್ಪ ಮೋಬಿ, ಶಶಿಧರ ನಾಯ್ಕೋಡಿ, ಹೋರಾಟ ಸಮಿತಿ ಸದಸ್ಯರು ಧರಣಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 149 ಎಕರೆ ಜಮೀನು ಇದೆ. ಅಲ್ಲಿ ಸರ್ಕಾರಿ ಆಸ್ಪತ್ರೆ ಉತ್ತಮವಾಗಿದ್ದು, ವೈದ್ಯಕೀಯ ಕಾಲೇಜು ಸ್ಥಾಪಿಸಿದರೆ ಬಡವರ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಸಹಾಯವಾಗುತ್ತದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಅಪ್ಪುಗೌಡ ಪಾಟೀಲ ಮನಗೂಳಿ ಹೇಳಿದರು.</p>.<p>ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯಿಂದ ನಗರದಲ್ಲಿ ನಡೆಯುತ್ತಿರುವ ಧರಣಿಗೆ ಬುಧವಾರ ಬೆಂಬಲ ವ್ಯಕ್ತಪಡಿಸಿ ಅವರು ಮಾತನಾಡಿದರು.</p>.<p>ನಮ್ಮ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವಲ್ಲಿ ನಮ್ಮ ಸಂಸದರು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ನಮ್ಮ ಜಿಲ್ಲೆಯಲ್ಲಿ ಬಡವರು, ಹಿಂದುಳಿದವರು ಇರುವುದರಿಂದ ಅತಿಹೆಚ್ಚು ಶುಲ್ಕ ಕೊಟ್ಟು ವೈದ್ಯಕೀಯ ಶಿಕ್ಷಣ ಪಡೆಯಲು ಕಷ್ಟವಾಗುತ್ತದೆ. ಎಲ್ಲಾ ಮಕ್ಕಳು ಉಚಿತ ಶಿಕ್ಷಣ ಪಡೆಯುವಂತಾಗಬೇಕು ಎಂದರು.</p>.<p>ಹೋರಾಟಕ್ಕೆ ಜೆಡಿಎಸ್ ಸಂಪೂರ್ಣ ಬೆಂಬಲ ಇದೆ. ಮುಂದಿನ ಹೋರಾಟದಲ್ಲಿ ಪಕ್ಷ ಜೊತೆ ಇರುತ್ತದೆ ಎಂದು ಹೇಳಿದರು.</p>.<p>ಉತ್ತರ ಕರ್ನಾಟಕದ ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷ ಶಂಕರಗೌಡ ಬಿರಾದಾರ ಮಾತನಾಡಿ, ಸರ್ಕಾರ ಅತೀ ಶೀಘ್ರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಸರ್ಕಾರ ಜಾಗವಿಲ್ಲದ ಜಿಲ್ಲೆಗಳಿಗೆ ಸಾವಿರಾರು ಕೋಟಿ ಅನುದಾನ ನೀಡಿ ವೈದ್ಯಕೀಯ ಕಾಲೇಜು ಮಾಡಲು ಅವಕಾಶ ಮಾಡಿಕೊಡುತ್ತಾರೆ. ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ವಿಜಯಪುರ ಜಿಲ್ಲೆಗೆ ದ್ರೋಹ ಬಗೆಯುತ್ತಿದ್ದಾರೆ. ಇದನ್ನು ಸಂಪೂರ್ಣವಾಗಿ ನಾವು ವಿರೋಧಿಸುತ್ತೇವೆ ಎಂದು ಹೇಳಿದರು.</p>.<p>ಮುಖಂಡರಾದ ಸಲೀಂ ನಾಗಠಾಣ, ಮೆಹಬೂಬ ಚೌದರಿ, ಪ್ರಕಾಶ ಸಬರದ, ಕೆ.ಆರ್. ಪೂಜಾರಿ, ಟಿಪ್ಪು ಮೇಲಿನಮನಿ, ರಾಜು ಮೇತ್ರಿ, ಈರಣ್ಣ ಹೂನಳ್ಳಿ, ಹುಸೇನಸಾಬ್, ಈರಪ್ಪ ಮೋಬಿ, ಶಶಿಧರ ನಾಯ್ಕೋಡಿ, ಹೋರಾಟ ಸಮಿತಿ ಸದಸ್ಯರು ಧರಣಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>