<p><strong>ವಿಜಯಪುರ</strong>: ‘ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ಬದಲಿಸಿ, ರಾಮನ ಹೆಸರನ್ನು ಇಟ್ಟಿರುವುದು ಸರಿಯಲ್ಲ. ರಾಮನ ಹೆಸರಿಟ್ಟಿರುವ ಕಾರಣಕ್ಕಾದರೂ ಯೋಜನೆಯನ್ನು ಬಲಿಷ್ಠಗೊಳಿಸಬೇಕಿತ್ತು. ಆದರೆ, ರಾಮನ ಹೆಸರಲ್ಲಿ ಯೋಜನೆಯನ್ನು ಬಲಹೀನಗೊಳಿಸಿ, ನಿರ್ನಾಮ ಮಾಡಲು ಪ್ರಧಾನಿ ಮೋದಿ ಹೊರಟಿದ್ದಾರೆ’ ಎಂದು ಸಚಿವ ಎಂ.ಬಿ.ಪಾಟೀಲ ಆರೋಪಿಸಿದರು.</p><p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದ್ವೇಷ ಭಾಷಣ ವಿದೇಯಕವನ್ನು ಬಿಜೆಪಿಯವರು ವಿರೋಧಿಸುತ್ತಿರುವುದು ಏಕೆ ಎಂಬುದು ತಿಳಿಯುತ್ತಿಲ್ಲ. ಈ ವಿದೇಯಕ ಕೇವಲ ಬಿಜೆಪಿಯವರಿಗಲ್ಲ, ಕಾಂಗ್ರೆಸಿನವರಿಗೂ ಅನ್ವಯಿಸುತ್ತದೆ. ಕುಂಬಳಕಾಯಿ ಕಳ್ಳ ಎಂದಾಕ್ಷಣ ಹೆಗಲು ಮುಟ್ಟಿಕೊಳ್ಳುವುದು ಏಕೆ? ದ್ವೇಷ ಭಾಷಣ ಮಾಡಿ, ಸಮಾಜದ ಶಾಂತಿ ಕೆಡಿಸುವವರನ್ನು ನಿಯಂತ್ರಿಸಲು ಈ ಕಾನೂನಿನಿಂದ ಅನುಕೂಲವಾಗಲಿದೆ’ ಎಂದರು. </p><p><strong>ಕಬ್ಬು ಬೆಳೆಗಾರರಿಗೆ ಮೋಸ: </strong>‘ಪ್ರತಿ ಟನ್ ಕಬ್ಬಿಗೆ ಕೇಂದ್ರ ಸರ್ಕಾರ ₹3550 ನಿಗದಿ ಮಾಡಿದೆ. ಆದರೆ, ಇದರಲ್ಲಿ ₹700 ರಿಂದ ₹800 ಕಟಾವು ಮತ್ತು ಸಾಗಾಟ(ಎಚ್ ಅಂಡ್ ಟಿ)ಕ್ಕೆ ಸೇರಿದೆ. ಇದನ್ನು ಕಳೆದರೆ ರೈತರಿಗೆ ಪ್ರತಿ ಟನ್ಗೆ ಸಿಗುವುದು ₹2750 ಮಾತ್ರ. ಇದು ರೈತರಿಗೆ ಮೋದಿ ಸರ್ಕಾರ ನೀಡುವ ದರ. ಇದನ್ನು ರೈತರು, ರೈತ ಹೋರಾಟಗಾರರು ಅರ್ಥ ಮಾಡಿಕೊಳ್ಳಬೇಕು’ ಎಂದು ಹೇಳಿದರು.</p><p>‘ಎಥೆನಾಲ್ ಉತ್ಪಾದನೆಗೆ ಕೇಂದ್ರ ಸರ್ಕಾರ ಉತ್ತೇಜನ ನೀಡಿ, ದೊಡ್ಡ ಮಟ್ಟದ ಪ್ರಚಾರ ಮಾಡಿತು. ಆದರೆ, ಕಾರ್ಖಾನೆಗಳಿಂದ ಉತ್ಪಾದನೆಯಾದ ಅರ್ಧದಷ್ಟು ಖರೀದಿಸದೇ ಮೋಸ ಮಾಡಿದೆ. ಇದರ ಪರಿಣಾಮ ರೈತರು, ಕಾರ್ಖಾನೆಯವರು ಅನುಭವಿಸುವಂತಾಗಿದೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ‘ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ಬದಲಿಸಿ, ರಾಮನ ಹೆಸರನ್ನು ಇಟ್ಟಿರುವುದು ಸರಿಯಲ್ಲ. ರಾಮನ ಹೆಸರಿಟ್ಟಿರುವ ಕಾರಣಕ್ಕಾದರೂ ಯೋಜನೆಯನ್ನು ಬಲಿಷ್ಠಗೊಳಿಸಬೇಕಿತ್ತು. ಆದರೆ, ರಾಮನ ಹೆಸರಲ್ಲಿ ಯೋಜನೆಯನ್ನು ಬಲಹೀನಗೊಳಿಸಿ, ನಿರ್ನಾಮ ಮಾಡಲು ಪ್ರಧಾನಿ ಮೋದಿ ಹೊರಟಿದ್ದಾರೆ’ ಎಂದು ಸಚಿವ ಎಂ.ಬಿ.ಪಾಟೀಲ ಆರೋಪಿಸಿದರು.</p><p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದ್ವೇಷ ಭಾಷಣ ವಿದೇಯಕವನ್ನು ಬಿಜೆಪಿಯವರು ವಿರೋಧಿಸುತ್ತಿರುವುದು ಏಕೆ ಎಂಬುದು ತಿಳಿಯುತ್ತಿಲ್ಲ. ಈ ವಿದೇಯಕ ಕೇವಲ ಬಿಜೆಪಿಯವರಿಗಲ್ಲ, ಕಾಂಗ್ರೆಸಿನವರಿಗೂ ಅನ್ವಯಿಸುತ್ತದೆ. ಕುಂಬಳಕಾಯಿ ಕಳ್ಳ ಎಂದಾಕ್ಷಣ ಹೆಗಲು ಮುಟ್ಟಿಕೊಳ್ಳುವುದು ಏಕೆ? ದ್ವೇಷ ಭಾಷಣ ಮಾಡಿ, ಸಮಾಜದ ಶಾಂತಿ ಕೆಡಿಸುವವರನ್ನು ನಿಯಂತ್ರಿಸಲು ಈ ಕಾನೂನಿನಿಂದ ಅನುಕೂಲವಾಗಲಿದೆ’ ಎಂದರು. </p><p><strong>ಕಬ್ಬು ಬೆಳೆಗಾರರಿಗೆ ಮೋಸ: </strong>‘ಪ್ರತಿ ಟನ್ ಕಬ್ಬಿಗೆ ಕೇಂದ್ರ ಸರ್ಕಾರ ₹3550 ನಿಗದಿ ಮಾಡಿದೆ. ಆದರೆ, ಇದರಲ್ಲಿ ₹700 ರಿಂದ ₹800 ಕಟಾವು ಮತ್ತು ಸಾಗಾಟ(ಎಚ್ ಅಂಡ್ ಟಿ)ಕ್ಕೆ ಸೇರಿದೆ. ಇದನ್ನು ಕಳೆದರೆ ರೈತರಿಗೆ ಪ್ರತಿ ಟನ್ಗೆ ಸಿಗುವುದು ₹2750 ಮಾತ್ರ. ಇದು ರೈತರಿಗೆ ಮೋದಿ ಸರ್ಕಾರ ನೀಡುವ ದರ. ಇದನ್ನು ರೈತರು, ರೈತ ಹೋರಾಟಗಾರರು ಅರ್ಥ ಮಾಡಿಕೊಳ್ಳಬೇಕು’ ಎಂದು ಹೇಳಿದರು.</p><p>‘ಎಥೆನಾಲ್ ಉತ್ಪಾದನೆಗೆ ಕೇಂದ್ರ ಸರ್ಕಾರ ಉತ್ತೇಜನ ನೀಡಿ, ದೊಡ್ಡ ಮಟ್ಟದ ಪ್ರಚಾರ ಮಾಡಿತು. ಆದರೆ, ಕಾರ್ಖಾನೆಗಳಿಂದ ಉತ್ಪಾದನೆಯಾದ ಅರ್ಧದಷ್ಟು ಖರೀದಿಸದೇ ಮೋಸ ಮಾಡಿದೆ. ಇದರ ಪರಿಣಾಮ ರೈತರು, ಕಾರ್ಖಾನೆಯವರು ಅನುಭವಿಸುವಂತಾಗಿದೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>