ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಕೋವಿಡ್ ಪ್ಯಾಕೇಜ್‍ಗೆ ಬಿಸಿಯೂಟ ನೌಕರರ ಆಗ್ರಹ

Last Updated 18 ಜೂನ್ 2021, 11:16 IST
ಅಕ್ಷರ ಗಾತ್ರ

ವಿಜಯಪುರ:ಕೋವಿಡ್ ಪ್ಯಾಕೇಜ್‍ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ ನಡೆಸಿದರು.

ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿದ ಕೋವಿಡ್‌ ಪರಿಹಾರ ಪ್ಯಾಕೇಜ್‌ ಅನ್ನು ಬಿಸಿಯೂಟ ನೌಕರರಿಗೆ ನೀಡಬೇಕು, ಜೀವನ ಯೋಗ್ಯ ವೇತನ ನೀಡಬೇಕು,ವಾರ್ಷಿಕ 12 ತಿಂಗಳ ವೇತನ ಪಾವತಿಸಬೇಕು,ಶಾಲೆಯ ಪ್ರಾರಂಭಕ್ಕೂ ಮುನ್ನ ನೌಕರರಿಗೆ ಉಚಿತ ಲಸಿಕೆ ನೀಡಬೇಕು ಹಾಗೂಸೇವಾ ಭದ್ರತೆ, ಆರೋಗ್ಯ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಎಚ್ ಟಿ, ಸಂಘಟನಾಕಾರರಾದ ಶಶಿಕಲಾ ಮ್ಯಾಗೆರಿ, ಗಂಗೂಬಾಯಿ ಉಳ್ಳಾಗಡ್ಡಿ, ಬಸಮ್ಮ ಆಲಮಟ್ಟಿ, ಜಿಲ್ಲೆಯ ವಿವಿಧ ಕಾರ್ಮಿಕರು ಆನ್‌ಲೈನ್‌ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT