<p><strong>ವಿಜಯಪುರ</strong>: ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿರುವುದನ್ನು ಸರ್ಕಾರ ಕೆ.ಎಂ.ಎಫ್ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ( ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ಭಗವಾನರೆಡ್ಡಿ ಆಗ್ರಹಿಸಿದ್ದಾರೆ.</p>.<p>ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ರಾಜ್ಯದಲ್ಲಿ ಪ್ರತಿದಿನ 1 ಕೋಟಿ ಲೀಟರ್ ಹೆಚ್ಚು ಹಾಲು ಸಂಗ್ರಹವಾಗುತ್ತಿದ್ದು, ಉತ್ಪಾದಕರಿಂದ ಈ ಹಾಲನ್ನು ಖರೀದಿಸಬೇಕಾಗಿದೆ. ಜನರಿಗೆ 50 ಎಂಎಲ್ ಹೆಚ್ಚು ತಲುಪಿಸಿ, ಹೆಚ್ಚುವರಿ ₹2 ಸಂಗ್ರಹಿಸಲಾಗುತ್ತಿದೆ ಎಂದು ಕೆಎಂಎಫ್ ಹೇಳುತ್ತಿದೆ. ಜನರಿಗೆ ಇದು ‘ಉಗುಳಲೂ ಆಗದ ನುಂಗಲೂ ಆಗದ ಬಿಸಿ ತುಪ್ಪ’ವಾಗಿ ಪರಿಣಮಿಸಿದೆ.</p>.<p>ಪೆಟ್ರೋಲ್, ಡೀಸೆಲ್ ದರ ಹೆಚ್ಚಾಗಿದೆ, ತರಕಾರಿ ಹಾಗೂ ಇನ್ನಿತರ ಅಗತ್ಯ ವಸ್ತುಗಳ ದರ ಕೈಗೆ ನಿಲುಕುತ್ತಿಲ್ಲ. ಹಾಲಿನ ದರ ಏರಿಕೆ ಜನರನ್ನು ಮತ್ತಷ್ಟು ಕಷ್ಟಕ್ಕೆ ದೂಡಲಿದೆ. ಹಾಗಾಗಿ ಸರ್ಕಾರ ಹಾಲಿನ ದರ ಹೆಚ್ಚಿಸದೆ ಸಂಗ್ರಹವಾದ ಹೆಚ್ಚುವರಿ 1 ಕೋಟಿ ಲೀಟರ್ ಹಾಲಿಗೆ ಸಬ್ಸಿಡಿ ನೀಡಬೇಕು ಮತ್ತು ರಿಯಾಯಿತಿ ದರದಲ್ಲಿ ಬಡಜನರಿಗೆ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿರುವುದನ್ನು ಸರ್ಕಾರ ಕೆ.ಎಂ.ಎಫ್ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ( ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ಭಗವಾನರೆಡ್ಡಿ ಆಗ್ರಹಿಸಿದ್ದಾರೆ.</p>.<p>ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ರಾಜ್ಯದಲ್ಲಿ ಪ್ರತಿದಿನ 1 ಕೋಟಿ ಲೀಟರ್ ಹೆಚ್ಚು ಹಾಲು ಸಂಗ್ರಹವಾಗುತ್ತಿದ್ದು, ಉತ್ಪಾದಕರಿಂದ ಈ ಹಾಲನ್ನು ಖರೀದಿಸಬೇಕಾಗಿದೆ. ಜನರಿಗೆ 50 ಎಂಎಲ್ ಹೆಚ್ಚು ತಲುಪಿಸಿ, ಹೆಚ್ಚುವರಿ ₹2 ಸಂಗ್ರಹಿಸಲಾಗುತ್ತಿದೆ ಎಂದು ಕೆಎಂಎಫ್ ಹೇಳುತ್ತಿದೆ. ಜನರಿಗೆ ಇದು ‘ಉಗುಳಲೂ ಆಗದ ನುಂಗಲೂ ಆಗದ ಬಿಸಿ ತುಪ್ಪ’ವಾಗಿ ಪರಿಣಮಿಸಿದೆ.</p>.<p>ಪೆಟ್ರೋಲ್, ಡೀಸೆಲ್ ದರ ಹೆಚ್ಚಾಗಿದೆ, ತರಕಾರಿ ಹಾಗೂ ಇನ್ನಿತರ ಅಗತ್ಯ ವಸ್ತುಗಳ ದರ ಕೈಗೆ ನಿಲುಕುತ್ತಿಲ್ಲ. ಹಾಲಿನ ದರ ಏರಿಕೆ ಜನರನ್ನು ಮತ್ತಷ್ಟು ಕಷ್ಟಕ್ಕೆ ದೂಡಲಿದೆ. ಹಾಗಾಗಿ ಸರ್ಕಾರ ಹಾಲಿನ ದರ ಹೆಚ್ಚಿಸದೆ ಸಂಗ್ರಹವಾದ ಹೆಚ್ಚುವರಿ 1 ಕೋಟಿ ಲೀಟರ್ ಹಾಲಿಗೆ ಸಬ್ಸಿಡಿ ನೀಡಬೇಕು ಮತ್ತು ರಿಯಾಯಿತಿ ದರದಲ್ಲಿ ಬಡಜನರಿಗೆ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>