ಬಸವನಬಾಗೇವಾಡಿ: ಪಟ್ಟಣದ ತಾಲ್ಲೂಕು ಪಶು ಆಸ್ಪತ್ರೆ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಶುಕ್ರವಾರ ಜವಳಿ, ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ದಿಢೀರ್ ಭೇಟಿ ನೀಡಿದಾಗ, ಪಶು ಆಸ್ಪತ್ರೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿದ ಸಚಿವರು ಅಧಿಕಾರಿಗಳಿಗೆ ನೊಟೀಸ್ ನೀಡುವಂತೆ ತಹಶೀಲ್ದಾರ್ ಯಮನಪ್ಪ ಸೋಮನಕಟ್ಟಿ ಅವರಿಗೆ ಸೂಚಿಸಿದರು.