<p><strong>ತಾಂಬಾ:</strong> ಚುನಾವಣೆ ಬಂದಾಗ ಮಾತ್ರ ಪಕ್ಷ, ಪಂಗಡ ಎನ್ನಬೇಕು. ಉಳಿದೆಲ್ಲ ದಿನಗಳಲ್ಲಿ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಕೆಲಸ ಮಾಡಬೇಕು ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.</p>.<p>ಸಮೀಪದ ಸುರಗಿಹಳ್ಳಿ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಹತ್ತಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ಮತ್ತು 2022-23ನೇ ಸಾಲಿನ ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ನಳ ಸಂಪರ್ಕ ಯೋಜನೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಮಲ್ಲಿಕಾರ್ಜುನ ದೇವಸ್ಥಾನದ ಹತ್ತಿ ಸಮುದಾಯ ಭವನ ₹25 ಲಕ್ಷ ಮತ್ತು ಮನೆ ಮನೆಗೆ ನಳ ಸಂಪರ್ಕ ಯೋಜನೆ ಕಾಮಗಾರಿಗೆ ₹186.43 ಲಕ್ಷ ಹಣ ಬಿಡುಗಡೆ ಮಾಡಿದ್ದೇನೆ ಮತ್ತು ಈ ಗ್ರಾಮದಲ್ಲಿ ಹಲವಾರು ಕಾಮಗಾರಿಗಳಿಗೆ ಶೀಘ್ರದಲ್ಲಿ ಚಾಲನೆ ನೀಡುತ್ತೇನೆ. ಈ ಗ್ರಾಮದ ಅಭಿವೃದ್ಧಿ ಜವಾಬ್ದಾರಿ ನನ್ನ ತಲೆ ಮೇಲಿದೆ. ಅಭಿವೃದ್ಧಿ ವಿಷಯದಲ್ಲಿ ಯಾರೂ ಪೂರ್ವಾಗ್ರಹ ಪೀಡಿತರಾಗಬಾರದು. ಸಂದರ್ಭ ಬಂದಾಗ ಮಾನವೀಯತೆ ದೃಷ್ಟಿಯಿಂದ ನಾವೆಲ್ಲ ಒಂದಾಗಿ ಕೆಲಸ ಮಾಡಬೇಕು ಎಂದರು.</p>.<p>ಚನ್ನಮಲಯ್ಯ ಹಿರೇಮಠ, ಪಂಚಯ್ಯ ಹಿರೇಮಠ,ಕಾಂತನಗೌಡ ಪಾಟೀಲ, ಶಂಕರ ಹಿರೋಳಿ, ಸಿದ್ದಾರಾಮ ಅಗಟಗಿ, ಕಾಸು ಬಾಸಗಿ, ಸಿದ್ದರಾಮ ಪವಾರ, ಅಶೋಕ ಬಾಸಗಿ, ರಮೇಶ ಬಾಸಗಿ, ಷಣ್ಮಖ ದುರ್ಗದ, ಗೋಪಾಲ ಜಾಧವ, ಕೆ.ಆರ್.ಐ.ಡಿ.ಎಲ್ ಅಧಿಕಾರಿ ಪುಂಡಲಿಕ ಹೂಗರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾಂಬಾ:</strong> ಚುನಾವಣೆ ಬಂದಾಗ ಮಾತ್ರ ಪಕ್ಷ, ಪಂಗಡ ಎನ್ನಬೇಕು. ಉಳಿದೆಲ್ಲ ದಿನಗಳಲ್ಲಿ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಕೆಲಸ ಮಾಡಬೇಕು ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.</p>.<p>ಸಮೀಪದ ಸುರಗಿಹಳ್ಳಿ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಹತ್ತಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ಮತ್ತು 2022-23ನೇ ಸಾಲಿನ ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ನಳ ಸಂಪರ್ಕ ಯೋಜನೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಮಲ್ಲಿಕಾರ್ಜುನ ದೇವಸ್ಥಾನದ ಹತ್ತಿ ಸಮುದಾಯ ಭವನ ₹25 ಲಕ್ಷ ಮತ್ತು ಮನೆ ಮನೆಗೆ ನಳ ಸಂಪರ್ಕ ಯೋಜನೆ ಕಾಮಗಾರಿಗೆ ₹186.43 ಲಕ್ಷ ಹಣ ಬಿಡುಗಡೆ ಮಾಡಿದ್ದೇನೆ ಮತ್ತು ಈ ಗ್ರಾಮದಲ್ಲಿ ಹಲವಾರು ಕಾಮಗಾರಿಗಳಿಗೆ ಶೀಘ್ರದಲ್ಲಿ ಚಾಲನೆ ನೀಡುತ್ತೇನೆ. ಈ ಗ್ರಾಮದ ಅಭಿವೃದ್ಧಿ ಜವಾಬ್ದಾರಿ ನನ್ನ ತಲೆ ಮೇಲಿದೆ. ಅಭಿವೃದ್ಧಿ ವಿಷಯದಲ್ಲಿ ಯಾರೂ ಪೂರ್ವಾಗ್ರಹ ಪೀಡಿತರಾಗಬಾರದು. ಸಂದರ್ಭ ಬಂದಾಗ ಮಾನವೀಯತೆ ದೃಷ್ಟಿಯಿಂದ ನಾವೆಲ್ಲ ಒಂದಾಗಿ ಕೆಲಸ ಮಾಡಬೇಕು ಎಂದರು.</p>.<p>ಚನ್ನಮಲಯ್ಯ ಹಿರೇಮಠ, ಪಂಚಯ್ಯ ಹಿರೇಮಠ,ಕಾಂತನಗೌಡ ಪಾಟೀಲ, ಶಂಕರ ಹಿರೋಳಿ, ಸಿದ್ದಾರಾಮ ಅಗಟಗಿ, ಕಾಸು ಬಾಸಗಿ, ಸಿದ್ದರಾಮ ಪವಾರ, ಅಶೋಕ ಬಾಸಗಿ, ರಮೇಶ ಬಾಸಗಿ, ಷಣ್ಮಖ ದುರ್ಗದ, ಗೋಪಾಲ ಜಾಧವ, ಕೆ.ಆರ್.ಐ.ಡಿ.ಎಲ್ ಅಧಿಕಾರಿ ಪುಂಡಲಿಕ ಹೂಗರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>