<p><strong>ವಿಜಯಪುರ:</strong> ‘ಸಂಕ್ರಾಂತಿಗೆ ಸಚಿವ ಸಂಪುಟ ವಿಸ್ತರಣೆ ಮಾತ್ರವಲ್ಲ, ಮಹತ್ವದ ಬದಲಾವಣೆಯಾಗಲಿದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಕರ ಸಂಕ್ರಾಂತಿಗೆ ಸೂರ್ಯ ತನ್ನ ಪಥವನ್ನು ಬದಲಾಯಿಸಿ ಉತ್ತರಾಯಣ ಆರಂಭವಾಗಲಿರುವುದರಿಂದ ಉತ್ತರ ಕರ್ನಾಟಕಕ್ಕೆ ಒಳಿತಾಗಲಿದೆ’ ಎಂದರು.</p>.<p>‘ನಾನು ಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ. ಮಂತ್ರಿ ಸ್ಥಾನದಲ್ಲಿ ನನ್ನ ಹೆಸರಿಲ್ಲ. ಇನ್ನು ಮುಂದೆ ಸಚಿವ ಸಂಪುಟ ವಿಸ್ತರಣೆಯಲ್ಲಿ ನನ್ನ ಹೆಸರಿದೆ ಎಂದು ಮಾಧ್ಯಮದವರು ಸುದ್ದಿ ಮಾಡಬೇಡಿ’ ಎಂದು ಮನವಿ ಮಾಡಿದರು.</p>.<p>‘ಯಾರಾರ ಹಣೆಬರಹ ಏನೇನಿದೆಯೋ ಗೊತ್ತಿಲ್ಲ. ವಿಜಯಪುರಕ್ಕೆ ಇಷ್ಟು ವರ್ಷಗಳ ಕಾಲ ಆಗಿರುವ ಅನ್ಯಾಯ ಸರಿಯಾಗಲಿದೆ’ ಎಂದು ಹೇಳುವ ಮೂಲಕ ಮುಖ್ಯಮಂತ್ರಿಯಾಗುವ ಕನಸನ್ನು ಪರೋಕ್ಷವಾಗಿ ವ್ಯಕ್ತಪಡಿಸಿದರು.</p>.<p><strong>ವಿಜಯಪುರಕ್ಕೆ ಶಾ: </strong>ವಿಜಯಪುರದಲ್ಲಿ ನೂತನವಾಗಿ ಆರಂಭವಾಗಿರುವ ಐಆರ್ಬಿ ಬೆಟಾಲಿಯನ್ ಉದ್ಘಾಟನೆ ಸಂಬಂಧ ಜನವರಿ 16ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಜಯಪುರಕ್ಕೆ ಬರಲಿದ್ದಾರೆ. ಅವರು ಬರುವ ಮೊದಲೇ ಭಾರಿ ಬದಲಾವಣೆಯಾಗಲಿದೆ ಎಂದು ಹೇಳಿದರು.</p>.<p><strong>ಶಾಲೆ ಆರಂಭಕ್ಕೆವಿರೋಧ</strong><br />‘ಮಕ್ಕಳ ಆರೋಗ್ಯ ಹಾಗೂ ಭವಿಷ್ಯ ಮುಖ್ಯ. ಶಾಲೆ ಆರಂಭಕ್ಕೆ ತರಾತುರಿ ಬೇಡ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>‘ನಾನು ಶಿಕ್ಷಣ ಸಂಸ್ಥೆಯೊಂದರ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ. ಒಂದು ವರ್ಷ ಶಿಕ್ಷಣ ಸಂಸ್ಥೆಗಳಿಗೆ ಹಾನಿಯಾದರೂ ಸಹಿಸಿಕೊಳ್ಳಬಹುದು. ಆದರೆ, ಮಕ್ಕಳ ಮೇಲೆ ಯಾವುದೇ ದುಷ್ಪರಿಣಾಮ ಆಗಬಾರದು’ ಎಂದರು.</p>.<p>ಕೋವಿಡ್ನಿಂದ ಮಕ್ಕಳಿಗೆ ಯಾವುದೇ ತೊಂದರೆ ಇಲ್ಲ ಎಂಬುದನ್ನು ವೈದ್ಯರು ಖಚಿತ ಪಡಿಸಿದರೆ ಹಾಗೂ ವಿವಿಧ ಕ್ಷೇತ್ರಗಳ ತಜ್ಞರ ಅಭಿಪ್ರಾಯ ಪಡೆದ ಬಳಿಕ ಶಾಲೆ ಆರಂಭದ ಬಗ್ಗೆ ನಿರ್ಣಯ ಮಾಡಬೇಕು ಎಂದರು.</p>.<p>‘ಹಿಂದಿನ ಕಾಲದಲ್ಲಿ ದಂಪತಿಗೆ ನಾಲ್ಕರಿಂದ ಹತ್ತಾರು ಮಕ್ಕಳಿರುತ್ತಿದ್ದವು. ಆದರೆ, ಇಂದಿನ ಕಾಲದಲ್ಲಿ ದಂಪತಿಗೆ ಒಂದೋ, ಎರಡೋ ಮಕ್ಕಳಿರುತ್ತವೆ. ಹೀಗಾಗಿ ಮಕ್ಕಳನ್ನು ಅತ್ಯಂತ ಜೋಪಾನವಾಗಿ ಬೆಳೆಸಿರುತ್ತಾರೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p><strong>ಸ್ವಾಗತ:</strong> ರಾತ್ರಿ ಕರ್ಫ್ಯೂ ಹಿಂಪಡೆದ ಸರ್ಕಾರದ ಕ್ರಮವನ್ನು ಸ್ವಾಗತಿಸಿದ ಯತ್ನಾಳ, ಮುಖ್ಯಮಂತ್ರಿ ಅವರು ಯಾವುದೇ ನಿರ್ಣಯವನ್ನು ಯಾರದೊ ಒಬ್ಬರ ಮಾತು ಕೇಳಿ ತೆಗೆದುಕೊಳ್ಳಬಾರದು. ಇನ್ನು ಮುಂದೆ ಸಚಿವರು, ಶಾಸಕರು, ಸಾರ್ವಜನಿಕರು, ಮಾಧ್ಯಮಗಳ ಅಭಿಪ್ರಾಯ ಮತ್ತು ವಿಶ್ವಾಸವನ್ನು ತೆಗೆದುಕೊಂಡು ನಿರ್ಣಯಿಸಬೇಕು ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ‘ಸಂಕ್ರಾಂತಿಗೆ ಸಚಿವ ಸಂಪುಟ ವಿಸ್ತರಣೆ ಮಾತ್ರವಲ್ಲ, ಮಹತ್ವದ ಬದಲಾವಣೆಯಾಗಲಿದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಕರ ಸಂಕ್ರಾಂತಿಗೆ ಸೂರ್ಯ ತನ್ನ ಪಥವನ್ನು ಬದಲಾಯಿಸಿ ಉತ್ತರಾಯಣ ಆರಂಭವಾಗಲಿರುವುದರಿಂದ ಉತ್ತರ ಕರ್ನಾಟಕಕ್ಕೆ ಒಳಿತಾಗಲಿದೆ’ ಎಂದರು.</p>.<p>‘ನಾನು ಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ. ಮಂತ್ರಿ ಸ್ಥಾನದಲ್ಲಿ ನನ್ನ ಹೆಸರಿಲ್ಲ. ಇನ್ನು ಮುಂದೆ ಸಚಿವ ಸಂಪುಟ ವಿಸ್ತರಣೆಯಲ್ಲಿ ನನ್ನ ಹೆಸರಿದೆ ಎಂದು ಮಾಧ್ಯಮದವರು ಸುದ್ದಿ ಮಾಡಬೇಡಿ’ ಎಂದು ಮನವಿ ಮಾಡಿದರು.</p>.<p>‘ಯಾರಾರ ಹಣೆಬರಹ ಏನೇನಿದೆಯೋ ಗೊತ್ತಿಲ್ಲ. ವಿಜಯಪುರಕ್ಕೆ ಇಷ್ಟು ವರ್ಷಗಳ ಕಾಲ ಆಗಿರುವ ಅನ್ಯಾಯ ಸರಿಯಾಗಲಿದೆ’ ಎಂದು ಹೇಳುವ ಮೂಲಕ ಮುಖ್ಯಮಂತ್ರಿಯಾಗುವ ಕನಸನ್ನು ಪರೋಕ್ಷವಾಗಿ ವ್ಯಕ್ತಪಡಿಸಿದರು.</p>.<p><strong>ವಿಜಯಪುರಕ್ಕೆ ಶಾ: </strong>ವಿಜಯಪುರದಲ್ಲಿ ನೂತನವಾಗಿ ಆರಂಭವಾಗಿರುವ ಐಆರ್ಬಿ ಬೆಟಾಲಿಯನ್ ಉದ್ಘಾಟನೆ ಸಂಬಂಧ ಜನವರಿ 16ಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಜಯಪುರಕ್ಕೆ ಬರಲಿದ್ದಾರೆ. ಅವರು ಬರುವ ಮೊದಲೇ ಭಾರಿ ಬದಲಾವಣೆಯಾಗಲಿದೆ ಎಂದು ಹೇಳಿದರು.</p>.<p><strong>ಶಾಲೆ ಆರಂಭಕ್ಕೆವಿರೋಧ</strong><br />‘ಮಕ್ಕಳ ಆರೋಗ್ಯ ಹಾಗೂ ಭವಿಷ್ಯ ಮುಖ್ಯ. ಶಾಲೆ ಆರಂಭಕ್ಕೆ ತರಾತುರಿ ಬೇಡ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>‘ನಾನು ಶಿಕ್ಷಣ ಸಂಸ್ಥೆಯೊಂದರ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ. ಒಂದು ವರ್ಷ ಶಿಕ್ಷಣ ಸಂಸ್ಥೆಗಳಿಗೆ ಹಾನಿಯಾದರೂ ಸಹಿಸಿಕೊಳ್ಳಬಹುದು. ಆದರೆ, ಮಕ್ಕಳ ಮೇಲೆ ಯಾವುದೇ ದುಷ್ಪರಿಣಾಮ ಆಗಬಾರದು’ ಎಂದರು.</p>.<p>ಕೋವಿಡ್ನಿಂದ ಮಕ್ಕಳಿಗೆ ಯಾವುದೇ ತೊಂದರೆ ಇಲ್ಲ ಎಂಬುದನ್ನು ವೈದ್ಯರು ಖಚಿತ ಪಡಿಸಿದರೆ ಹಾಗೂ ವಿವಿಧ ಕ್ಷೇತ್ರಗಳ ತಜ್ಞರ ಅಭಿಪ್ರಾಯ ಪಡೆದ ಬಳಿಕ ಶಾಲೆ ಆರಂಭದ ಬಗ್ಗೆ ನಿರ್ಣಯ ಮಾಡಬೇಕು ಎಂದರು.</p>.<p>‘ಹಿಂದಿನ ಕಾಲದಲ್ಲಿ ದಂಪತಿಗೆ ನಾಲ್ಕರಿಂದ ಹತ್ತಾರು ಮಕ್ಕಳಿರುತ್ತಿದ್ದವು. ಆದರೆ, ಇಂದಿನ ಕಾಲದಲ್ಲಿ ದಂಪತಿಗೆ ಒಂದೋ, ಎರಡೋ ಮಕ್ಕಳಿರುತ್ತವೆ. ಹೀಗಾಗಿ ಮಕ್ಕಳನ್ನು ಅತ್ಯಂತ ಜೋಪಾನವಾಗಿ ಬೆಳೆಸಿರುತ್ತಾರೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p><strong>ಸ್ವಾಗತ:</strong> ರಾತ್ರಿ ಕರ್ಫ್ಯೂ ಹಿಂಪಡೆದ ಸರ್ಕಾರದ ಕ್ರಮವನ್ನು ಸ್ವಾಗತಿಸಿದ ಯತ್ನಾಳ, ಮುಖ್ಯಮಂತ್ರಿ ಅವರು ಯಾವುದೇ ನಿರ್ಣಯವನ್ನು ಯಾರದೊ ಒಬ್ಬರ ಮಾತು ಕೇಳಿ ತೆಗೆದುಕೊಳ್ಳಬಾರದು. ಇನ್ನು ಮುಂದೆ ಸಚಿವರು, ಶಾಸಕರು, ಸಾರ್ವಜನಿಕರು, ಮಾಧ್ಯಮಗಳ ಅಭಿಪ್ರಾಯ ಮತ್ತು ವಿಶ್ವಾಸವನ್ನು ತೆಗೆದುಕೊಂಡು ನಿರ್ಣಯಿಸಬೇಕು ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>