ವಿಜಯಪುರ: ಮತೀಯ ಭಾವನೆಗಳಿಗೆ ಧಕ್ಕೆ ತರುವ, ಸಮಾಜದಲ್ಲಿ ಗಲಭೆಗೆ ಕಾರಣವಾಗುವ ಹಾಗೂ ಒಂದು ಕೋಮನ್ನು ಪದೇಪದೇ ನಿಂದನೆ ಮಾಡುವ, ಸಂವಿಧಾನಬಾಹಿರ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಅಧ್ಯಕ್ಷ ತಾಹೀರ್ ಹುಸೇನ್ ಒತ್ತಾಯಿಸಿದ್ದಾರೆ.