ಈ ಕುರಿತು ‘ಪ್ರಜಾವಾಣಿ’ಯೊಂದಿಗೆ ಬುಧವಾರ ಮಾತನಾಡಿದ ಅವರು, ‘ದೀಪಾವಳಿ ಅಮಾವಾಸ್ಯೆ ದಿನದಂದು ವಿಜಯಪುರ ನಗರದಲ್ಲಿರುವ ನಮ್ಮ ಮನೆಯ ಕಾಂಪೌಂಡ್ಗೆ ಹೊಂದಿಕೊಂಡಿದ್ದ ಶ್ರೀಗಂಧದ ಮರವನ್ನು ಕಳವು ಮಾಡಲು ಬಂದಿದ್ದ ದುಷ್ಕರ್ಮಿಗಳನ್ನು ತಡೆಯಲು ಹೋದಾಗ, ಅವಾಚ್ಯ ಶಬ್ಧಗಳಿಂದ ನನ್ನನ್ನು ನಿಂದಿಸಿದರು. ಅಲ್ಲದೇ, ನಿನ್ನನ್ನು ನೋಡಲು ಬಂದಿದ್ದೇವೆ. ಗುಂಡು ಹಾರಿಸಿ ಸಾಯಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ’ ಎಂದು ಹೇಳಿದರು.