ಜವಾಬ್ಧಾರಿ ಸ್ವೀಕರಿಸಿ ಮಾತನಾಡಿದ ನಡಹಳ್ಳಿ, ಪೂಜ್ಯರು ವಹಿಸಿದ ಜವಾಬ್ಧಾರಿಯನ್ನು ಯಶಸ್ವಿಯಾಗಿ ನಿರ್ವಹಿಸುತ್ತೇನೆ. ವೀರಶೈವ ಲಿಂಗಾಯತ ಸಮಾಜದ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಾಮನೂರು ಶಿವಶಂಕರಪ್ಪ ಮತ್ತು ಎಲ್ಲ ಮಠಾಧೀಶರ, ಸಮಾಜದ ಬಂಧುಗಳ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತೇನೆ ಎಂದರು.