<p><strong>ಚಡಚಣ:</strong> ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ಸದಸ್ಯರ ಸ್ವಾಭಿಮಾನದ ಪ್ರತೀಕವಾಗಿ ಕಣಕಿಳಿದಿದ್ದೇನೆ ಎಂದುಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ ಹೇಳಿದರು.</p>.<p>ಪಟ್ಟಣದ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ನಡೆದ ಸ್ಥಳಿಯ ಸಂಸ್ಥೆಗಳ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಬಿಜೆಪಿ-ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳು ಒಳ ಒಪ್ಪಂದ ಮಾಡಿಕೊಂಡು ಚುನಾವಣೆ ಪ್ರಕ್ರಿಯೆಯಿಂದ ಸ್ಥಳೀಯ ಸಂಸ್ಥೆಗಳ ಸದಸ್ಯರನ್ನು ಹೊರಗಿಡಲು ಯತ್ನಿಸಿದರು. ಅವರ ಹಕ್ಕನ್ನು ಮೊಟಕುಗೊಳಿಸಲು ನಾಟಕನಡೆಸಿದ್ದರು. ಆದರೆ, ನಾನು ಅದಕ್ಕೆ ಅವಕಾಶ ನೀಡಿಲಿಲ್ಲ ಎಂದರು.</p>.<p>ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೇ, ಸದಸ್ಯರ ಶಕ್ತಿಯಾಗಿ, ಅವರ ಬಲದ ಮೇಲೆ ಕಣಕ್ಕೆ ಧುಮುಕ್ಕಿದ್ದೇನೆ. ಇದರಿಂದಾಗಿ ಎರಡೂ ಪಕ್ಷಗಳ ಅಭ್ಯರ್ಥಿಗಳಲ್ಲಿ ನಡುಕ ಹುಟ್ಟಿದೆ ಎಂದು ಹೇಳಿದರು.</p>.<p>ಗ್ರಾಮ ಪಂಚಾಯ್ತಿ, ಪಟ್ಟಣ ಪಂಚಾಯ್ತಿ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಸದಸ್ಯರ ಸ್ವಾಭಿಮಾನದ ಕಿಚ್ಚಿನ ಮುಂದೆ ಅವರ ಹಣ ಬಲ, ತೋಳ್ಬಲ, ಅಪ ಪ್ರಚಾರಗಳ ಆಟ ನಡೆಯುವದಿಲ್ಲ ಎಂದರು.</p>.<p>ಪಂಚಾಯತ್ ರಾಜ್ ಬಲಪಡಿಸುವುದು, ಸ್ಥಳೀಯ ಸಂಸ್ಥೆಗಳ ಸದಸ್ಯರ ಹಕ್ಕುಗಳಿಗಾಗಿ ಹಾಗೂ ಅವರ ಸಮಸ್ಯೆಗಳ ನಿವಾರಣೆಗಾಗಿ ಹೋರಾಟ ಮಾಡುವೆ. ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಲು ನನಗೊಂದು ಬಾರಿ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಅತ್ಯಧಿಕ ಮತಗಳಿಂದ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.</p>.<p>ವಿಧಾನ ಪರಿಷತ್ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ಪಕ್ಷದ ಕಾರ್ಯಕರ್ತರ ಪಡೆ ಹಾಗೂ ಆಡಳಿತ ಯಂತ್ರದ ಶ್ರೀರಕ್ಷೆಯಿದ್ದರೆ ನನಗೆ ಸ್ಥಳೀಯ ಸಂಸ್ಥೆಗಳ ಸ್ವಾಭಿಮಾನಿ ಸದಸ್ಯರೇ ನನ್ನ ಕಾರ್ಯಪಡೆ ಹಾಗೂ ಶ್ರೀರಕ್ಷೆಯಾಗಿದ್ದಾರೆ ಎಂದರು.</p>.<p>ಗ್ರಾಮ ಪಂಚಾಯ್ತ ಮಾಜಿ ಅಧ್ಯಕ್ಷ ಶ್ರೀಮಂತ ಕಾಪಸೆ ಮಾತನಾಡಿ, ಹುಟ್ಟು ಹೋರಾಟಗಾರ, ಶಿಕ್ಷಣ ಪ್ರೇಮಿ ಹಾಗೂ ಸರಳ ರಾಜಕಾರಿಣಿಯಾದ ಮಲ್ಲಿಕಾರ್ಜುನ ಲೋಣಿ ಅವರಿಗೆ ಒಂದು ಬಾರಿ ಪರಿಷತ್ಗೆ ಅವಕಾಶ ನೀಡಲು ಸದಸ್ಯರು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಎಂದು ವಿನಂತಿ ಮಾಡಿದರು.</p>.<p>ದೇವರ ನಿಂಬರಗಿ ಗ್ರಾಮ ಪಂಚಾಯ್ತಿ ಸದಸ್ಯ ಮಹಾದೇವ ಕರ್ಲಮಳ, ಕನ್ನೂರಿನ ರಾಜುಗೌಡ ಪಾಟೀಲ, ಹಲಸಂಗಿ ಗ್ರಾಮ ಪಂಚಾಯ್ತಿ ಸದಸ್ಯರಾದ ಸಿದ್ಧಾರಾಮ ಕೊಟ್ಟಲಗಿ, ಬಸಗೊಂಡ ಪಾಟೀಲ, ಮಹಾದೇವ ಮಾಶ್ಯಾಳ ಮಾತನಾಡಿ ಬೆಂಬಲ ವ್ಯಕ್ತಪಡಿಸಿದರು.</p>.<p>ಚಡಚಣ ತಾಲ್ಲೂಕಿನ 13 ಗ್ರಾಮ ಪಂಚಾಯ್ತಿಗಳ ಸದಸ್ಯರು, ಬೆಂಬಲಿಗರುಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>****</p>.<p>ಹಣ ಹಾಗೂ ಅಧಿಕಾರ ದರ್ಪದಿಂದ ಮಾತ್ರ ರಾಜಕಾರಣ ಸಾಧ್ಯ ಎಂಬ ಭ್ರಮೆಯಲ್ಲಿರುವವರಿಗೆ ಈ ಬಾರಿಯ ಚುನಾವಣೆಯಲ್ಲಿ ತಕ್ಕಪಾಠ ಕಲಿಸಿ</p>.<p>–ಮಲ್ಲಿಕಾರ್ಜುನ ಲೋಣಿ</p>.<p>ಪಕ್ಷೇತರ ಅಭ್ಯರ್ಥಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಡಚಣ:</strong> ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ಸದಸ್ಯರ ಸ್ವಾಭಿಮಾನದ ಪ್ರತೀಕವಾಗಿ ಕಣಕಿಳಿದಿದ್ದೇನೆ ಎಂದುಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ ಹೇಳಿದರು.</p>.<p>ಪಟ್ಟಣದ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ನಡೆದ ಸ್ಥಳಿಯ ಸಂಸ್ಥೆಗಳ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಬಿಜೆಪಿ-ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳು ಒಳ ಒಪ್ಪಂದ ಮಾಡಿಕೊಂಡು ಚುನಾವಣೆ ಪ್ರಕ್ರಿಯೆಯಿಂದ ಸ್ಥಳೀಯ ಸಂಸ್ಥೆಗಳ ಸದಸ್ಯರನ್ನು ಹೊರಗಿಡಲು ಯತ್ನಿಸಿದರು. ಅವರ ಹಕ್ಕನ್ನು ಮೊಟಕುಗೊಳಿಸಲು ನಾಟಕನಡೆಸಿದ್ದರು. ಆದರೆ, ನಾನು ಅದಕ್ಕೆ ಅವಕಾಶ ನೀಡಿಲಿಲ್ಲ ಎಂದರು.</p>.<p>ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೇ, ಸದಸ್ಯರ ಶಕ್ತಿಯಾಗಿ, ಅವರ ಬಲದ ಮೇಲೆ ಕಣಕ್ಕೆ ಧುಮುಕ್ಕಿದ್ದೇನೆ. ಇದರಿಂದಾಗಿ ಎರಡೂ ಪಕ್ಷಗಳ ಅಭ್ಯರ್ಥಿಗಳಲ್ಲಿ ನಡುಕ ಹುಟ್ಟಿದೆ ಎಂದು ಹೇಳಿದರು.</p>.<p>ಗ್ರಾಮ ಪಂಚಾಯ್ತಿ, ಪಟ್ಟಣ ಪಂಚಾಯ್ತಿ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಸದಸ್ಯರ ಸ್ವಾಭಿಮಾನದ ಕಿಚ್ಚಿನ ಮುಂದೆ ಅವರ ಹಣ ಬಲ, ತೋಳ್ಬಲ, ಅಪ ಪ್ರಚಾರಗಳ ಆಟ ನಡೆಯುವದಿಲ್ಲ ಎಂದರು.</p>.<p>ಪಂಚಾಯತ್ ರಾಜ್ ಬಲಪಡಿಸುವುದು, ಸ್ಥಳೀಯ ಸಂಸ್ಥೆಗಳ ಸದಸ್ಯರ ಹಕ್ಕುಗಳಿಗಾಗಿ ಹಾಗೂ ಅವರ ಸಮಸ್ಯೆಗಳ ನಿವಾರಣೆಗಾಗಿ ಹೋರಾಟ ಮಾಡುವೆ. ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಲು ನನಗೊಂದು ಬಾರಿ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಅತ್ಯಧಿಕ ಮತಗಳಿಂದ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.</p>.<p>ವಿಧಾನ ಪರಿಷತ್ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ಪಕ್ಷದ ಕಾರ್ಯಕರ್ತರ ಪಡೆ ಹಾಗೂ ಆಡಳಿತ ಯಂತ್ರದ ಶ್ರೀರಕ್ಷೆಯಿದ್ದರೆ ನನಗೆ ಸ್ಥಳೀಯ ಸಂಸ್ಥೆಗಳ ಸ್ವಾಭಿಮಾನಿ ಸದಸ್ಯರೇ ನನ್ನ ಕಾರ್ಯಪಡೆ ಹಾಗೂ ಶ್ರೀರಕ್ಷೆಯಾಗಿದ್ದಾರೆ ಎಂದರು.</p>.<p>ಗ್ರಾಮ ಪಂಚಾಯ್ತ ಮಾಜಿ ಅಧ್ಯಕ್ಷ ಶ್ರೀಮಂತ ಕಾಪಸೆ ಮಾತನಾಡಿ, ಹುಟ್ಟು ಹೋರಾಟಗಾರ, ಶಿಕ್ಷಣ ಪ್ರೇಮಿ ಹಾಗೂ ಸರಳ ರಾಜಕಾರಿಣಿಯಾದ ಮಲ್ಲಿಕಾರ್ಜುನ ಲೋಣಿ ಅವರಿಗೆ ಒಂದು ಬಾರಿ ಪರಿಷತ್ಗೆ ಅವಕಾಶ ನೀಡಲು ಸದಸ್ಯರು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಎಂದು ವಿನಂತಿ ಮಾಡಿದರು.</p>.<p>ದೇವರ ನಿಂಬರಗಿ ಗ್ರಾಮ ಪಂಚಾಯ್ತಿ ಸದಸ್ಯ ಮಹಾದೇವ ಕರ್ಲಮಳ, ಕನ್ನೂರಿನ ರಾಜುಗೌಡ ಪಾಟೀಲ, ಹಲಸಂಗಿ ಗ್ರಾಮ ಪಂಚಾಯ್ತಿ ಸದಸ್ಯರಾದ ಸಿದ್ಧಾರಾಮ ಕೊಟ್ಟಲಗಿ, ಬಸಗೊಂಡ ಪಾಟೀಲ, ಮಹಾದೇವ ಮಾಶ್ಯಾಳ ಮಾತನಾಡಿ ಬೆಂಬಲ ವ್ಯಕ್ತಪಡಿಸಿದರು.</p>.<p>ಚಡಚಣ ತಾಲ್ಲೂಕಿನ 13 ಗ್ರಾಮ ಪಂಚಾಯ್ತಿಗಳ ಸದಸ್ಯರು, ಬೆಂಬಲಿಗರುಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>****</p>.<p>ಹಣ ಹಾಗೂ ಅಧಿಕಾರ ದರ್ಪದಿಂದ ಮಾತ್ರ ರಾಜಕಾರಣ ಸಾಧ್ಯ ಎಂಬ ಭ್ರಮೆಯಲ್ಲಿರುವವರಿಗೆ ಈ ಬಾರಿಯ ಚುನಾವಣೆಯಲ್ಲಿ ತಕ್ಕಪಾಠ ಕಲಿಸಿ</p>.<p>–ಮಲ್ಲಿಕಾರ್ಜುನ ಲೋಣಿ</p>.<p>ಪಕ್ಷೇತರ ಅಭ್ಯರ್ಥಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>