ಪಕ್ಷಕ್ಕೆ ಹೊಸಬರ ಅಗತ್ಯವಿಲ್ಲ ಎಂಬುದು ಟಿಕೆಟ್ ಹಂಚಿಕೆಯಿಂದ ಸಾಬೀತಾಗಿದೆ. ಈ ಬಾರಿ ವಾಯವ್ಯ ಪದವೀಧರ, ಶಿಕ್ಷಕ ಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ ಗೆಲವು ಸುಲಭವಾಗಿತ್ತು. ಆದರೆ, ಟಿಕೆಟ್ ಹಂಚಿಕೆಯಲ್ಲಿ ಅನುಸರಿಸಿದ ನೀತಿಯಿಂದ ಬಿಜೆಪಿಗೆ ಹೆಚ್ಚು ಅನುಕೂಲವಾಗಿದೆ. ಬಿಜೆಪಿ ಅಭ್ಯರ್ಥಿಗಳ ಗೆಲುವು ಸುಲಭವಾಗಿದೆ ಎಂದು ಅವರು ವಿಶ್ಲೇಷಿಸಿದ್ದಾರೆ.