<p><strong>ವಿಜಯಪುರ</strong>:ವಿಜಯಪುರ–ಬಾಗಲಕೋಟೆ ಅವಳಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ದ್ವಿಸದಸ್ಯ ಕ್ಷೇತ್ರಕ್ಕೆ ಇದುವರೆಗೆ ನಡೆದ ಐದು ಚುನಾವಣೆಗಳಲ್ಲಿ ಲಿಂಗಾಯತ ಸಮುದಾಯಕ್ಕೆ ಸೇರಿದ ಗೌಡ, ಪಾಟೀಲರೇ ಆಯ್ಕೆಯಾಗಿರುವುದು ವಿಶೇಷ.</p>.<p>ಕ್ಷೇತ್ರಕ್ಕೆ ಪ್ರಥಮ ಬಾರಿ ನಡೆದ ಚುನಾವಣೆಯಲ್ಲಿ ಜನತಾ ದಳದಿಂದ ಸ್ಪರ್ಧಿಸಿದ್ದ ಪಿ.ಸಿ.ಗದ್ದಿಗೌಡರ ಹಾಗೂ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಸಿ.ಆರ್.ಸೋರಗಾವಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಮೊತ್ತ ಮೊದಲಿಗೆ ಖಾತೆ ತೆರೆದಿದ್ದರು.</p>.<p>ಎರಡನೇ ಬಾರಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನ ಎಸ್.ಆರ್.ಪಾಟೀಲ ಮತ್ತು ಜನತಾ ದಳದಿಂದ ಬಿ.ಜಿ.ಪಾಟೀಲ ಹಲಸಂಗಿ ಅವರು ಕ್ಷೇತ್ರವನ್ನು ಪ್ರತಿನಿಧಿಸಿದ್ದರು.</p>.<p>ಮೂರನೇ ಬಾರಿ ನಡೆದ ಚುನಾವಣೆಯಲ್ಲಿ ಎಸ್.ಆರ್.ಪಾಟೀಲ ಮತ್ತು ಸಿದ್ದು ನ್ಯಾಮಗೌಡ ಜಯಗಳಿಸುವ ಮೂಲಕಕಾಂಗ್ರೆಸ್ ಎರಡೂ ಸ್ಥಾನಗಳನ್ನು ತನ್ನ ತೆಕ್ಕೆಗೆ ಪ್ರಥಮ ಬಾರಿಗೆ ತೆಗೆದುಕೊಂಡಿತು.</p>.<p>ನಾಲ್ಕನೇ ಬಾರಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಎಸ್.ಆರ್.ಪಾಟೀಲ ಹಾಗೂ ಬಿಜೆಪಿಯಿಂದ ಜಿ.ಎಸ್.ನ್ಯಾಮಗೌಡ ಆಯ್ಕೆಯಾಗಿದ್ದರು.</p>.<p>ಐದನೇ ಬಾರಿ ನಡೆದ ಚುನಾವಣೆಯಲ್ಲಿ ಎಸ್.ಆರ್.ಪಾಟೀಲ ಅವರು ಸತತ ಐದನೇ ಬಾರಿಗೆ ಕಾಂಗ್ರೆಸ್ ಬಾವುಟ ಹಾರಿಸಿದರು. ಪಕ್ಷೇತರವಾಗಿ ಸ್ಪರ್ಧಿಸಿದ್ದ ಬಸನಗೌಡ ಪಾಟೀಲ ಯತ್ನಾಳ ಅವರು ಬಿಜೆಪಿಗೆ ಸೋಲುಣಿಸಿದ್ದರು.</p>.<p>ಬದಲಾದ ರಾಜಕೀಯ ಸನ್ನಿವೇಶದಲ್ಲಿ ಯತ್ನಾಳ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾದ ಕಾರಣ ವಿಧಾನ ಪರಿಷತ್ ಕ್ಷೇತ್ರಕ್ಕೆ 2018ರಲ್ಲಿ ನಡೆದ ಉಪ ಚುನಾವಣೆಯಲ್ಲಿಸುನೀಲ್ಗೌಡ ಪಾಟೀಲ ಅವರು ಕಾಂಗ್ರೆಸ್ಗೆ ಜಯ ತಂದಿದ್ದರು.</p>.<p>ಈ ಕ್ಷೇತ್ರದಿಂದ ಆಯ್ಕೆಯಾದವರು ರಾಜಕೀಯವಾಗಿ ಸಾಕಷ್ಟು ಪ್ರಭಾವಿಗಳಾಗಿಯೂ ಗುರುತಿಸಿಕೊಂಡಿದ್ದಾರೆ.</p>.<p>ಇದುವರೆಗೆ ಕ್ಷೇತ್ರವನ್ನು ಅತೀ ಹೆಚ್ಚು ಅಂದರೆ ನಾಲ್ಕು ಬಾರಿ(24 ವರ್ಷ) ಪ್ರತಿನಿಧಿಸಿರುವವರು ಎಸ್.ಆರ್.ಪಾಟೀಲ ಅವರೊಬ್ಬರೇ ಎಂಬುದು ವಿಶೇಷ. ಅಲ್ಲದೇ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ, ಸಚಿವರಾಗಿ ಕಾರ್ಯ ನಿರ್ವಹಿಸುವ ಮೂಲಕ ಕ್ಷೇತ್ರಕ್ಕೆ ಗೌರವ ತಂದುಕೊಟ್ಟಿದ್ದಾರೆ.</p>.<p>ಬಾಗಲಕೋಟೆ ಹಾಲಿ ಸಂಸದಪಿ.ಸಿ.ಗದ್ದಿಗೌಡರ ಅವರುಈ ಕ್ಷೇತ್ರದಿಂದಲೇ ಆಯ್ಕೆಯಾಗುವ ಮೂಲಕ ತಮ್ಮ ರಾಜಕೀಯ ಭವಿಷ್ಯ ಕಂಡುಕೊಂಡಿರುವುದು ವಿಶೇಷ. ಅಂತೆಯೇ, ಜಮಖಂಡಿಯ ಮಾಜಿ ಶಾಸಕ ದಿ.ಸಿದ್ದು ನ್ಯಾಮಗೌಡ ಅವರಿಗೂ ಈ ಕ್ಷೇತ್ರ ರಾಜಕೀಯ ಮರುಹುಟ್ಟು ನೀಡಿದ ಕ್ಷೇತ್ರವಾಗಿದೆ. ಅಲ್ಲದೇ, ಸತತ ಸೋಲಿನಿಂದ ಕಂಗಾಲಾಗಿದ್ದ ಬಸನಗೌಡ ಪಾಟೀಲ ಯತ್ನಾಳರಿಗೂ ರಾಜಕೀಯವಾಗಿ ಮರುಹುಟ್ಟು ನೀಡಿರುವುದು ಇದೇ ಕ್ಷೇತ್ರ.</p>.<p>ಇದುವರೆಗೆ ನಡೆದ ಚುನಾವಣೆಗಳಲ್ಲಿ ಬಾಗಲಕೋಟೆ ಜಿಲ್ಲೆಯ ಪಿ.ಸಿ.ಗದ್ದಿಗೌಡರ, ಸಿ.ಆರ್.ಸೋರಗಾವಿ, ಎಸ್.ಆರ್.ಪಾಟೀಲ, ಜಿ.ಎಸ್.ನ್ಯಾಮಗೌಡ, ಸಿದ್ದು ನ್ಯಾಮಗೌಡ ಅವರೇ ಹೆಚ್ಚು ಅವಧಿಗೆ ಈ ಕ್ಷೇತ್ರದ ಮೇಲೆ ಪ್ರಾಬಲ್ಯ ಹೊಂದಿದ್ದರು.</p>.<p>ಮತದಾರರು ಅಧಿಕ ಸಂಖ್ಯೆಯಲ್ಲಿ ಇದ್ದರೂ ವಿಜಯಪುರ ಜಿಲ್ಲೆಗೆ ಪ್ರಾತಿನಿಧ್ಯ ಸಿಕ್ಕಿದ್ದು ಕಡಿಮೆ. ಬಿ.ಜಿ.ಪಾಟೀಲ ಹಲಸಂಗಿ, ಬಸನಗೌಡ ಪಾಟೀಲ ಯತ್ನಾಳ ಮತ್ತು ಸುನೀಲ್ಗೌಡ ಪಾಟೀಲ ಸೇರಿದಂತೆ ಮೂವರು ಮಾತ್ರ ವಿಜಯಪುರದಿಂದ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.</p>.<p>ಅವಳಿ ಜಿಲ್ಲೆಯ ದ್ವಿಸದಸ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪ್ರಬಲ ಪಕ್ಷಗಳಾಗಿರುವುದರಿಂದ ಇತ್ತೀಚಿನ ಚುನಾವಣೆಯಲ್ಲಿ ಒಂದೊಂದು ಕ್ಷೇತ್ರಕ್ಕೆ ಮಾತ್ರ ಸ್ಪರ್ಧಿಸಿ, ರಕ್ಷಣಾತ್ಮಕ ರಾಜಕೀಯ ಆಟದಲ್ಲಿ ತೊಡಗಿವೆ. ಒಂದೇ ಪಕ್ಷದಿಂದ ಇಬ್ಬರನ್ನು ಕಣಕ್ಕಿಳಿಸಿದರೆ ಗೆಲುವು ಸುಲಭವಲ್ಲ ಎಂಬುದು ಮನದಟ್ಟು ಮಾಡಿಕೊಂಡಿವೆ.</p>.<p>ಈ ಕಾರಣಕ್ಕಾಗಿಯೇ, ಈ ಬಾರಿ ಇಬ್ಬರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಉತ್ಸುಕವಾಗಿದ್ದರೂ ಸಹ ಹಿರಿಯ ರಾಜಕಾರಣಿ ಎಸ್.ಆರ್.ಪಾಟೀಲ ಒಪ್ಪಲಿಲ್ಲ.</p>.<p>ಇದೀಗ ನಡೆಯುತ್ತಿರುವ ಚುನಾವಣೆಯಲ್ಲಿ ಮರು ಆಯ್ಕೆ ಬಯಸಿ ಹಾಲಿ ಸದಸ್ಯ ಸುನೀಲ್ಗೌಡ ಪಾಟೀಲ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದಾರೆ. ಬಾಗಲಕೋಟೆ ಮಾಜಿ ಶಾಸಕ ಪಿ.ಎಚ್.ಪೂಜಾರ ಅವರು ತಮ್ಮ ರಾಜಕೀಯದ ಎರಡನೇ ಇನ್ನಿಂಗ್ಸ್ ಆರಂಭಕ್ಕೆ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.</p>.<p><strong>ಮೂವರು ಉಮೇದುವಾರಿಕೆ ವಾಪಸ್<br />ವಿಜಯಪುರ</strong>: ವಿಜಯಪುರ–ಬಾಗಲಕೋಟೆ ವಿಧಾನ ಪರಿಷತ್ ಕ್ಷೇತ್ರಕ್ಕೆ ಡಿ.10ರಂದು ನಡೆಯುವ ಚುನಾವಣೆಗೆ ಸ್ಪರ್ಧಿಸಿದ್ದ ಮೂವರು ಪಕ್ಷೇತರ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದುಕೊಂಡಿದ್ದಾರೆ.</p>.<p>ತುಳಸಪ್ಪ ದಾಸರ, ಕಾಶಿಂಪಟೇಲ, ಮಾರುತಿ ಜಮೀನ್ದಾರ ಅವರು ನಾಮಪತ್ರ ಹಿಂಪಡೆದುಕೊಂಡಿದ್ದಾರೆ ಎಂದುಚುನಾವಣಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.</p>.<p>ನಾಮಪತ್ರ ಹಿಂಪಡೆಯಲು ನ.26 ಕೊನೆಯ ದಿನವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>:ವಿಜಯಪುರ–ಬಾಗಲಕೋಟೆ ಅವಳಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ದ್ವಿಸದಸ್ಯ ಕ್ಷೇತ್ರಕ್ಕೆ ಇದುವರೆಗೆ ನಡೆದ ಐದು ಚುನಾವಣೆಗಳಲ್ಲಿ ಲಿಂಗಾಯತ ಸಮುದಾಯಕ್ಕೆ ಸೇರಿದ ಗೌಡ, ಪಾಟೀಲರೇ ಆಯ್ಕೆಯಾಗಿರುವುದು ವಿಶೇಷ.</p>.<p>ಕ್ಷೇತ್ರಕ್ಕೆ ಪ್ರಥಮ ಬಾರಿ ನಡೆದ ಚುನಾವಣೆಯಲ್ಲಿ ಜನತಾ ದಳದಿಂದ ಸ್ಪರ್ಧಿಸಿದ್ದ ಪಿ.ಸಿ.ಗದ್ದಿಗೌಡರ ಹಾಗೂ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಸಿ.ಆರ್.ಸೋರಗಾವಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಮೊತ್ತ ಮೊದಲಿಗೆ ಖಾತೆ ತೆರೆದಿದ್ದರು.</p>.<p>ಎರಡನೇ ಬಾರಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನ ಎಸ್.ಆರ್.ಪಾಟೀಲ ಮತ್ತು ಜನತಾ ದಳದಿಂದ ಬಿ.ಜಿ.ಪಾಟೀಲ ಹಲಸಂಗಿ ಅವರು ಕ್ಷೇತ್ರವನ್ನು ಪ್ರತಿನಿಧಿಸಿದ್ದರು.</p>.<p>ಮೂರನೇ ಬಾರಿ ನಡೆದ ಚುನಾವಣೆಯಲ್ಲಿ ಎಸ್.ಆರ್.ಪಾಟೀಲ ಮತ್ತು ಸಿದ್ದು ನ್ಯಾಮಗೌಡ ಜಯಗಳಿಸುವ ಮೂಲಕಕಾಂಗ್ರೆಸ್ ಎರಡೂ ಸ್ಥಾನಗಳನ್ನು ತನ್ನ ತೆಕ್ಕೆಗೆ ಪ್ರಥಮ ಬಾರಿಗೆ ತೆಗೆದುಕೊಂಡಿತು.</p>.<p>ನಾಲ್ಕನೇ ಬಾರಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಎಸ್.ಆರ್.ಪಾಟೀಲ ಹಾಗೂ ಬಿಜೆಪಿಯಿಂದ ಜಿ.ಎಸ್.ನ್ಯಾಮಗೌಡ ಆಯ್ಕೆಯಾಗಿದ್ದರು.</p>.<p>ಐದನೇ ಬಾರಿ ನಡೆದ ಚುನಾವಣೆಯಲ್ಲಿ ಎಸ್.ಆರ್.ಪಾಟೀಲ ಅವರು ಸತತ ಐದನೇ ಬಾರಿಗೆ ಕಾಂಗ್ರೆಸ್ ಬಾವುಟ ಹಾರಿಸಿದರು. ಪಕ್ಷೇತರವಾಗಿ ಸ್ಪರ್ಧಿಸಿದ್ದ ಬಸನಗೌಡ ಪಾಟೀಲ ಯತ್ನಾಳ ಅವರು ಬಿಜೆಪಿಗೆ ಸೋಲುಣಿಸಿದ್ದರು.</p>.<p>ಬದಲಾದ ರಾಜಕೀಯ ಸನ್ನಿವೇಶದಲ್ಲಿ ಯತ್ನಾಳ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾದ ಕಾರಣ ವಿಧಾನ ಪರಿಷತ್ ಕ್ಷೇತ್ರಕ್ಕೆ 2018ರಲ್ಲಿ ನಡೆದ ಉಪ ಚುನಾವಣೆಯಲ್ಲಿಸುನೀಲ್ಗೌಡ ಪಾಟೀಲ ಅವರು ಕಾಂಗ್ರೆಸ್ಗೆ ಜಯ ತಂದಿದ್ದರು.</p>.<p>ಈ ಕ್ಷೇತ್ರದಿಂದ ಆಯ್ಕೆಯಾದವರು ರಾಜಕೀಯವಾಗಿ ಸಾಕಷ್ಟು ಪ್ರಭಾವಿಗಳಾಗಿಯೂ ಗುರುತಿಸಿಕೊಂಡಿದ್ದಾರೆ.</p>.<p>ಇದುವರೆಗೆ ಕ್ಷೇತ್ರವನ್ನು ಅತೀ ಹೆಚ್ಚು ಅಂದರೆ ನಾಲ್ಕು ಬಾರಿ(24 ವರ್ಷ) ಪ್ರತಿನಿಧಿಸಿರುವವರು ಎಸ್.ಆರ್.ಪಾಟೀಲ ಅವರೊಬ್ಬರೇ ಎಂಬುದು ವಿಶೇಷ. ಅಲ್ಲದೇ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ, ಸಚಿವರಾಗಿ ಕಾರ್ಯ ನಿರ್ವಹಿಸುವ ಮೂಲಕ ಕ್ಷೇತ್ರಕ್ಕೆ ಗೌರವ ತಂದುಕೊಟ್ಟಿದ್ದಾರೆ.</p>.<p>ಬಾಗಲಕೋಟೆ ಹಾಲಿ ಸಂಸದಪಿ.ಸಿ.ಗದ್ದಿಗೌಡರ ಅವರುಈ ಕ್ಷೇತ್ರದಿಂದಲೇ ಆಯ್ಕೆಯಾಗುವ ಮೂಲಕ ತಮ್ಮ ರಾಜಕೀಯ ಭವಿಷ್ಯ ಕಂಡುಕೊಂಡಿರುವುದು ವಿಶೇಷ. ಅಂತೆಯೇ, ಜಮಖಂಡಿಯ ಮಾಜಿ ಶಾಸಕ ದಿ.ಸಿದ್ದು ನ್ಯಾಮಗೌಡ ಅವರಿಗೂ ಈ ಕ್ಷೇತ್ರ ರಾಜಕೀಯ ಮರುಹುಟ್ಟು ನೀಡಿದ ಕ್ಷೇತ್ರವಾಗಿದೆ. ಅಲ್ಲದೇ, ಸತತ ಸೋಲಿನಿಂದ ಕಂಗಾಲಾಗಿದ್ದ ಬಸನಗೌಡ ಪಾಟೀಲ ಯತ್ನಾಳರಿಗೂ ರಾಜಕೀಯವಾಗಿ ಮರುಹುಟ್ಟು ನೀಡಿರುವುದು ಇದೇ ಕ್ಷೇತ್ರ.</p>.<p>ಇದುವರೆಗೆ ನಡೆದ ಚುನಾವಣೆಗಳಲ್ಲಿ ಬಾಗಲಕೋಟೆ ಜಿಲ್ಲೆಯ ಪಿ.ಸಿ.ಗದ್ದಿಗೌಡರ, ಸಿ.ಆರ್.ಸೋರಗಾವಿ, ಎಸ್.ಆರ್.ಪಾಟೀಲ, ಜಿ.ಎಸ್.ನ್ಯಾಮಗೌಡ, ಸಿದ್ದು ನ್ಯಾಮಗೌಡ ಅವರೇ ಹೆಚ್ಚು ಅವಧಿಗೆ ಈ ಕ್ಷೇತ್ರದ ಮೇಲೆ ಪ್ರಾಬಲ್ಯ ಹೊಂದಿದ್ದರು.</p>.<p>ಮತದಾರರು ಅಧಿಕ ಸಂಖ್ಯೆಯಲ್ಲಿ ಇದ್ದರೂ ವಿಜಯಪುರ ಜಿಲ್ಲೆಗೆ ಪ್ರಾತಿನಿಧ್ಯ ಸಿಕ್ಕಿದ್ದು ಕಡಿಮೆ. ಬಿ.ಜಿ.ಪಾಟೀಲ ಹಲಸಂಗಿ, ಬಸನಗೌಡ ಪಾಟೀಲ ಯತ್ನಾಳ ಮತ್ತು ಸುನೀಲ್ಗೌಡ ಪಾಟೀಲ ಸೇರಿದಂತೆ ಮೂವರು ಮಾತ್ರ ವಿಜಯಪುರದಿಂದ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.</p>.<p>ಅವಳಿ ಜಿಲ್ಲೆಯ ದ್ವಿಸದಸ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪ್ರಬಲ ಪಕ್ಷಗಳಾಗಿರುವುದರಿಂದ ಇತ್ತೀಚಿನ ಚುನಾವಣೆಯಲ್ಲಿ ಒಂದೊಂದು ಕ್ಷೇತ್ರಕ್ಕೆ ಮಾತ್ರ ಸ್ಪರ್ಧಿಸಿ, ರಕ್ಷಣಾತ್ಮಕ ರಾಜಕೀಯ ಆಟದಲ್ಲಿ ತೊಡಗಿವೆ. ಒಂದೇ ಪಕ್ಷದಿಂದ ಇಬ್ಬರನ್ನು ಕಣಕ್ಕಿಳಿಸಿದರೆ ಗೆಲುವು ಸುಲಭವಲ್ಲ ಎಂಬುದು ಮನದಟ್ಟು ಮಾಡಿಕೊಂಡಿವೆ.</p>.<p>ಈ ಕಾರಣಕ್ಕಾಗಿಯೇ, ಈ ಬಾರಿ ಇಬ್ಬರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಉತ್ಸುಕವಾಗಿದ್ದರೂ ಸಹ ಹಿರಿಯ ರಾಜಕಾರಣಿ ಎಸ್.ಆರ್.ಪಾಟೀಲ ಒಪ್ಪಲಿಲ್ಲ.</p>.<p>ಇದೀಗ ನಡೆಯುತ್ತಿರುವ ಚುನಾವಣೆಯಲ್ಲಿ ಮರು ಆಯ್ಕೆ ಬಯಸಿ ಹಾಲಿ ಸದಸ್ಯ ಸುನೀಲ್ಗೌಡ ಪಾಟೀಲ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದಾರೆ. ಬಾಗಲಕೋಟೆ ಮಾಜಿ ಶಾಸಕ ಪಿ.ಎಚ್.ಪೂಜಾರ ಅವರು ತಮ್ಮ ರಾಜಕೀಯದ ಎರಡನೇ ಇನ್ನಿಂಗ್ಸ್ ಆರಂಭಕ್ಕೆ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.</p>.<p><strong>ಮೂವರು ಉಮೇದುವಾರಿಕೆ ವಾಪಸ್<br />ವಿಜಯಪುರ</strong>: ವಿಜಯಪುರ–ಬಾಗಲಕೋಟೆ ವಿಧಾನ ಪರಿಷತ್ ಕ್ಷೇತ್ರಕ್ಕೆ ಡಿ.10ರಂದು ನಡೆಯುವ ಚುನಾವಣೆಗೆ ಸ್ಪರ್ಧಿಸಿದ್ದ ಮೂವರು ಪಕ್ಷೇತರ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದುಕೊಂಡಿದ್ದಾರೆ.</p>.<p>ತುಳಸಪ್ಪ ದಾಸರ, ಕಾಶಿಂಪಟೇಲ, ಮಾರುತಿ ಜಮೀನ್ದಾರ ಅವರು ನಾಮಪತ್ರ ಹಿಂಪಡೆದುಕೊಂಡಿದ್ದಾರೆ ಎಂದುಚುನಾವಣಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.</p>.<p>ನಾಮಪತ್ರ ಹಿಂಪಡೆಯಲು ನ.26 ಕೊನೆಯ ದಿನವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>