<p><strong>ವಿಜಯಪುರ: </strong>‘ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಮೋಕ್ಷ ಪಡೆಯಲು ಲೌಕಿಕ ಪ್ರಪಂಚವನ್ನು ತ್ಯಾಗ ಮಾಡದೇ, ಸಂಸಾರದಲ್ಲಿದ್ದುಕೊಂಡೇ ಸದ್ಗತಿ ಹೊಂದಿದಳು’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಹೇಳಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಭವನದಲ್ಲಿ ಭಾನುವಾರ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 598 ನೇ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>ಮಲ್ಲಮ್ಮ ಜೀವನವಿಡಿ ಕಷ್ಟಗಳನ್ನುಂಡರೂ ತನಗೆ ನೋವುಂಟು ಮಾಡಿದವರ ಹಿತವನ್ನು ಬಯಸಿದರು. ಮನೆಯ ಒಡತಿಯಾಗಿದ್ದರೂ ದಾಸಿಯಂತೆ ಸೇವೆ ಸಲ್ಲಿಸಿ ಎಂತಹ ಕಷ್ಟದಲ್ಲಿಯೂ ಶಿವನನ್ನು ಸ್ಮರಿಸುತ್ತಿದ್ದರು ಎಂದರು.</p>.<p>ಪರಿಷತ್ತಿನ ಪದಾಧಿಕಾರಿಯಾದ ದಾಕ್ಷಾಯಿಣಿ ಬಿರಾದಾರ ಮಾತನಾಡಿ, ಮಹಾಶಿವಶರಣೆಯಾಗಿ ಬೆಳಗಿದ ಹೇಮರಡ್ಡಿ ಮಲ್ಲಮ್ಮ 12ನೇ ಶತಮಾನದ ಶಿವಶರಣೆಯರಂತೆ ವಚನಗಳನ್ನು ರಚಿಸಲಿಲ್ಲವಾದರೂ ಅವರ ಬದುಕೇ ಒಂದು ಬೃಹತ್ ವಚನ ಸಂಪುಟದಂತಿದೆ. ಅವರ ಜೀವನಮೌಲ್ಯಗಳು ಮನುಕುಲಕ್ಕೆ ಅದರಲ್ಲೂ ಸ್ತ್ರೀಕುಲಕ್ಕೆ ಅಮೂಲ್ಯ ಕಾಣಿಕೆಗಳಾಗಿವೆ ಎಂದರು.</p>.<p>ಪರಿಷತ್ತಿನ ಪದಾಧಿಕಾರಿಗಳಾದ ರಂಗನಾಥ ಅಕ್ಕಲಕೋಟ, ಎಸ್.ಡಿ.ಮಾದನ ಶೆಟ್ಟಿ, ಎಂ.ಆರ್.ಕಬಾಡೆ, ಎಸ್.ವೈ.ನಡುವಿನಕೇರಿ, ಪಂಡಿತರಾವ್ ಪಾಟೀಲ್, ಶಿವಲಿಂಗ ಕಿಣಗಿ ಶಂಕರ ಸಾತಪುತೆ ಹಾಗೂ ವಿಠ್ಠಲ್ ನಡುವಿನಮನಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>‘ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಮೋಕ್ಷ ಪಡೆಯಲು ಲೌಕಿಕ ಪ್ರಪಂಚವನ್ನು ತ್ಯಾಗ ಮಾಡದೇ, ಸಂಸಾರದಲ್ಲಿದ್ದುಕೊಂಡೇ ಸದ್ಗತಿ ಹೊಂದಿದಳು’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಹೇಳಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಭವನದಲ್ಲಿ ಭಾನುವಾರ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 598 ನೇ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>ಮಲ್ಲಮ್ಮ ಜೀವನವಿಡಿ ಕಷ್ಟಗಳನ್ನುಂಡರೂ ತನಗೆ ನೋವುಂಟು ಮಾಡಿದವರ ಹಿತವನ್ನು ಬಯಸಿದರು. ಮನೆಯ ಒಡತಿಯಾಗಿದ್ದರೂ ದಾಸಿಯಂತೆ ಸೇವೆ ಸಲ್ಲಿಸಿ ಎಂತಹ ಕಷ್ಟದಲ್ಲಿಯೂ ಶಿವನನ್ನು ಸ್ಮರಿಸುತ್ತಿದ್ದರು ಎಂದರು.</p>.<p>ಪರಿಷತ್ತಿನ ಪದಾಧಿಕಾರಿಯಾದ ದಾಕ್ಷಾಯಿಣಿ ಬಿರಾದಾರ ಮಾತನಾಡಿ, ಮಹಾಶಿವಶರಣೆಯಾಗಿ ಬೆಳಗಿದ ಹೇಮರಡ್ಡಿ ಮಲ್ಲಮ್ಮ 12ನೇ ಶತಮಾನದ ಶಿವಶರಣೆಯರಂತೆ ವಚನಗಳನ್ನು ರಚಿಸಲಿಲ್ಲವಾದರೂ ಅವರ ಬದುಕೇ ಒಂದು ಬೃಹತ್ ವಚನ ಸಂಪುಟದಂತಿದೆ. ಅವರ ಜೀವನಮೌಲ್ಯಗಳು ಮನುಕುಲಕ್ಕೆ ಅದರಲ್ಲೂ ಸ್ತ್ರೀಕುಲಕ್ಕೆ ಅಮೂಲ್ಯ ಕಾಣಿಕೆಗಳಾಗಿವೆ ಎಂದರು.</p>.<p>ಪರಿಷತ್ತಿನ ಪದಾಧಿಕಾರಿಗಳಾದ ರಂಗನಾಥ ಅಕ್ಕಲಕೋಟ, ಎಸ್.ಡಿ.ಮಾದನ ಶೆಟ್ಟಿ, ಎಂ.ಆರ್.ಕಬಾಡೆ, ಎಸ್.ವೈ.ನಡುವಿನಕೇರಿ, ಪಂಡಿತರಾವ್ ಪಾಟೀಲ್, ಶಿವಲಿಂಗ ಕಿಣಗಿ ಶಂಕರ ಸಾತಪುತೆ ಹಾಗೂ ವಿಠ್ಠಲ್ ನಡುವಿನಮನಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>