ವಿಜಯಪುರ, ದೇವರಹಿಪ್ಪರಗಿ, ಸಿಂದಗಿ, ಇಂಡಿ, ತಾಂಬಾ, ಆಲಮೇಲ, ಕಲಕೇರಿ, ನಾಲತವಾಡ, ತಾಳಿಕೋಟೆ, ಬಸವನ ಬಾಗೇವಾಡಿ, ಮನಗೂಳಿ, ಆಲಮಟ್ಟಿ, ನಿಡಗುಂದಿ, ಕೊಲ್ಹಾರ, ತಿಕೋಟಾ, ಬಬಲೇಶ್ವರ ಸೇರಿದಂತೆ ಬಹುತೇಕ ಜಿಲ್ಲೆಯಾದ್ಯಂತ ಗುಡುಗು, ಸಿಡಿಲು ಮತ್ತು ಶೀತಗಾಳಿಯೊಂದಿಗೆ ‘ರೋಹಿಣಿ’ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಆಸೆ ಚಿಗುರಿಸಿದೆ.