<p><strong>ಕೊಲ್ಹಾರ</strong>: ‘ಪ್ರಸ್ತುತ ಕಲಿಕೆಯ ಜೊತೆಗೆ ಮಕ್ಕಳಿಗೆ ನೈತಿಕ ಮೌಲ್ ಅಳವಡಿಸಿಕೊಳ್ಳುವ ಶಿಕ್ಷಣ ನೀಡುವುದು ಅವಶ್ಯಕ’ ಎಂದು ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯರು ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ರೋಣಿಹಾಳ ಗ್ರಾಮದ ಸಂಗನಬಸವ ವಿದ್ಯಾವರ್ಧಕ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ, ಸಂಗನಬಸವ ಉತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ಶೈಕ್ಷಣಿಕ ರಂಗದ ಪ್ರತಿ ಹಂತದಲ್ಲೂ ಪಾಶ್ಚಾತ್ಯೀಕರಣ ಹಾಸುಹೊಕ್ಕಾಗಿದೆ. ಇದರ ನಡುವೆಯೇ ದೇಸಿ ಸಂಸ್ಕೃತಿ, ಆಚಾರ, ವಿಚಾರದ ತಿರುಳು ತಿಳಿಸುವ ಕಾರ್ಯ ನಡೆಯಬೇಕಿದೆ’ ಎಂದರು.</p>.<p>ಸಂಗನಬಸವ ಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವಿರೇಶ್ ಮನಗೂಳಿ, ‘ಮಕ್ಕಳ ಉತ್ತಮ ಬೆಳವಣಿಗೆಯಲ್ಲಿ ಆಹಾರ ಪದ್ಧತಿಯು ಪ್ರಮುಖ ಪಾತ್ರ ವಹಿಸುತ್ತದೆ. ಮಕ್ಕಳಿಗೆ ದೇಸಿ ಹಾಗೂ ಸಾವಯವ ಆಹಾರವನ್ನು ದೈನಂದಿನ ಪದ್ಧತಿಯಲ್ಲಿ ಅಳವಡಿಸಬೇಕು. ಇದು ಮಕ್ಕಳ ಮಾನಸಿಕ, ದೈಹಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ’ ಎಂದರು.</p>.<p>ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಜಗದೀಶ ಸಾಲಳ್ಳಿ ಮಾತನಾಡಿ, ‘ಕಲಿಕೆಯ ಕೊನೆಯ ಘಟ್ಟದಲ್ಲಿ ಜರುಗುವ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳು ಮಕ್ಕಳ ಮಾನಸಿಕ ವಿಕಸನಕ್ಕೆ ಸಹಕಾರಿಯಾಗುತ್ತವೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಕ್ಕಳು ಹಾಕುವ ಮಹಾನ್ ನಾಯಕರ ವೇಷಭೂಷಣಗಳಿಂದ ದೇಶಭಕ್ತಿಯ ಪ್ರೇರಣೆ ದೊರೆಯುತ್ತದೆ’ ಎಂದರು.</p>.<p>ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸಂಗನಬಸವ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಗನಬಸವ ಶಾಲೆಯಲ್ಲಿ ಕಲಿತು ವಿವಿಧ ವಸತಿ ಶಾಲೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.</p>.<p>ರಾಜಶೇಖರಯ್ಯ ಹಿರೇಮಠ, ಮಹಾಂತಯ್ಯ ಮಠಪತಿ ಸಾನ್ನಿಧ್ಯ ವಹಿಸಿದ್ದರು. ಶಿವಗೊಂಡ ಪಾರಗೊಂಡ ಅಧ್ಯಕ್ಷತೆ ವಹಿಸಿದ್ದರು. ದೇವರಾಜ ಅರಸು ಹಿಂದುಳಿದ ವರ್ಗ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಮಲ್ಲನಗೌಡ ಜಿ. ಬಿರಾದಾರ ಉದ್ಘಾಟನೆ ನೆರವೇರಿಸಿದರು.</p>.<p>ಅರುಣ ಡಿ. ಜೇವರಗಿ, ಬಸವರಾಜ ಪೂಜಾರಿ, ಸುಭಾಸ ಹ. ತಂಬ, ಮಲ್ಲು ದೇಸಾಯಿ, ಜಿ.ಆರ್ ನ್ಯಾಮಗೊಂಡ, ವಿರುಪಾಕ್ಷಿ ಮುತ್ತಗಿ, ಓಂಕಾರಗೌಡ ಪಾಟೀಲ, ಗುರನಗೌಡ ಬಿರಾದಾರ, ಗಂಗಾಧರ ಚೌಧರಿ, ವಿ.ಎಚ್ ಪುರೋಹಿತ, ಸಂಗಮೇಶ್ವರ ಜಂಗಶೆಟ್ಟಿ, ಆಡಳಿತಾಧಿಕಾರಿ ಅಪ್ಪು ಪತಂಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಹಾರ</strong>: ‘ಪ್ರಸ್ತುತ ಕಲಿಕೆಯ ಜೊತೆಗೆ ಮಕ್ಕಳಿಗೆ ನೈತಿಕ ಮೌಲ್ ಅಳವಡಿಸಿಕೊಳ್ಳುವ ಶಿಕ್ಷಣ ನೀಡುವುದು ಅವಶ್ಯಕ’ ಎಂದು ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯರು ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ರೋಣಿಹಾಳ ಗ್ರಾಮದ ಸಂಗನಬಸವ ವಿದ್ಯಾವರ್ಧಕ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ, ಸಂಗನಬಸವ ಉತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ಶೈಕ್ಷಣಿಕ ರಂಗದ ಪ್ರತಿ ಹಂತದಲ್ಲೂ ಪಾಶ್ಚಾತ್ಯೀಕರಣ ಹಾಸುಹೊಕ್ಕಾಗಿದೆ. ಇದರ ನಡುವೆಯೇ ದೇಸಿ ಸಂಸ್ಕೃತಿ, ಆಚಾರ, ವಿಚಾರದ ತಿರುಳು ತಿಳಿಸುವ ಕಾರ್ಯ ನಡೆಯಬೇಕಿದೆ’ ಎಂದರು.</p>.<p>ಸಂಗನಬಸವ ಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವಿರೇಶ್ ಮನಗೂಳಿ, ‘ಮಕ್ಕಳ ಉತ್ತಮ ಬೆಳವಣಿಗೆಯಲ್ಲಿ ಆಹಾರ ಪದ್ಧತಿಯು ಪ್ರಮುಖ ಪಾತ್ರ ವಹಿಸುತ್ತದೆ. ಮಕ್ಕಳಿಗೆ ದೇಸಿ ಹಾಗೂ ಸಾವಯವ ಆಹಾರವನ್ನು ದೈನಂದಿನ ಪದ್ಧತಿಯಲ್ಲಿ ಅಳವಡಿಸಬೇಕು. ಇದು ಮಕ್ಕಳ ಮಾನಸಿಕ, ದೈಹಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ’ ಎಂದರು.</p>.<p>ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಜಗದೀಶ ಸಾಲಳ್ಳಿ ಮಾತನಾಡಿ, ‘ಕಲಿಕೆಯ ಕೊನೆಯ ಘಟ್ಟದಲ್ಲಿ ಜರುಗುವ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳು ಮಕ್ಕಳ ಮಾನಸಿಕ ವಿಕಸನಕ್ಕೆ ಸಹಕಾರಿಯಾಗುತ್ತವೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಕ್ಕಳು ಹಾಕುವ ಮಹಾನ್ ನಾಯಕರ ವೇಷಭೂಷಣಗಳಿಂದ ದೇಶಭಕ್ತಿಯ ಪ್ರೇರಣೆ ದೊರೆಯುತ್ತದೆ’ ಎಂದರು.</p>.<p>ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸಂಗನಬಸವ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಗನಬಸವ ಶಾಲೆಯಲ್ಲಿ ಕಲಿತು ವಿವಿಧ ವಸತಿ ಶಾಲೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.</p>.<p>ರಾಜಶೇಖರಯ್ಯ ಹಿರೇಮಠ, ಮಹಾಂತಯ್ಯ ಮಠಪತಿ ಸಾನ್ನಿಧ್ಯ ವಹಿಸಿದ್ದರು. ಶಿವಗೊಂಡ ಪಾರಗೊಂಡ ಅಧ್ಯಕ್ಷತೆ ವಹಿಸಿದ್ದರು. ದೇವರಾಜ ಅರಸು ಹಿಂದುಳಿದ ವರ್ಗ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಮಲ್ಲನಗೌಡ ಜಿ. ಬಿರಾದಾರ ಉದ್ಘಾಟನೆ ನೆರವೇರಿಸಿದರು.</p>.<p>ಅರುಣ ಡಿ. ಜೇವರಗಿ, ಬಸವರಾಜ ಪೂಜಾರಿ, ಸುಭಾಸ ಹ. ತಂಬ, ಮಲ್ಲು ದೇಸಾಯಿ, ಜಿ.ಆರ್ ನ್ಯಾಮಗೊಂಡ, ವಿರುಪಾಕ್ಷಿ ಮುತ್ತಗಿ, ಓಂಕಾರಗೌಡ ಪಾಟೀಲ, ಗುರನಗೌಡ ಬಿರಾದಾರ, ಗಂಗಾಧರ ಚೌಧರಿ, ವಿ.ಎಚ್ ಪುರೋಹಿತ, ಸಂಗಮೇಶ್ವರ ಜಂಗಶೆಟ್ಟಿ, ಆಡಳಿತಾಧಿಕಾರಿ ಅಪ್ಪು ಪತಂಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>