ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣಾ ನದಿಯಲ್ಲಿ ತಾಯಿ, ಮಗಳ ಶವ ಪತ್ತೆ

Last Updated 12 ಜುಲೈ 2020, 16:42 IST
ಅಕ್ಷರ ಗಾತ್ರ

ಕೊಲ್ಹಾರ: ತಾಲ್ಲೂಕಿನ ಬಳೂತಿ ಜಾಕ್‌ವೆಲ್ ಬಳಿಯ ಕೃಷ್ಣಾ ನದಿ ದಡದಲ್ಲಿ ಭಾನುವಾರ ವಿಜಯಪುರ ಮೂಲದ ತಾಯಿ, ಮಗಳ ಶವ ಪತ್ತೆಯಾಗಿವೆ.

ಶಕುಂತಲಾ ಸಿದ್ದಣ್ಣ ಖೇಡ (50) ಹಾಗೂ ಗಂಗಾ ಉದಯ್ ಹುಣಶ್ಯಾಳ (22) ಮೃತ ತಾಯಿ, ಮಗಳು.

ತಾಯಿ ಶಕುಂತಲಾ ಅವರ ಪತಿ ಕಳೆದ ಒಂದೂವರೆ ವರ್ಷಗಳ ಹಿಂದೆ ತೀರಿಹೋಗಿದ್ದು, ತೀವ್ರವಾಗಿ ಮನನೊಂದಿದ್ದರು. ಮಗಳು ಗಂಗಾ ಮಾನಸಿಕ ಅಸ್ವಸ್ಥಳಾಗಿದ್ದಳು ಎನ್ನಲಾಗಿದೆ.

ಇಬ್ಬರು ಶನಿವಾರ ಕೊರ್ತಿ-ಕೊಲ್ಹಾರ ಸೇತುವೆ ಬಳಿಯ ಕೃಷ್ಣಾ ನದಿಗೆ ಹಾರಿ, ಆತ್ಮಹತ್ಯೆ ಮಾಡಿಕೊಂಡಿದ್ದರು. ಭಾನುವಾರ ಬಳೂತಿ ಜಾಕ್‌ವೆಲ್‌ ಬಳಿಯ ನದಿ ದಂಡೆಯಲ್ಲಿ ಶವಗಳು ದೊರೆತಿವೆ. ಈ ಕುರಿತು ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT