<p><strong>ವಿಜಯಪುರ</strong>: ‘ತಾಯಿ ದೇವರ ಪವಿತ್ರ ಸೃಷ್ಟಿ. ನಮಗೆ ಜೀವ ನೀಡುವ ಮೂಲ. ಅವಳು ನಿಸ್ವಾರ್ಥ ಪ್ರೀತಿ, ತ್ಯಾಗ, ಕ್ಷಮೆ ಮತ್ತು ತಾಳ್ಮೆಯ ಪ್ರತಿಮೆ’ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.</p>.<p>ತಾಲ್ಲೂಕಿನ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಭಾನುವಾರ ನಡೆದ ವಿಶ್ವ ತಾಯಂದಿರ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಾತ್ಸಲ್ಯದ ಮೂರ್ತಿಯಾದ ತಾಯಿಯು ತನ್ನ ಹಸಿವು, ದಣಿವು ಮರೆತು ಮಕ್ಕಳ ಸಂತೋಷ, ಗೆಲುವನ್ನು ತನ್ನ ಜೀವನದ ಗುರಿಯಾಗಿಸಿಕೊಂಡು ಅವಿರತವಾಗಿ ಶ್ರಮಿಸುವಳು. ಮಗುವಿನ ಭಾವನಾತ್ಮಕ ಮತ್ತು ಮಾನಸಿಕ ಬೆಳವಣಿಗೆಯನ್ನು ನಿರ್ಮಿಸುವ ಮೂಲಾಧಾರವೇ ತಾಯಿಯಾಗಿದ್ದಾಳೆ’ ಎಂದು ಹೇಳಿದರು.</p>.<p>ಸಾಹೇಬಲಾಲ ವಾಲೀಕಾರ ಮಾತನಾಡಿ, ‘ಮಕ್ಕಳಿಗೆ ಸೂಕ್ತ ಮಾರ್ಗದಲ್ಲಿ ಮುನ್ನಡೆಸಿ, ಜೀವನದಲ್ಲಿ ಯಶಸ್ಸು ಸಾಧಿಸಲು ಸಹಾಯ ಮಾಡುವ ಮಾರ್ಗದರ್ಶಕ ಆತ್ಮವೇ ತಾಯಿ’ ಎಂದರು.</p>.<p>ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ, ವಿಶ್ವನಾಥ ಕಲಗೊಂಡ, ಸುನಂದಾ ಹುಣಶ್ಯಾಳ, ನವೀನ ಬಂಡೆನ್ನವರ, ಜಯಶ್ರೀ ಬಂಗಾರಿ, ಸಚೀನ ಅವಟಿ, ರೇಣುಕಾ ಭಜಂತ್ರಿ, ವೀರೇಶ ಹುಣಶ್ಯಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ‘ತಾಯಿ ದೇವರ ಪವಿತ್ರ ಸೃಷ್ಟಿ. ನಮಗೆ ಜೀವ ನೀಡುವ ಮೂಲ. ಅವಳು ನಿಸ್ವಾರ್ಥ ಪ್ರೀತಿ, ತ್ಯಾಗ, ಕ್ಷಮೆ ಮತ್ತು ತಾಳ್ಮೆಯ ಪ್ರತಿಮೆ’ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.</p>.<p>ತಾಲ್ಲೂಕಿನ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಭಾನುವಾರ ನಡೆದ ವಿಶ್ವ ತಾಯಂದಿರ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಾತ್ಸಲ್ಯದ ಮೂರ್ತಿಯಾದ ತಾಯಿಯು ತನ್ನ ಹಸಿವು, ದಣಿವು ಮರೆತು ಮಕ್ಕಳ ಸಂತೋಷ, ಗೆಲುವನ್ನು ತನ್ನ ಜೀವನದ ಗುರಿಯಾಗಿಸಿಕೊಂಡು ಅವಿರತವಾಗಿ ಶ್ರಮಿಸುವಳು. ಮಗುವಿನ ಭಾವನಾತ್ಮಕ ಮತ್ತು ಮಾನಸಿಕ ಬೆಳವಣಿಗೆಯನ್ನು ನಿರ್ಮಿಸುವ ಮೂಲಾಧಾರವೇ ತಾಯಿಯಾಗಿದ್ದಾಳೆ’ ಎಂದು ಹೇಳಿದರು.</p>.<p>ಸಾಹೇಬಲಾಲ ವಾಲೀಕಾರ ಮಾತನಾಡಿ, ‘ಮಕ್ಕಳಿಗೆ ಸೂಕ್ತ ಮಾರ್ಗದಲ್ಲಿ ಮುನ್ನಡೆಸಿ, ಜೀವನದಲ್ಲಿ ಯಶಸ್ಸು ಸಾಧಿಸಲು ಸಹಾಯ ಮಾಡುವ ಮಾರ್ಗದರ್ಶಕ ಆತ್ಮವೇ ತಾಯಿ’ ಎಂದರು.</p>.<p>ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ, ವಿಶ್ವನಾಥ ಕಲಗೊಂಡ, ಸುನಂದಾ ಹುಣಶ್ಯಾಳ, ನವೀನ ಬಂಡೆನ್ನವರ, ಜಯಶ್ರೀ ಬಂಗಾರಿ, ಸಚೀನ ಅವಟಿ, ರೇಣುಕಾ ಭಜಂತ್ರಿ, ವೀರೇಶ ಹುಣಶ್ಯಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>