<p><strong>ವಿಜಯಪುರ: </strong>ಬೀದಿ ಬದಿ ವ್ಯಾಪಾರಿಗಳ ಪಿಎಂ ಸ್ವನಿಧಿ ಯೋಜನೆ, ಪಿಎಂಇಜಿಪಿ ಮತ್ತು ಡೇ ನಲ್ಮ್ ಸೇರಿದಂತೆ ಜಿಲ್ಲೆಯಲ್ಲಿ ವಿವಿಧ ಬ್ಯಾಂಕಿನಲ್ಲಿ ಬಾಕಿ ಇರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದುಸಂಸದರಮೇಶ ಜಿಗಜಿಣಗಿ ಸೂಚಿಸಿದರು.</p>.<p>ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಬ್ಯಾಂಕುಗಳ ಮುಖ್ಯಸ್ಥರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಜಿಲ್ಲಾ ಮಟ್ಟದ ಬ್ಯಾಂಕುಗಳ ಸಮೀಕ್ಷಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲೆಯಲ್ಲಿ ಹೆಚ್ಚಿನ ರೈತರು ದೀರ್ಘಾವಧಿ ಕೃಷಿ ಸಾಲ ಪಡೆದು ತಮ್ಮ ಕೃಷಿ ಭೂಮಿ ಅಭಿವೃದ್ಧಿಪಡಿಸಿ ಕೃಷಿ ಉತ್ಪನ್ನ ಹೆಚ್ಚು ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ಜುಲೈನಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಅಡಿಯಲ್ಲಿ ಸ್ವಾನಿಧಿ ಉತ್ಸವ ಹಮ್ಮಿಕೊಳ್ಳುತ್ತಿದ್ದು, ಎಲ್ಲ ಬ್ಯಾಂಕಿನ ಅಧಿಕಾರಿಗಳು ಕೈಜೋಡಿಸಿ ಈ ಕಾರ್ಯಕ್ರಮ ಚೆನ್ನಾಗಿ ಮೂಡಿಬರಲು ಸಹಾಯ ಮಾಡಬೇಕು ಎಂದರು.</p>.<p>ವಿವಿಧ ಬ್ಯಾಂಕಿನಲ್ಲಿ ಬಾಕಿ ಇರುವ ಬೆಳೆ ವಿಮೆ ಅರ್ಜಿಗಳು, ಸಾಲ ಮನ್ನಾ ಯೋಜನೆಯ ಅರ್ಹ ಫಲಾನುಭವಿಗಳ ಅರ್ಜಿಗಳು, ತಹಶೀಲ್ದಾರ್ ಮಟ್ಟದಲ್ಲಿ ಹಾಗೂ ಬ್ಯಾಂಕುಗಳ ಮಟ್ಟದಲ್ಲಿ ಬಾಕಿ ಇರುವ ಅರ್ಜಿಗಳನ್ನು ಕೂಡಲೆ ವಿಲೇವಾರಿ ಮಾಡಲು ಸೂಚಿಸಿದರು.</p>.<p>ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳು ಒಮ್ಮತದಿಂದ ಜಿಲ್ಲೆಯ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲು ತಿಳಿಸಿದರು.</p>.<p>ಡಿವೈಎಸ್ಪಿ ಜಯಪ್ರಕಾಶ ನ್ಯಾಮಗೌಡ, ಆರ್ಬಿಐ ಜಿಲ್ಲಾ ಅಧಿಕಾರಿ ಶ್ರೀಶಾಂತ ಪ್ರಕಾಶ, ಲೀಡ್ ಬ್ಯಾಂಕಿನ ವ್ಯವಸ್ಥಾಪಕ ನರೇಂದ್ರ ಬಾಬು, ನಬಾರ್ಡ್ ಬ್ಯಾಂಕಿನ ಜಿಲ್ಲಾ ಅಭಿವೃದ್ಧಿ ಅಧಿಕಾರಿ ವಿಕಾಸ ರಾಠೋಡ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಬೀದಿ ಬದಿ ವ್ಯಾಪಾರಿಗಳ ಪಿಎಂ ಸ್ವನಿಧಿ ಯೋಜನೆ, ಪಿಎಂಇಜಿಪಿ ಮತ್ತು ಡೇ ನಲ್ಮ್ ಸೇರಿದಂತೆ ಜಿಲ್ಲೆಯಲ್ಲಿ ವಿವಿಧ ಬ್ಯಾಂಕಿನಲ್ಲಿ ಬಾಕಿ ಇರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದುಸಂಸದರಮೇಶ ಜಿಗಜಿಣಗಿ ಸೂಚಿಸಿದರು.</p>.<p>ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಬ್ಯಾಂಕುಗಳ ಮುಖ್ಯಸ್ಥರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಜಿಲ್ಲಾ ಮಟ್ಟದ ಬ್ಯಾಂಕುಗಳ ಸಮೀಕ್ಷಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲೆಯಲ್ಲಿ ಹೆಚ್ಚಿನ ರೈತರು ದೀರ್ಘಾವಧಿ ಕೃಷಿ ಸಾಲ ಪಡೆದು ತಮ್ಮ ಕೃಷಿ ಭೂಮಿ ಅಭಿವೃದ್ಧಿಪಡಿಸಿ ಕೃಷಿ ಉತ್ಪನ್ನ ಹೆಚ್ಚು ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ಜುಲೈನಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಅಡಿಯಲ್ಲಿ ಸ್ವಾನಿಧಿ ಉತ್ಸವ ಹಮ್ಮಿಕೊಳ್ಳುತ್ತಿದ್ದು, ಎಲ್ಲ ಬ್ಯಾಂಕಿನ ಅಧಿಕಾರಿಗಳು ಕೈಜೋಡಿಸಿ ಈ ಕಾರ್ಯಕ್ರಮ ಚೆನ್ನಾಗಿ ಮೂಡಿಬರಲು ಸಹಾಯ ಮಾಡಬೇಕು ಎಂದರು.</p>.<p>ವಿವಿಧ ಬ್ಯಾಂಕಿನಲ್ಲಿ ಬಾಕಿ ಇರುವ ಬೆಳೆ ವಿಮೆ ಅರ್ಜಿಗಳು, ಸಾಲ ಮನ್ನಾ ಯೋಜನೆಯ ಅರ್ಹ ಫಲಾನುಭವಿಗಳ ಅರ್ಜಿಗಳು, ತಹಶೀಲ್ದಾರ್ ಮಟ್ಟದಲ್ಲಿ ಹಾಗೂ ಬ್ಯಾಂಕುಗಳ ಮಟ್ಟದಲ್ಲಿ ಬಾಕಿ ಇರುವ ಅರ್ಜಿಗಳನ್ನು ಕೂಡಲೆ ವಿಲೇವಾರಿ ಮಾಡಲು ಸೂಚಿಸಿದರು.</p>.<p>ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳು ಒಮ್ಮತದಿಂದ ಜಿಲ್ಲೆಯ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲು ತಿಳಿಸಿದರು.</p>.<p>ಡಿವೈಎಸ್ಪಿ ಜಯಪ್ರಕಾಶ ನ್ಯಾಮಗೌಡ, ಆರ್ಬಿಐ ಜಿಲ್ಲಾ ಅಧಿಕಾರಿ ಶ್ರೀಶಾಂತ ಪ್ರಕಾಶ, ಲೀಡ್ ಬ್ಯಾಂಕಿನ ವ್ಯವಸ್ಥಾಪಕ ನರೇಂದ್ರ ಬಾಬು, ನಬಾರ್ಡ್ ಬ್ಯಾಂಕಿನ ಜಿಲ್ಲಾ ಅಭಿವೃದ್ಧಿ ಅಧಿಕಾರಿ ವಿಕಾಸ ರಾಠೋಡ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>