<p><strong>ಮುದ್ದೇಬಿಹಾಳ: ‘</strong>ಜೀವಿಗಳಿರುವ ಏಕೈಕ ಗ್ರಹವೆಂದರೆ ಭೂಮಿ. ಅದನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಮಾನವ ಜನಾಂಗದ ಮೇಲಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟೀಮನಿ ಹೇಳಿದರು.</p>.<p>ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಭೂಮಿ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಭೂಮಿಯನ್ನು ಸ್ವಚ್ಛವಾಗಿ ಇಟ್ಟುಕೊಂಡಷ್ಟೂ, ಅದರ ಮೇಲೆ ವಾಸಿಸುವ ಜೀವಿಗಳೆಲ್ಲ ನೆಮ್ಮದಿಯಿಂದ ಇರಲು ಸಾಧ್ಯವಿದೆ’ ಎಂದರು.</p>.<p>ವಕೀಲ ಸಿದ್ಧನಗೌಡ ಬಿರಾದಾರ ಮಾತನಾಡಿ, ‘ಎಲ್ಲೆಡೆ ಕೃಷಿ ಭೂಮಿ ಕಡಿಮೆಯಾಗುತ್ತಿದೆ. ನಗರೀಕರಣದ ಪ್ರಭಾವದಿಂದ ಮುದೊಂದು ದಿನ ಆಹಾರ ಬೆಳೆಯಲು ಭೂಮಿಯೇ ಸಿಗದಂತಾಗುವ ಆತಂಕವಿದೆ. ಇದಕ್ಕೂ ಮುನ್ನ ನಾವು ಎಚ್ಚೆತ್ತುಕೊಳ್ಳಬೇಕು’ ಎಂದು ಹೇಳಿದರು.</p>.<p>ಸಿವಿಲ್ ನ್ಯಾಯಾಧೀಶ ಸಂಪತ್ ಕುಮಾರ ಬಳೂಲಗಿಡದ, ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್. ಮಾಲಗತ್ತಿ, ಸಹಾಯಕ ಸರ್ಕಾರಿ ಅಭಿಯೋಜಕ ನಾಗರಾಜ ಪೂಜಾರ, ಬಸವರಾಜ ಆಹೇರಿ, ಎಚ್.ಎಲ್. ಸರೂರ, ಪಿ.ಬಿ. ಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದ್ದೇಬಿಹಾಳ: ‘</strong>ಜೀವಿಗಳಿರುವ ಏಕೈಕ ಗ್ರಹವೆಂದರೆ ಭೂಮಿ. ಅದನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಮಾನವ ಜನಾಂಗದ ಮೇಲಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟೀಮನಿ ಹೇಳಿದರು.</p>.<p>ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಭೂಮಿ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಭೂಮಿಯನ್ನು ಸ್ವಚ್ಛವಾಗಿ ಇಟ್ಟುಕೊಂಡಷ್ಟೂ, ಅದರ ಮೇಲೆ ವಾಸಿಸುವ ಜೀವಿಗಳೆಲ್ಲ ನೆಮ್ಮದಿಯಿಂದ ಇರಲು ಸಾಧ್ಯವಿದೆ’ ಎಂದರು.</p>.<p>ವಕೀಲ ಸಿದ್ಧನಗೌಡ ಬಿರಾದಾರ ಮಾತನಾಡಿ, ‘ಎಲ್ಲೆಡೆ ಕೃಷಿ ಭೂಮಿ ಕಡಿಮೆಯಾಗುತ್ತಿದೆ. ನಗರೀಕರಣದ ಪ್ರಭಾವದಿಂದ ಮುದೊಂದು ದಿನ ಆಹಾರ ಬೆಳೆಯಲು ಭೂಮಿಯೇ ಸಿಗದಂತಾಗುವ ಆತಂಕವಿದೆ. ಇದಕ್ಕೂ ಮುನ್ನ ನಾವು ಎಚ್ಚೆತ್ತುಕೊಳ್ಳಬೇಕು’ ಎಂದು ಹೇಳಿದರು.</p>.<p>ಸಿವಿಲ್ ನ್ಯಾಯಾಧೀಶ ಸಂಪತ್ ಕುಮಾರ ಬಳೂಲಗಿಡದ, ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್. ಮಾಲಗತ್ತಿ, ಸಹಾಯಕ ಸರ್ಕಾರಿ ಅಭಿಯೋಜಕ ನಾಗರಾಜ ಪೂಜಾರ, ಬಸವರಾಜ ಆಹೇರಿ, ಎಚ್.ಎಲ್. ಸರೂರ, ಪಿ.ಬಿ. ಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>