<p><strong>ಮುದ್ದೇಬಿಹಾಳ</strong>: ಈಚೆಗೆ ಹತ್ಯೆಯಾದ ತಾಲ್ಲೂಕಿನ ನಾಗರಬೆಟ್ಟದ ರವಿಚಂದ್ರ ಮಾದರ ಮನೆಗೆ ಮುದ್ದೇಬಿಹಾಳ ತಹಶೀಲ್ದಾರ್ ಕೀರ್ತಿ ಚಾಲಕ ಶುಕ್ರವಾರ ಭೇಟಿ ನೀಡಿ ಪರಿಹಾರ ನೀಡುವ ಭರವಸೆ ನೀಡಿದರು.</p>.<p>ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ₹4,12,500 ಪರಿಹಾರ ನೀಡಲಾಗುತ್ತದೆ. ಕುಟುಂಬಸ್ಥರಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು. ಸದ್ಯ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕುಟುಂಬ ನಿರ್ವಹಣೆಗೆ ಸಹಾಯ ಮಾಡಲಾಗುವುದು ಎಂದರು.</p>.<p>ಮೃತರ ಕುಟುಂಬದವರು ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಿ, ‘ಕುಟುಂಬಸ್ಥರಿಗೆ ನ್ಯಾಯ ಒದಗಿಸಬೇಕು. ಮೃತ ಯುವಕನ ಸಹೋದರ ಮಂಜುನಾಥ ದೇವಪ್ಪ ಮಾದರಗೆ ಸರ್ಕಾರಿ ನೌಕರಿ ಒದಗಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>ತಾಲ್ಲೂಕು ಪಂಚಾಯಿತಿ ಇಒ ಸಂಗನಗೌಡ ಬಿರಾದಾರ, ಸಮಾಜ ಕಲ್ಯಾಣ ಇಲಾಕೆಯ ಬಸಂತಿ ಮಠ, ಕಂದಾಯ ನೀರಿಕ್ಷಕ ವೆಂಕಟೇಶ ಅಂಬಿಗೇರ, ತಿಪ್ಪಣ್ಣ ದೊಡಮನಿ, ದೇವಪ್ಪ ಮಾದರ, ಮಲ್ಲು ಬಿಜ್ಜೂರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-26-721317562</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದ್ದೇಬಿಹಾಳ</strong>: ಈಚೆಗೆ ಹತ್ಯೆಯಾದ ತಾಲ್ಲೂಕಿನ ನಾಗರಬೆಟ್ಟದ ರವಿಚಂದ್ರ ಮಾದರ ಮನೆಗೆ ಮುದ್ದೇಬಿಹಾಳ ತಹಶೀಲ್ದಾರ್ ಕೀರ್ತಿ ಚಾಲಕ ಶುಕ್ರವಾರ ಭೇಟಿ ನೀಡಿ ಪರಿಹಾರ ನೀಡುವ ಭರವಸೆ ನೀಡಿದರು.</p>.<p>ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ₹4,12,500 ಪರಿಹಾರ ನೀಡಲಾಗುತ್ತದೆ. ಕುಟುಂಬಸ್ಥರಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು. ಸದ್ಯ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕುಟುಂಬ ನಿರ್ವಹಣೆಗೆ ಸಹಾಯ ಮಾಡಲಾಗುವುದು ಎಂದರು.</p>.<p>ಮೃತರ ಕುಟುಂಬದವರು ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಿ, ‘ಕುಟುಂಬಸ್ಥರಿಗೆ ನ್ಯಾಯ ಒದಗಿಸಬೇಕು. ಮೃತ ಯುವಕನ ಸಹೋದರ ಮಂಜುನಾಥ ದೇವಪ್ಪ ಮಾದರಗೆ ಸರ್ಕಾರಿ ನೌಕರಿ ಒದಗಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>ತಾಲ್ಲೂಕು ಪಂಚಾಯಿತಿ ಇಒ ಸಂಗನಗೌಡ ಬಿರಾದಾರ, ಸಮಾಜ ಕಲ್ಯಾಣ ಇಲಾಕೆಯ ಬಸಂತಿ ಮಠ, ಕಂದಾಯ ನೀರಿಕ್ಷಕ ವೆಂಕಟೇಶ ಅಂಬಿಗೇರ, ತಿಪ್ಪಣ್ಣ ದೊಡಮನಿ, ದೇವಪ್ಪ ಮಾದರ, ಮಲ್ಲು ಬಿಜ್ಜೂರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-26-721317562</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>