ವಿಜಯಪುರ: ಸೋಮವಾರ ನಿಧನರಾದಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು, 2013 ಸೆಪ್ಟೆಂಬರ್ 24ರಂದು ನಡೆದ ನಗರದ ಸೈನಿಕ ಶಾಲೆಯ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.
ಸೈನಿಕ ಶಾಲೆಯ ಒಳಾಂಗಣ ಕ್ರೀಡಾಂಗಣ ಉದ್ಘಾಟಿಸಿ ಮಾತನಾಡಿದ್ದ ಅವರು,ಸೈನಿಕ ಶಾಲೆ ಬಗ್ಗೆ ಪ್ರಶಂಸೆಯ ಮಾತನಾಡಿದ್ದರು. ಅಲ್ಲದೇ, ಸೈನಿಕ ಶಾಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿ ನಿವೃತ್ತರಾದವರಿಗೆ ಪ್ರಣಬ್ ಮುಖರ್ಜಿ ಸನ್ಮಾನಿಸಿದ್ದರು.
ಆ ಕಾರ್ಯಕ್ರಮದಲ್ಲಿ ಮುಖರ್ಜಿ ಅವರೊಂದಿಗೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರಾಗಿದ್ದ ಎಚ್.ಆರ್.ಭಾರಧ್ವಜ್ ಹಾಗೂ ಸಚಿವರಾಗಿದ್ದ ಎಂ.ಬಿ.ಪಾಟೀಲ, ಎಸ್.ಆರ್.ಪಾಟೀಲ, ಸಂಸದ ರಮೇಶ ಜಿಗಜಿಣಗಿ ಮತ್ತಿತರರು ಪಾಲ್ಗೊಂಡಿದ್ದರು.