<p><strong>ಸಿಂದಗಿ(ವಿಜಯಪುರ): </strong>‘ದೇವಸ್ಥಾನದ ಕಟ್ಟೆ ಮೇಲೆ ತಮಗೆ ಸರಿಸಮನಾಗಿ ಕುಳಿತಿದ್ದಾನೆ’ ಎಂಬ ಕಾರಣಕ್ಕೆ ಮೇಲ್ಜಾತಿಯವರಿಂದ ಹತ್ಯೆಗೀಡಾದ ಪರಿಶಿಷ್ಟ ಜಾತಿಯ ಯುವ ಮುಖಂಡಅನಿಲ ಇಂಗಳಗಿ (28)ಯ ಶವವಿಟ್ಟು ಪಟ್ಟಣದಲ್ಲಿ ಗುರುವಾರಪ್ರತಿಭಟನೆ ನಡೆಸಲಾಯಿತು.</p>.<p>ಬೂದಿಗಾಳ ಪಿ.ಎಚ್. ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಕಟ್ಟೆಯ ಮೇಲೆಕೆಲವು ದಿನಗಳ ಹಿಂದೆ ಅನಿಲ ಇಂಗಳಗಿ ತಮಗೆ ಸರಿಸಮನಾಗಿ ಕುಳಿತಿದ್ದಕ್ಕೆ ಅದೇ ಗ್ರಾಮದ ಮೇಲ್ಜಾತಿಯ ಸಿದ್ದು ಸುಭಾಸ ಬಿರಾದಾರ ಎಂಬುವವರು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ, ಜಾತಿಯ ಹೆಸರಲ್ಲಿ ಹೀಯಾಳಿಸಿದ್ದರು.</p>.<p>ಇದೇ ಕಾರಣಕ್ಕೆ ಆರೋಪಿ ಸಿದ್ದು, ಬುಧವಾರ ತನ್ನ ಸಂಬಂಧಿ ಸಂತೋಷ ಎಂಬಾತನ ಜತೆಗೂಡಿ ಅನಿಲ ಇಂಗಳಗಿ ಕಣ್ಣಿಗೆ ಕಾರದ ಪುಡಿ ಎರಚಿ, ಚೂರಿಯಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಸಿಂದಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಘಟನೆಯ ಹಿನ್ನೆಲೆಯಲ್ಲಿ ಎಸ್ಸಿ ಸಮುದಾಯದ ನೂರಾರು ಜನರು ಸಿಂದಗಿಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿ, ವಿಜಯಪುರ ಮುಖ್ಯ ರಸ್ತೆ ಸಂಪೂರ್ಣ ಬಂದ್ ಮಾಡಿ ಮಾನವ ಸರಪಳಿ ನಿರ್ಮಿಸಿದರು. ಅನಿಲ ಇಂಗಳಗಿ ಶವವನ್ನು ಇಟ್ಟು ಕೆಲಕಾಲ ರಸ್ತೆ ತಡೆ ನಡೆಸಿದರು.</p>.<p>ಮುಖಂಡರಾದ ಸಾಯಬಣ್ಣ ದೇವರಮನಿ, ಅಶೋಕ ಸುಲ್ಪಿ ಮಾತನಾಡಿ, ‘ಹಾಡಹಗಲೇ ಮೇಲ್ವರ್ಗದ ವ್ಯಕ್ತಿಗಳಿಂದ ಯುವ ಮುಖಂಡನ ಬರ್ಬರ ಹತ್ಯೆ ನಡೆದಿರುವುದು ಇಡೀ ಸಮಾಜ ತಲೆ ತಗ್ಗಿಸುವಂಥ ಘಟನೆಯಾಗಿದೆ. ಇಂಥ ಘಟನೆ ನಡೆದಿದ್ದರೂ ಜನಪ್ರತಿನಿಧಿಗಳು ಮೌನದಿಂದಿರುವುದು ನಾಚಿಕೆಗೇಡಿನ ಸಂಗತಿ’ ಎಂದು ಟೀಕಿಸಿದರು.</p>.<p>‘ಕೂಡಲೇ ಆರೋಪಿಗಳನ್ನು ಬಂಧಿಸಿ, ಗಲ್ಲು ಶಿಕ್ಷೆಗೊಳಪಡಿಸಬೇಕು. ಮೃತರ ಕುಟುಂಬದವರಿಗೆ ಸೂಕ್ತ ರಕ್ಷಣೆನೀಡಬೇಕು. ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳುಕೂಡಲೇ ಮೃತನ ಕುಟುಂಬದವರಿಗೆ ಪರಿಹಾರ ನೀಡಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p>.<p class="Subhead"><strong>ಪರಿಹಾರ ವಿತರಣೆ: </strong>ಬೂದಿಹಾಳ ಪಿ.ಎಚ್.ಗ್ರಾಮಕ್ಕೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸರ್ಕಾರದಿಂದ ನೀಡಲಾಗುವ ₹8.25ಲಕ್ಷ ಪರಿಹಾರದಲ್ಲಿತುರ್ತಾಗಿ ₹ 4.12 ಲಕ್ಷ ನೀಡಲಾಗುವುದು. ಅವರ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ, ಅಲ್ಲದೇ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಯೋಜನೆಗಳಲ್ಲಿ ಇವರಿಗೆ ಪ್ರಥಮ ಆದ್ಯತೆ ನೀಡುವ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ(ವಿಜಯಪುರ): </strong>‘ದೇವಸ್ಥಾನದ ಕಟ್ಟೆ ಮೇಲೆ ತಮಗೆ ಸರಿಸಮನಾಗಿ ಕುಳಿತಿದ್ದಾನೆ’ ಎಂಬ ಕಾರಣಕ್ಕೆ ಮೇಲ್ಜಾತಿಯವರಿಂದ ಹತ್ಯೆಗೀಡಾದ ಪರಿಶಿಷ್ಟ ಜಾತಿಯ ಯುವ ಮುಖಂಡಅನಿಲ ಇಂಗಳಗಿ (28)ಯ ಶವವಿಟ್ಟು ಪಟ್ಟಣದಲ್ಲಿ ಗುರುವಾರಪ್ರತಿಭಟನೆ ನಡೆಸಲಾಯಿತು.</p>.<p>ಬೂದಿಗಾಳ ಪಿ.ಎಚ್. ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಕಟ್ಟೆಯ ಮೇಲೆಕೆಲವು ದಿನಗಳ ಹಿಂದೆ ಅನಿಲ ಇಂಗಳಗಿ ತಮಗೆ ಸರಿಸಮನಾಗಿ ಕುಳಿತಿದ್ದಕ್ಕೆ ಅದೇ ಗ್ರಾಮದ ಮೇಲ್ಜಾತಿಯ ಸಿದ್ದು ಸುಭಾಸ ಬಿರಾದಾರ ಎಂಬುವವರು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ, ಜಾತಿಯ ಹೆಸರಲ್ಲಿ ಹೀಯಾಳಿಸಿದ್ದರು.</p>.<p>ಇದೇ ಕಾರಣಕ್ಕೆ ಆರೋಪಿ ಸಿದ್ದು, ಬುಧವಾರ ತನ್ನ ಸಂಬಂಧಿ ಸಂತೋಷ ಎಂಬಾತನ ಜತೆಗೂಡಿ ಅನಿಲ ಇಂಗಳಗಿ ಕಣ್ಣಿಗೆ ಕಾರದ ಪುಡಿ ಎರಚಿ, ಚೂರಿಯಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಸಿಂದಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಘಟನೆಯ ಹಿನ್ನೆಲೆಯಲ್ಲಿ ಎಸ್ಸಿ ಸಮುದಾಯದ ನೂರಾರು ಜನರು ಸಿಂದಗಿಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿ, ವಿಜಯಪುರ ಮುಖ್ಯ ರಸ್ತೆ ಸಂಪೂರ್ಣ ಬಂದ್ ಮಾಡಿ ಮಾನವ ಸರಪಳಿ ನಿರ್ಮಿಸಿದರು. ಅನಿಲ ಇಂಗಳಗಿ ಶವವನ್ನು ಇಟ್ಟು ಕೆಲಕಾಲ ರಸ್ತೆ ತಡೆ ನಡೆಸಿದರು.</p>.<p>ಮುಖಂಡರಾದ ಸಾಯಬಣ್ಣ ದೇವರಮನಿ, ಅಶೋಕ ಸುಲ್ಪಿ ಮಾತನಾಡಿ, ‘ಹಾಡಹಗಲೇ ಮೇಲ್ವರ್ಗದ ವ್ಯಕ್ತಿಗಳಿಂದ ಯುವ ಮುಖಂಡನ ಬರ್ಬರ ಹತ್ಯೆ ನಡೆದಿರುವುದು ಇಡೀ ಸಮಾಜ ತಲೆ ತಗ್ಗಿಸುವಂಥ ಘಟನೆಯಾಗಿದೆ. ಇಂಥ ಘಟನೆ ನಡೆದಿದ್ದರೂ ಜನಪ್ರತಿನಿಧಿಗಳು ಮೌನದಿಂದಿರುವುದು ನಾಚಿಕೆಗೇಡಿನ ಸಂಗತಿ’ ಎಂದು ಟೀಕಿಸಿದರು.</p>.<p>‘ಕೂಡಲೇ ಆರೋಪಿಗಳನ್ನು ಬಂಧಿಸಿ, ಗಲ್ಲು ಶಿಕ್ಷೆಗೊಳಪಡಿಸಬೇಕು. ಮೃತರ ಕುಟುಂಬದವರಿಗೆ ಸೂಕ್ತ ರಕ್ಷಣೆನೀಡಬೇಕು. ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳುಕೂಡಲೇ ಮೃತನ ಕುಟುಂಬದವರಿಗೆ ಪರಿಹಾರ ನೀಡಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p>.<p class="Subhead"><strong>ಪರಿಹಾರ ವಿತರಣೆ: </strong>ಬೂದಿಹಾಳ ಪಿ.ಎಚ್.ಗ್ರಾಮಕ್ಕೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸರ್ಕಾರದಿಂದ ನೀಡಲಾಗುವ ₹8.25ಲಕ್ಷ ಪರಿಹಾರದಲ್ಲಿತುರ್ತಾಗಿ ₹ 4.12 ಲಕ್ಷ ನೀಡಲಾಗುವುದು. ಅವರ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ, ಅಲ್ಲದೇ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಯೋಜನೆಗಳಲ್ಲಿ ಇವರಿಗೆ ಪ್ರಥಮ ಆದ್ಯತೆ ನೀಡುವ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>