ಈ ಕುರಿತು ದೂರವಾಣಿ ಮೂಲಕ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಬಸವರಾಜ ಪಾಟೀಲ, ‘ದಾಯಾದಿಗಳೊಂದಿಗೆ ಜಮೀನು ಸಂಬಂಧ ವಿವಾದವಿದೆ. ಅವರಿಂದ ಹಣ ಪಡೆದ ಸಿಂದಗಿ ಪೊಲೀಸರು, ನಮ್ಮ ಕುಟುಂಬದ ವಿರುದ್ಧ 2006ರಿಂದ ದೌರ್ಜನ್ಯ ನಡೆಸುತ್ತಿದ್ದಾರೆ. 2016ರಲ್ಲಿ ತಂದೆಯನ್ನು ಕೊಲೆ ಮಾಡಿದ್ದಾರೆ. ತಾಯಿ, ಸಹೋದರರ ಮೇಲೆಯೂ ಹಲ್ಲೆ ಮಾಡಿದ್ದರು. ಅವರಿಬ್ಬರು ಚೇತರಿಸಿಕೊಂಡಿದ್ದಾರೆ’ ಎಂದು ಹೇಳಿದರು.