<p><strong>ಸಿಂದಗಿ:</strong> ನಾಡಗೀತೆಗೆ ನೂರರ ಸಂಭ್ರಮ. ಹೀಗಾಗಿ ಸಿಂದಗಿ-ಆಲಮೇಲ-ದೇವರಹಿಪ್ಪರಗಿ ಮೂರು ತಾಲ್ಲೂಕುಗಳ 640 ಸರ್ಕಾರಿ, ಅನುದಾನಿತ, ಅನುದಾನರಹಿತ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ನಾಡಗೀತೆಯನ್ನು ಸುಶ್ರಾವ್ಯವಾಗಿ, ರಾಗಬದ್ಧವಾಗಿ ಹಾಗೂ ನಿಗದಿತ ಸಮಯಕ್ಕೆ ಪೂರ್ಣಗೊಳ್ಳುವ ತರಬೇತಿಯನ್ನು ನೀಡಲು ಪಟ್ಟಣದ ರಾಗರಂಜಿನಿ ಸಂಗೀತ ಅಕಾಡೆಮಿ ಸಂಚಾಲಕ ಪ್ರಕಾಶ ಮೂಡಲಗಿ ಮುಂದಾಗಿದ್ದಾರೆ.</p>.<p>ಮೂಡಲಗಿ ಅವರು ಕ್ಷೇತ್ರಶಿಕ್ಷಣಾಧಿಕಾರಿಗಳಿಂದ ಅನುಮತಿ ಪಡೆದುಕೊಂಡು ತಮ್ಮ ಸ್ವಂತ ಖರ್ಚಿನಿಂದ ದಿನಕ್ಕೆ 2-3 ಶಾಲೆಗಳಿಗೆ ಹೋಗಿ ನಾಡಗೀತೆಯ ತರಬೇತಿ ನೀಡುತ್ತಿದ್ದಾರೆ. ಈಗಾಗಲೇ 10 ಶಾಲೆಗಳ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.</p>.<p>‘ವಿದ್ಯಾರ್ಥಿಗಳಲ್ಲಿ ನಾಡಗೀತೆ ಬಗ್ಗೆ ಅಭಿಮಾನ ಮೂಡಿಸುವ ಜೊತೆಗೆ ನಾಡಗೀತೆಯನ್ನು ರಾಗಬದ್ಧವಾಗಿ ಹಾಡಿಸುವ ಉದ್ದೇಶ ನನ್ನದಾಗಿದೆ. ಇದನ್ನು ನಾನು ಸ್ವಯಂಪ್ರೇರಣೆಯಿಂದ ಸೇವಾ ಕಾರ್ಯ ಎಂದು ಮಾಡುತ್ತಿರುವೆ.<br /> ವಿದ್ಯಾರ್ಥಿಗಳು ನಾಡಗೀತೆಯನ್ನು ಶಿಸ್ತುಬದ್ಧವಾಗಿ ಹಾಡುವದನ್ನು ಕಲಿತರೆ ನನ್ನ ಶ್ರಮ ಸಾರ್ಥಕವಾಗುತ್ತದೆ’ ಎಂದು ಪ್ರಕಾಶ ಮೂಡಲಗಿ 'ಪ್ರಜಾವಾಣಿ' ಗೆ ತಿಳಿಸಿದರು.</p>.<p>ಯಾವುದೇ ಫಲಾಪೇಕ್ಷೆ ಇಲ್ಲದೆ ರಾಗ ರಂಜಿನಿ ಸಂಗೀತ ಅಕಾಡೆಮಿ ಸಂಚಾಲಕರು ಶಾಲೆ-ಶಾಲೆಗೆ ತೆರಳಿ ವಿದ್ಯಾರ್ಥಿಗಳಲ್ಲಿ ನಾಡಪ್ರೇಮ ಬಿಂಬಿಸುವ ನಾಡಗೀತೆಯನ್ನು ಹೇಗೆ ಹಾಡಬೇಕು ಎಂಬ ತರಬೇತಿ ನೀಡುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ:</strong> ನಾಡಗೀತೆಗೆ ನೂರರ ಸಂಭ್ರಮ. ಹೀಗಾಗಿ ಸಿಂದಗಿ-ಆಲಮೇಲ-ದೇವರಹಿಪ್ಪರಗಿ ಮೂರು ತಾಲ್ಲೂಕುಗಳ 640 ಸರ್ಕಾರಿ, ಅನುದಾನಿತ, ಅನುದಾನರಹಿತ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ನಾಡಗೀತೆಯನ್ನು ಸುಶ್ರಾವ್ಯವಾಗಿ, ರಾಗಬದ್ಧವಾಗಿ ಹಾಗೂ ನಿಗದಿತ ಸಮಯಕ್ಕೆ ಪೂರ್ಣಗೊಳ್ಳುವ ತರಬೇತಿಯನ್ನು ನೀಡಲು ಪಟ್ಟಣದ ರಾಗರಂಜಿನಿ ಸಂಗೀತ ಅಕಾಡೆಮಿ ಸಂಚಾಲಕ ಪ್ರಕಾಶ ಮೂಡಲಗಿ ಮುಂದಾಗಿದ್ದಾರೆ.</p>.<p>ಮೂಡಲಗಿ ಅವರು ಕ್ಷೇತ್ರಶಿಕ್ಷಣಾಧಿಕಾರಿಗಳಿಂದ ಅನುಮತಿ ಪಡೆದುಕೊಂಡು ತಮ್ಮ ಸ್ವಂತ ಖರ್ಚಿನಿಂದ ದಿನಕ್ಕೆ 2-3 ಶಾಲೆಗಳಿಗೆ ಹೋಗಿ ನಾಡಗೀತೆಯ ತರಬೇತಿ ನೀಡುತ್ತಿದ್ದಾರೆ. ಈಗಾಗಲೇ 10 ಶಾಲೆಗಳ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.</p>.<p>‘ವಿದ್ಯಾರ್ಥಿಗಳಲ್ಲಿ ನಾಡಗೀತೆ ಬಗ್ಗೆ ಅಭಿಮಾನ ಮೂಡಿಸುವ ಜೊತೆಗೆ ನಾಡಗೀತೆಯನ್ನು ರಾಗಬದ್ಧವಾಗಿ ಹಾಡಿಸುವ ಉದ್ದೇಶ ನನ್ನದಾಗಿದೆ. ಇದನ್ನು ನಾನು ಸ್ವಯಂಪ್ರೇರಣೆಯಿಂದ ಸೇವಾ ಕಾರ್ಯ ಎಂದು ಮಾಡುತ್ತಿರುವೆ.<br /> ವಿದ್ಯಾರ್ಥಿಗಳು ನಾಡಗೀತೆಯನ್ನು ಶಿಸ್ತುಬದ್ಧವಾಗಿ ಹಾಡುವದನ್ನು ಕಲಿತರೆ ನನ್ನ ಶ್ರಮ ಸಾರ್ಥಕವಾಗುತ್ತದೆ’ ಎಂದು ಪ್ರಕಾಶ ಮೂಡಲಗಿ 'ಪ್ರಜಾವಾಣಿ' ಗೆ ತಿಳಿಸಿದರು.</p>.<p>ಯಾವುದೇ ಫಲಾಪೇಕ್ಷೆ ಇಲ್ಲದೆ ರಾಗ ರಂಜಿನಿ ಸಂಗೀತ ಅಕಾಡೆಮಿ ಸಂಚಾಲಕರು ಶಾಲೆ-ಶಾಲೆಗೆ ತೆರಳಿ ವಿದ್ಯಾರ್ಥಿಗಳಲ್ಲಿ ನಾಡಪ್ರೇಮ ಬಿಂಬಿಸುವ ನಾಡಗೀತೆಯನ್ನು ಹೇಗೆ ಹಾಡಬೇಕು ಎಂಬ ತರಬೇತಿ ನೀಡುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>