<p><strong>ನಾಲತವಾಡ</strong>: ಮಾಲೀಕನ ಪುತ್ರನೇ ಇಲ್ಲಿನ ಪೆಟ್ರೋಲ್ ಬಂಕ್ಅನ್ನು ಸಂಪೂರ್ಣ ನಾಶಗೊಳಿಸಿದ ಘಟನೆ ಮಂಗಳವಾರ ತಡ ರಾತ್ರಿ ನಡೆದಿದೆ.</p>.<p>ಸಂಗಣ್ಣ ಸಂಗಮ ಅವರಿಗೆ ಸೇರಿದ ಪಟ್ಟಣದ ನಾರಾಯಣಪುರ ರಸ್ತೆಯಲ್ಲಿನ ಪವಾಡ ಬಸವೇಶ್ವರ ಇಂಡಿಯಲ್ ಆಯಿಲ್ ಬಂಕ್ಗೆ ಹಾನಿಯಾಗಿದೆ. ಮುತ್ತಣ್ಣ ಎಂಬವರು ಈ ಘಟನೆಗೆ ಕಾರಣರಾದವರು.</p>.<p>‘ಮುತ್ತಣ್ಣ ರಾತ್ರಿ ಏಕಾಏಕಿ ನುಗ್ಗಿ ಆವೇಶದಲ್ಲಿ ತೈಲ ಸರಬರಾಜು ಮಾಡುವ ಪೆಟ್ರೋಲ್ ಎಂಜಿನ್, ಗನ್, ಕಚೇರಿಯ ದಾಖಲೆಗಳು, ಲ್ಯಾಪ್ಟ್ಯಾಪ್ ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿದ್ದಾರೆ. ಬಂಕ್ ಬಳಿ ನಿಲ್ಲಿಸಿದ್ದ ವಾಹನಗಳಿಗೂ ಹಾನಿ ಮಾಡಿದ್ದಾರೆ’ ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮುದ್ದೇಬಿಹಾಳ ಸಿಪಿಐ ಮಹ್ಮದ ಫಶೀವುದ್ದಿನ್ ಹಾಗೂ ಪಿಎಸ್ಐ ಸಂಜಯ ತಿಪ್ಪಾರಡ್ಡಿ ಬಂಕ್ಗೆ ಭೇಟಿನೀಡಿ ವಿವರ ಪಡೆದುಕೊಂಡರು.</p>.<p>ತೈಲಕ್ಕಾಗಿ ಪರದಾಟ: ಪಟ್ಟಣದಲ್ಲಿ ಒಂದೇ ಬಂಕ್ ಇರುವ ಕಾರಣ ವಾಹನಗಳ ಮಾಲೀಕರು ತೈಲ ತುಂಬಿಸಿಕೊಳ್ಳಲು ದೂರದ ಹಿರೇಮುರಾಳ ಹಾಗೂ ನಾರಾಯಣಪುರಕ್ಕೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-26-371562328</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಲತವಾಡ</strong>: ಮಾಲೀಕನ ಪುತ್ರನೇ ಇಲ್ಲಿನ ಪೆಟ್ರೋಲ್ ಬಂಕ್ಅನ್ನು ಸಂಪೂರ್ಣ ನಾಶಗೊಳಿಸಿದ ಘಟನೆ ಮಂಗಳವಾರ ತಡ ರಾತ್ರಿ ನಡೆದಿದೆ.</p>.<p>ಸಂಗಣ್ಣ ಸಂಗಮ ಅವರಿಗೆ ಸೇರಿದ ಪಟ್ಟಣದ ನಾರಾಯಣಪುರ ರಸ್ತೆಯಲ್ಲಿನ ಪವಾಡ ಬಸವೇಶ್ವರ ಇಂಡಿಯಲ್ ಆಯಿಲ್ ಬಂಕ್ಗೆ ಹಾನಿಯಾಗಿದೆ. ಮುತ್ತಣ್ಣ ಎಂಬವರು ಈ ಘಟನೆಗೆ ಕಾರಣರಾದವರು.</p>.<p>‘ಮುತ್ತಣ್ಣ ರಾತ್ರಿ ಏಕಾಏಕಿ ನುಗ್ಗಿ ಆವೇಶದಲ್ಲಿ ತೈಲ ಸರಬರಾಜು ಮಾಡುವ ಪೆಟ್ರೋಲ್ ಎಂಜಿನ್, ಗನ್, ಕಚೇರಿಯ ದಾಖಲೆಗಳು, ಲ್ಯಾಪ್ಟ್ಯಾಪ್ ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿದ್ದಾರೆ. ಬಂಕ್ ಬಳಿ ನಿಲ್ಲಿಸಿದ್ದ ವಾಹನಗಳಿಗೂ ಹಾನಿ ಮಾಡಿದ್ದಾರೆ’ ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮುದ್ದೇಬಿಹಾಳ ಸಿಪಿಐ ಮಹ್ಮದ ಫಶೀವುದ್ದಿನ್ ಹಾಗೂ ಪಿಎಸ್ಐ ಸಂಜಯ ತಿಪ್ಪಾರಡ್ಡಿ ಬಂಕ್ಗೆ ಭೇಟಿನೀಡಿ ವಿವರ ಪಡೆದುಕೊಂಡರು.</p>.<p>ತೈಲಕ್ಕಾಗಿ ಪರದಾಟ: ಪಟ್ಟಣದಲ್ಲಿ ಒಂದೇ ಬಂಕ್ ಇರುವ ಕಾರಣ ವಾಹನಗಳ ಮಾಲೀಕರು ತೈಲ ತುಂಬಿಸಿಕೊಳ್ಳಲು ದೂರದ ಹಿರೇಮುರಾಳ ಹಾಗೂ ನಾರಾಯಣಪುರಕ್ಕೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-26-371562328</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>