<p>ನಾಲತವಾಡ: ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಬಡ ಹಾಗೂ ಮಧ್ಯಮ ವರ್ಗದ ಕೃಷಿಕರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತಿವೆ’ ಎಂದು ನಾಗಬೇನಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮುತ್ತು ಸಾಹುಕಾರ ಅಂಗಡಿ ಹೇಳಿದರು.</p>.<p>ಸಮೀಪದ ನಾಗಬೇನಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಮಾತನಾಡಿ, ‘ಸಂಘವು ₹ 11529145 ಶೇರು ಬಂಡವಾಳದೊಂದಿಗೆ ಅಂದಾಜು ₹9 ಕೋಟಿ ಠೇವಣಿ ಹೊಂದಿದ್ದು, ₹23 ಲಕ್ಷ ಲಾಭ ಹೊಂದಿದೆ. ಕೃಷಿಗಾಗಿ ಶೂನ್ಯ ಬಡ್ಡಿ ದರದಲ್ಲಿ ನೀಡಿರುವ ಸಾಲವನ್ನು ಸಕಾಲದಲ್ಲಿ ರೈತರು ಮರು ಪಾವತಿಮಾಡಬೇಕು’ ಎಂದರು.</p>.<p>ಬ್ಯಾಂಕ್ನ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತೇಶ ಅ.ಗೌಡರ ಸಂಘದ ಅಡಾವೆ ಪತ್ರಿಕೆ ಮಂಡಿಸಿದರು. ಗುಳೇದಗುಡ್ಡದ ಶ್ರೀಗಳು ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿದರು.</p>.<p>ಉಪಾಧ್ಯಕ್ಷ ಕೆಂಚಪ್ಪ ಹು.ಗುರಿಕಾರ ಸೇರಿದಂತೆ ಆಡಳಿತ ಮಂಡಳಿಯ ಸರ್ವ ಸದಸ್ಯರು, ಶೇರುದಾರರು, ನಾಗಬೇನಾಳ, ವೀರೇಶನಗರ, ನಾಗಬೇನಾಳ ತಾಂಡಾ, ಆರೇಶಂಕರ ಗ್ರಾಮದ ಜನರು ಇದ್ದರು. ಶಿಕ್ಷಕ ರಾಜು ಹಾದಿಮನಿ ನಿರೂಪಿಸಿ, ವಂದಿಸಿದರು. ಉತ್ತಮ ಗ್ರಾಹಕರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾಲತವಾಡ: ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಬಡ ಹಾಗೂ ಮಧ್ಯಮ ವರ್ಗದ ಕೃಷಿಕರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತಿವೆ’ ಎಂದು ನಾಗಬೇನಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮುತ್ತು ಸಾಹುಕಾರ ಅಂಗಡಿ ಹೇಳಿದರು.</p>.<p>ಸಮೀಪದ ನಾಗಬೇನಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಮಾತನಾಡಿ, ‘ಸಂಘವು ₹ 11529145 ಶೇರು ಬಂಡವಾಳದೊಂದಿಗೆ ಅಂದಾಜು ₹9 ಕೋಟಿ ಠೇವಣಿ ಹೊಂದಿದ್ದು, ₹23 ಲಕ್ಷ ಲಾಭ ಹೊಂದಿದೆ. ಕೃಷಿಗಾಗಿ ಶೂನ್ಯ ಬಡ್ಡಿ ದರದಲ್ಲಿ ನೀಡಿರುವ ಸಾಲವನ್ನು ಸಕಾಲದಲ್ಲಿ ರೈತರು ಮರು ಪಾವತಿಮಾಡಬೇಕು’ ಎಂದರು.</p>.<p>ಬ್ಯಾಂಕ್ನ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತೇಶ ಅ.ಗೌಡರ ಸಂಘದ ಅಡಾವೆ ಪತ್ರಿಕೆ ಮಂಡಿಸಿದರು. ಗುಳೇದಗುಡ್ಡದ ಶ್ರೀಗಳು ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿದರು.</p>.<p>ಉಪಾಧ್ಯಕ್ಷ ಕೆಂಚಪ್ಪ ಹು.ಗುರಿಕಾರ ಸೇರಿದಂತೆ ಆಡಳಿತ ಮಂಡಳಿಯ ಸರ್ವ ಸದಸ್ಯರು, ಶೇರುದಾರರು, ನಾಗಬೇನಾಳ, ವೀರೇಶನಗರ, ನಾಗಬೇನಾಳ ತಾಂಡಾ, ಆರೇಶಂಕರ ಗ್ರಾಮದ ಜನರು ಇದ್ದರು. ಶಿಕ್ಷಕ ರಾಜು ಹಾದಿಮನಿ ನಿರೂಪಿಸಿ, ವಂದಿಸಿದರು. ಉತ್ತಮ ಗ್ರಾಹಕರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>