<p><strong>ನಾಲತವಾಡ</strong>: ‘ಅನೇಕ ವರ್ಷಗಳಿಂದಲೂ ನಮ್ಮ ಓಣಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಲ್ಲ. ರಸ್ತೆ ದುರಸ್ತಿ, ಚರಂಡಿಗಳ ಸ್ವಚ್ಛತೆ ಕಾರ್ಯ ನಡೆದಿಲ್ಲ. ಈಗಲಾದರೂ ಸರಿಯಾಗಿ ಕುಡಿಯುವ ನೀರು ಪೂರೈಕೆ ಮತ್ತು ಚರಂಡಿ ಸ್ವಚ್ಛತೆಗೆ ಆದ್ಯತೆ ಕೊಡಿ’ ಎಂದು ಕೆಪಿಸಿಸಿ ಬೀದಿ ಬದಿ ವ್ಯಾಪಾರಸ್ಥರ ಸಂಘದ ತಾಲ್ಲೂಕು ಅಧ್ಯಕ್ಷ ಮೈಬೂಬ್ ಕುಳಗೇರಿ ಹೇಳಿದರು.</p>.<p>ಇಲ್ಲಿನ ಅವಟಿ ಓಣಿಯ ಮೊಹರಂ ಮಸೀದಿಯಲ್ಲಿ ಕೆಪಿಸಿಸಿ ಘಟಕ ಹಾಗೂ ಸ್ಥಳೀಯ ಮಹಿಳಾ ನಾಗರಿಕರ ವತಿಯಿಂದ ಇತ್ತೀಚೆಗೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಲಲಿತಾ ಗೊರಬಾಳ ಅವರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ನಮ್ಮ ಓಣಿ ಅಷ್ಟೇ ಅಲ್ಲ. ಇನ್ನುಳಿದ 14 ವಾರ್ಡ್ಗಳ ಸ್ಥಿತಿಯೂ ಅಯೋಮಯವಾಗಿದೆ. ಗುಡಿ ಓಣಿಯಲ್ಲಿ ಸರಿಯಾಗಿ ಕುಡಿಯಲು ನೀರು ಸಿಗುತ್ತಿಲ್ಲ. ಹೀಗಾಗಿ ನಿಮ್ಮ ಅಧಿಕಾರಾವಧಿಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಬೇಕು’ ಎಂದರು.</p>.<p>ಅಮೀನಾ ಖತೀಬ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾ ಗೊರಬಾಳ, ಮುತ್ತುಗೌಡ ಗೊರಬಾಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-26-2033190661</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಲತವಾಡ</strong>: ‘ಅನೇಕ ವರ್ಷಗಳಿಂದಲೂ ನಮ್ಮ ಓಣಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಲ್ಲ. ರಸ್ತೆ ದುರಸ್ತಿ, ಚರಂಡಿಗಳ ಸ್ವಚ್ಛತೆ ಕಾರ್ಯ ನಡೆದಿಲ್ಲ. ಈಗಲಾದರೂ ಸರಿಯಾಗಿ ಕುಡಿಯುವ ನೀರು ಪೂರೈಕೆ ಮತ್ತು ಚರಂಡಿ ಸ್ವಚ್ಛತೆಗೆ ಆದ್ಯತೆ ಕೊಡಿ’ ಎಂದು ಕೆಪಿಸಿಸಿ ಬೀದಿ ಬದಿ ವ್ಯಾಪಾರಸ್ಥರ ಸಂಘದ ತಾಲ್ಲೂಕು ಅಧ್ಯಕ್ಷ ಮೈಬೂಬ್ ಕುಳಗೇರಿ ಹೇಳಿದರು.</p>.<p>ಇಲ್ಲಿನ ಅವಟಿ ಓಣಿಯ ಮೊಹರಂ ಮಸೀದಿಯಲ್ಲಿ ಕೆಪಿಸಿಸಿ ಘಟಕ ಹಾಗೂ ಸ್ಥಳೀಯ ಮಹಿಳಾ ನಾಗರಿಕರ ವತಿಯಿಂದ ಇತ್ತೀಚೆಗೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಲಲಿತಾ ಗೊರಬಾಳ ಅವರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ನಮ್ಮ ಓಣಿ ಅಷ್ಟೇ ಅಲ್ಲ. ಇನ್ನುಳಿದ 14 ವಾರ್ಡ್ಗಳ ಸ್ಥಿತಿಯೂ ಅಯೋಮಯವಾಗಿದೆ. ಗುಡಿ ಓಣಿಯಲ್ಲಿ ಸರಿಯಾಗಿ ಕುಡಿಯಲು ನೀರು ಸಿಗುತ್ತಿಲ್ಲ. ಹೀಗಾಗಿ ನಿಮ್ಮ ಅಧಿಕಾರಾವಧಿಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಬೇಕು’ ಎಂದರು.</p>.<p>ಅಮೀನಾ ಖತೀಬ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾ ಗೊರಬಾಳ, ಮುತ್ತುಗೌಡ ಗೊರಬಾಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-26-2033190661</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>