<p><strong>ವಿಜಯಪುರ</strong>: ಸರ್ವರ ಒಳಿತಿಗಾಗಿ ಶ್ರಮಿಸಿದ ಬ್ರಹ್ಮಶ್ರೀ ನಾರಾಯಣಗುರುಗಳು ಮಾನವ ಜನಾಂಗದ ಗುರು ಆಗಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಬ್ರಹ್ಮಶ್ರೀ ನಾರಾಯಣಗುರುಗಳು ಸಮಾಜದಲ್ಲಿನ ಮೂಢನಂಬಿಕೆ, ಅಸಮಾನತೆ ನಿವಾರಿಸಲು ಹಾಗೂ ಸಮಾಜ ಸುಧಾರಣೆಗಾಗಿ ಶ್ರಮಿಸಿದ್ದಾರೆ ಎಂದರು.</p>.<p>ಮೌಢ್ಯತೆ, ಶೋಷಣೆಗಳಿಂದ ತುಂಬಿದ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಲು ಶ್ರಮಿಸಿದ ಬ್ರಹ್ಮಶ್ರೀ ಅವರ ಆದರ್ಶ-ವಿಚಾರಗಳ ಬಗ್ಗೆ ಅರಿವು ಹೊಂದಬೇಕು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು ಎಂದರು.</p>.<p>ನಾರಾಯಣ ಗುರುಗಳು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದು, ಎಲ್ಲರಿಗೂ ಆದರ್ಶಪ್ರಾಯರಾದ ಸಮಾಜ ಸುಧಾರಕರಾಗಿದ್ದಾರೆ ಎಂದು ಹೇಳಿದರು.</p>.<p>ಸಮಾಜದ ಒಳಿತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಮಹನೀಯರ ಆದರ್ಶ ಜೀವನ ಚರಿತೆಯನು ನಾವು ಅರಿಯಬೇಕಾಗಿದೆ. ಬ್ರಹ್ಮಶ್ರೀ ನಾರಾಯಣ ಗುರಗಳವರ ತತ್ವಾದರ್ಶಗಳು, ಚಿಂತನೆಗಳನ್ನು ಮುಂದಿನ ಯುವ ಪೀಳಿಗೆಗೆ ತಲುಪಿಸಬೇಕಾಗಿದೆ. ಅವರ ತತ್ವಾದರ್ಶದಲ್ಲಿ ನಡೆದು ಸಶಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸೋಣ ಎಂದು ಅವರು ಹೇಳಿದರು.</p>.<p>ವಿಶೇಷ ಉಪನ್ಯಾಸ ನೀಡಿದ ಡಾ.ಎಂ.ಎಸ್.ಮಾಗಣಗೇರಿ, ಬ್ರಹ್ಮಶ್ರೀ ನಾರಾಯಣಗುರುಗಳು ಅಸಮಾನತೆ ಹಾಗೂ ಶೋಷಣೆ ವಿರುದ್ಧ ಹೋರಾಡಿ, ಎಲ್ಲರೂ ಪರಸ್ಪರ ಗೌರವಿಸುವಂತಹ ಸಮ ಸಮಾಜದ ನಿರ್ಮಾಣಕ್ಕೆ ಒತ್ತು ನೀಡಿದವರು ಎಂದು ಹೇಳಿದರು.</p>.<p>ಬ್ರಹ್ಮಶ್ರೀ ನಾರಾಯಣಗುರುಗಳು ಅದ್ದೂರಿ ವಿವಾಹ, ಮಹಿಳೆಯರ ಶೋಷಣೆ, ಸಮಾಜದಲ್ಲಿನ ಮೌಡ್ಯತೆಗಳಂತಹ ಅನಿಷ್ಠ ಪದ್ಧತಿ ವಿರೋಧಿಸಿ ಅವುಗಳನ್ನು ತೊಡೆದು ಹಾಕಲು ಶಿಕ್ಷಣದಿಂದಲೇ ಸಾಧ್ಯ ಎಂದು ಪ್ರತಿಪಾದಿಸಿದ್ದಾರೆ ಎಂದು ಹೇಳಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಕಾಂತ ಕುಂಬಾರ, ಡಿವೈಎಸ್ಪಿ ಎಂ.ಎ.ಉಪಾಸೆ, ಬಸವರಾಜ ಈಳಿಗೇರ ಉಪಸ್ಥಿತರಿದ್ದರು.</p>.<p> ಬ್ರಹ್ಮಶ್ರೀ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ ಅಸಮಾನತೆ, ಶೋಷಣೆ ವಿರುದ್ಧ ಹೋರಾಡಿದ ಶ್ರೀಗಳು ಅದ್ದೂರಿ ವಿವಾಹ, ಮಹಿಳೆಯರ ಶೋಷಣೆಗೆ ವಿರೋಧ </p>.<div><blockquote>‘ಒಂದೇ ಜಾತಿ ಒಂದೇ ಮತ ಒಂದೇ ದೇವರು’ ಎಂದು ಇಡೀ ಮನುಕುಲಕ್ಕೇ ಸಾರಿದ ಸಂತಶ್ರೇಷ್ಠ ನಾರಾಯಣಗುರುಗಳ ಸಂದೇಶವು ಅತ್ಯಂತ ಪ್ರಸ್ತುತವಾಗಿದೆ </blockquote><span class="attribution"> - ಸೋಮಲಿಂಗ ಗೆಣ್ಣೂರುಹೆಚ್ಚುವರಿ ಜಿಲ್ಲಾಧಿಕಾರಿ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಸರ್ವರ ಒಳಿತಿಗಾಗಿ ಶ್ರಮಿಸಿದ ಬ್ರಹ್ಮಶ್ರೀ ನಾರಾಯಣಗುರುಗಳು ಮಾನವ ಜನಾಂಗದ ಗುರು ಆಗಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಬ್ರಹ್ಮಶ್ರೀ ನಾರಾಯಣಗುರುಗಳು ಸಮಾಜದಲ್ಲಿನ ಮೂಢನಂಬಿಕೆ, ಅಸಮಾನತೆ ನಿವಾರಿಸಲು ಹಾಗೂ ಸಮಾಜ ಸುಧಾರಣೆಗಾಗಿ ಶ್ರಮಿಸಿದ್ದಾರೆ ಎಂದರು.</p>.<p>ಮೌಢ್ಯತೆ, ಶೋಷಣೆಗಳಿಂದ ತುಂಬಿದ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಲು ಶ್ರಮಿಸಿದ ಬ್ರಹ್ಮಶ್ರೀ ಅವರ ಆದರ್ಶ-ವಿಚಾರಗಳ ಬಗ್ಗೆ ಅರಿವು ಹೊಂದಬೇಕು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು ಎಂದರು.</p>.<p>ನಾರಾಯಣ ಗುರುಗಳು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದು, ಎಲ್ಲರಿಗೂ ಆದರ್ಶಪ್ರಾಯರಾದ ಸಮಾಜ ಸುಧಾರಕರಾಗಿದ್ದಾರೆ ಎಂದು ಹೇಳಿದರು.</p>.<p>ಸಮಾಜದ ಒಳಿತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಮಹನೀಯರ ಆದರ್ಶ ಜೀವನ ಚರಿತೆಯನು ನಾವು ಅರಿಯಬೇಕಾಗಿದೆ. ಬ್ರಹ್ಮಶ್ರೀ ನಾರಾಯಣ ಗುರಗಳವರ ತತ್ವಾದರ್ಶಗಳು, ಚಿಂತನೆಗಳನ್ನು ಮುಂದಿನ ಯುವ ಪೀಳಿಗೆಗೆ ತಲುಪಿಸಬೇಕಾಗಿದೆ. ಅವರ ತತ್ವಾದರ್ಶದಲ್ಲಿ ನಡೆದು ಸಶಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸೋಣ ಎಂದು ಅವರು ಹೇಳಿದರು.</p>.<p>ವಿಶೇಷ ಉಪನ್ಯಾಸ ನೀಡಿದ ಡಾ.ಎಂ.ಎಸ್.ಮಾಗಣಗೇರಿ, ಬ್ರಹ್ಮಶ್ರೀ ನಾರಾಯಣಗುರುಗಳು ಅಸಮಾನತೆ ಹಾಗೂ ಶೋಷಣೆ ವಿರುದ್ಧ ಹೋರಾಡಿ, ಎಲ್ಲರೂ ಪರಸ್ಪರ ಗೌರವಿಸುವಂತಹ ಸಮ ಸಮಾಜದ ನಿರ್ಮಾಣಕ್ಕೆ ಒತ್ತು ನೀಡಿದವರು ಎಂದು ಹೇಳಿದರು.</p>.<p>ಬ್ರಹ್ಮಶ್ರೀ ನಾರಾಯಣಗುರುಗಳು ಅದ್ದೂರಿ ವಿವಾಹ, ಮಹಿಳೆಯರ ಶೋಷಣೆ, ಸಮಾಜದಲ್ಲಿನ ಮೌಡ್ಯತೆಗಳಂತಹ ಅನಿಷ್ಠ ಪದ್ಧತಿ ವಿರೋಧಿಸಿ ಅವುಗಳನ್ನು ತೊಡೆದು ಹಾಕಲು ಶಿಕ್ಷಣದಿಂದಲೇ ಸಾಧ್ಯ ಎಂದು ಪ್ರತಿಪಾದಿಸಿದ್ದಾರೆ ಎಂದು ಹೇಳಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಕಾಂತ ಕುಂಬಾರ, ಡಿವೈಎಸ್ಪಿ ಎಂ.ಎ.ಉಪಾಸೆ, ಬಸವರಾಜ ಈಳಿಗೇರ ಉಪಸ್ಥಿತರಿದ್ದರು.</p>.<p> ಬ್ರಹ್ಮಶ್ರೀ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ ಅಸಮಾನತೆ, ಶೋಷಣೆ ವಿರುದ್ಧ ಹೋರಾಡಿದ ಶ್ರೀಗಳು ಅದ್ದೂರಿ ವಿವಾಹ, ಮಹಿಳೆಯರ ಶೋಷಣೆಗೆ ವಿರೋಧ </p>.<div><blockquote>‘ಒಂದೇ ಜಾತಿ ಒಂದೇ ಮತ ಒಂದೇ ದೇವರು’ ಎಂದು ಇಡೀ ಮನುಕುಲಕ್ಕೇ ಸಾರಿದ ಸಂತಶ್ರೇಷ್ಠ ನಾರಾಯಣಗುರುಗಳ ಸಂದೇಶವು ಅತ್ಯಂತ ಪ್ರಸ್ತುತವಾಗಿದೆ </blockquote><span class="attribution"> - ಸೋಮಲಿಂಗ ಗೆಣ್ಣೂರುಹೆಚ್ಚುವರಿ ಜಿಲ್ಲಾಧಿಕಾರಿ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>