<p>ತಿಕೋಟಾ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವವರು ಗ್ರಾಮದ ಅಭಿವೃದ್ಧಿಯ ದೃಷ್ಟಿಯಿಂದ ಕೆಲಸ ಮಾಡುತ್ತಿದ್ದೀರಿ ಎಂಬ ಭಾವನೆ ಹೊಂದಬೇಕು. ಏಕೆಂದರೆ, ನೀವು ಮಾಡುವ ಈ ಕಾರ್ಯಗಳು ಕೇವಲ ಒಬ್ಬ ವ್ಯಕ್ತಿಗೆ ಲಾಭವಾಗುವುದಿಲ್ಲ. ಬದಲಾಗಿ ಇಡೀ ಗ್ರಾಮದ ಜನರಿಗೆ ಈ ಕಾಮಗಾರಿಯಿಂದ ಲಾಭವಿದೆ ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ಶೋಭಕ್ಕ ಶಿಳೀನ ಹೇಳಿದರು.</p>.<p>ತಾಲ್ಲೂಕಿನ ಲೋಹಗಾಂವ ಗ್ರಾಮ ಪಂಚಾಯಿತಿಗೆ ಬುಧವಾರ ಭೇಟಿ ನೀಡಿ, ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಅಮೃತ ಸರೋವರ, ಗೋಮಾಳ ಮತ್ತು ಹೂಳೆತ್ತುವ ಕಾಮಗಾರಿಗಳನ್ನು ವೀಕ್ಷಿಸಿ ಕೂಲಿಕಾರರೊಡನೆ ಚರ್ಚಿಸಿ ಅವರು ಮಾತನಾಡಿದರು.</p>.<p>ಗ್ರಾಮದ ಮಾದರಿ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಕಾಮಗಾರಿ ಕಡತಗಳ ಪರಿಶೀಲನೆ ಹಾಗೂ ನೀರಿನ ಪರೀಕ್ಷೆ ನಡೆಸಿದರು.</p>.<p>ಪಿಡಿಒ ಪದ್ಮಿನಿ ಬಿರಾದಾರ, ತಾಂತ್ರಿಕ ಸಂಯೋಜಕ ಸಂಜೀವಕುಮಾರ ಬಿರಾದಾರ, ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ, ರೇಷ್ಮಾ ಭಾಗವಾನ, ಕಾಸಪ್ಪ ತಳವಾರ, ಸಂತೋಷ ಗೊಜ್ಜಿ, ಸರೋಜಾ ರಾಠೋಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿಕೋಟಾ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವವರು ಗ್ರಾಮದ ಅಭಿವೃದ್ಧಿಯ ದೃಷ್ಟಿಯಿಂದ ಕೆಲಸ ಮಾಡುತ್ತಿದ್ದೀರಿ ಎಂಬ ಭಾವನೆ ಹೊಂದಬೇಕು. ಏಕೆಂದರೆ, ನೀವು ಮಾಡುವ ಈ ಕಾರ್ಯಗಳು ಕೇವಲ ಒಬ್ಬ ವ್ಯಕ್ತಿಗೆ ಲಾಭವಾಗುವುದಿಲ್ಲ. ಬದಲಾಗಿ ಇಡೀ ಗ್ರಾಮದ ಜನರಿಗೆ ಈ ಕಾಮಗಾರಿಯಿಂದ ಲಾಭವಿದೆ ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ಶೋಭಕ್ಕ ಶಿಳೀನ ಹೇಳಿದರು.</p>.<p>ತಾಲ್ಲೂಕಿನ ಲೋಹಗಾಂವ ಗ್ರಾಮ ಪಂಚಾಯಿತಿಗೆ ಬುಧವಾರ ಭೇಟಿ ನೀಡಿ, ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಅಮೃತ ಸರೋವರ, ಗೋಮಾಳ ಮತ್ತು ಹೂಳೆತ್ತುವ ಕಾಮಗಾರಿಗಳನ್ನು ವೀಕ್ಷಿಸಿ ಕೂಲಿಕಾರರೊಡನೆ ಚರ್ಚಿಸಿ ಅವರು ಮಾತನಾಡಿದರು.</p>.<p>ಗ್ರಾಮದ ಮಾದರಿ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಕಾಮಗಾರಿ ಕಡತಗಳ ಪರಿಶೀಲನೆ ಹಾಗೂ ನೀರಿನ ಪರೀಕ್ಷೆ ನಡೆಸಿದರು.</p>.<p>ಪಿಡಿಒ ಪದ್ಮಿನಿ ಬಿರಾದಾರ, ತಾಂತ್ರಿಕ ಸಂಯೋಜಕ ಸಂಜೀವಕುಮಾರ ಬಿರಾದಾರ, ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ, ರೇಷ್ಮಾ ಭಾಗವಾನ, ಕಾಸಪ್ಪ ತಳವಾರ, ಸಂತೋಷ ಗೊಜ್ಜಿ, ಸರೋಜಾ ರಾಠೋಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>