<p><strong>ವಿಜಯಪುರ</strong>: ಮಹಿಳಾ ಶಿಕ್ಷಣವು ಕುಟುಂಬ, ಸಮಾಜದ ಆಧಾರವಾಗಿದ್ದು, ನಾರಿ ಶಕ್ತಿಯು ನಮ್ಮ ದೇಶದ ಪ್ರತೀಕ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.</p>.<p>ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದಲ್ಲಿ ನಡೆದ 13 ಮತ್ತು 14ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಮಹಿಳಾ ಸಶಕ್ತೀಕರಣಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಇದನ್ನು ಎಲ್ಲಾ ಮಹಿಳೆಯರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.</p>.<p>ಶ್ರೇಷ್ಠ ಭಾರತ, ನಿರ್ಭರ ಭಾರತ ಮಾಡಲು ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಧಾನ ಕಾರ್ಯ ನಿರ್ವನಿರ್ವಹಿಸುತ್ತಿದ್ದು, ಮಹಿಳೆಯರು ಅದರ ಸದುಪಯೋಗ ಪಡೆದುಕೊಂಡು ಎಲ್ಲ ರಂಗದಲ್ಲೂ ಮಹಿಳೆ ಕೆಲಸ ಮಾಡಬೇಕು ಎಂದು ಹೇಳಿದರು.</p>.<p>ಚಿನ್ನದ ಪದಕ ಪಡೆದ ಎಲ್ಲ ಮಹಿಳೆಯರು ರಾಷ್ಟ್ರಕ್ಕೆ ಯೋಗದಾನ ಕೊಡುವುದರ ಜೊತೆಗೆ ಪ್ರೇರಣೆ ನೀಡಬೇಕು. ಈ ವಿಶ್ವವಿದ್ಯಾನಿಲಯದಿಂದ ಉತ್ತಮ ಮಟ್ಟದ ಶಿಕ್ಷಣ ತೆಗೆದುಕೊಂಡು ತಮ್ಮ ಜೀವನದಲ್ಲಿ ಮುಂದೆ ಹೋಗಲು ಹಾಗೂ ಸಬಲೀಕರಣ ಹೊಂದಲು ಈ ವಿಶ್ವವಿದ್ಯಾನಿಲಯ ಸಹಾಯಕವಾಗಿದೆ. ಮಹಿಳಾ ವಿಶ್ವವಿದ್ಯಾನಿಲಯವು ರಾಷ್ಟ್ರದ ಆದರ್ಶ ವಿಶ್ವವಿದ್ಯಾಲಯವಾಗಬೇಕು ಎಂದು ತಿಳಿಸಿದರು.</p>.<p class="Subhead"><strong>ಪ್ರಾದೇಶಿಕ ಕೇಂದ್ರ ಆರಂಭ:</strong></p>.<p>ಬೀದರ್ನಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವುದ್ಯಾನಿಲಯದ ಪ್ರಾದೇಶಿಕ ಕೇಂದ್ರವನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಆರಂಭಿಸಲಾಗಿದೆ ಎಂದು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.</p>.<p>ದೂರದ ಜಿಲ್ಲೆಗಳ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣದ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಈ ಕ್ರಮ ವಹಿಸಲಾಗಿದೆ ಎಂದರು.</p>.<p>ಗ್ರಾಮೀಣ ಭಾಗದಲ್ಲಿ ಮಹಿಳೆಯರಿಗೆ ಉನ್ನತ ಶಿಕ್ಷಣದ ಅವಕಾಶಗಳನ್ನು ಸೃಷ್ಟಿಸುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೊಸ ಮಹಾವಿದ್ಯಾಲಯಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಅವರು ಹೇಳಿದರು.</p>.<p>ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ಉನ್ನತ ಶಿಕ್ಷಣ ಇಲಾಖೆಯ ಆದೇಶದಂತೆ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನುಷ್ಠಾನಗೊಳಿಸಿ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕ ಕೋರ್ಸುಗಳನ್ನು ಆರಂಭಿಸಿದೆ ಎಂದರು.</p>.<p>ಹೊಸ ಶಿಕ್ಷಣ ನೀತಿಯ ಪಠ್ಯಕ್ರಮದನುಸಾರ ಭಾಷಾ ಪಠ್ಯಪುಸ್ತಕಗಳನ್ನು ಪ್ರಸಾರಾಂಗದಿಂದ ಪ್ರಕಟಿಸಲು ತೀರ್ಮಾನಿಸಲಾಗಿದ್ದು, ಪ್ರಕಟಣಾ ಕಾರ್ಯ ಪ್ರಗತಿಯಲ್ಲಿದೆ. ಈಗ ನಮ್ಮ ವಿಶ್ವವಿದ್ಯಾನಿಲಯದಲ್ಲಿ ಒಟ್ಟು 4 ನಿಕಾಯಗಳಲ್ಲಿ 350 ಸ್ನಾತಕ ವಿದ್ಯಾರ್ಥಿನಿಯರು ಅಧ್ಯಯನದಲ್ಲಿ ತೊಡಗಿದ್ದಾರೆ ಎಂದು ಹೇಳಿದರು.</p>.<p>ಮಹಿಳಾ ವಿಶ್ವವಿದ್ಯಾನಿಲಯವು ತನ್ನ ಶೈಕ್ಷಣಿಕ ಹಾಗೂ ಸಂಶೋಧನಾ ಚಟುವಟಿಕೆಗಳಲ್ಲಿ ಹಾಗೂ ಆಡಳಿತದಲ್ಲಿ ಮಾಹಿತಿ ತಂತ್ರಜ್ಞಾನದ ಗರಿಷ್ಠ ಬಳಕೆ ಮಾಡುತ್ತಿದೆ. ಕನ್ನಡದಲ್ಲಿ ವಿಶ್ವವಿದ್ಯಾಲಯದ ವೆಬ್ಸೈಟ್ ಅನ್ನು ಸಿದ್ಧಪಡಿಸಿ ಅಳವಡಿಸಲಾಗಿದೆ. ಈ ಮೂಲಕ ಪ್ರಾದೇಶಿಕ ಭಾಷೆಯಲ್ಲಿ ವಿಶ್ವವಿದ್ಯಾಲಯದ ಮಾಹಿತಿಗಳನ್ನು ಪಡೆಯಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಅವರು ಹೇಳಿದರು.</p>.<p>ಮಹಿಳಾ ವಿಶ್ವವಿದ್ಯಾನಿಲಯವು ಸಮುದಾಯದೊಂದಿಗೆ ಸಹಭಾಗಿತ್ವ ಹೊಂದುವ ನೆಲೆಯಲ್ಲಿ 5 ಗ್ರಾಮಗಳನ್ನು ದತ್ತು ಪಡೆದಿದ್ದು ಅಲ್ಲಿ ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ ಹಾಗೂ ಸಮುದಾಯ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಕುಲಪತಿ ತಿಳಿಸಿದರು.</p>.<p class="Subhead"><strong>ಡಾಕ್ಟರೇಟ್ ಪದವಿ ಪ್ರದಾನ:</strong></p>.<p>ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಸಮಾಜ ಸೇವಕಿ ಡಾ.ಎಸ್.ಜಿ.ಸುಶೀಲಮ್ಮ ಮತ್ತು ರೇಷ್ಮಾ ಕೌರ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.</p>.<p>ಇನ್ನೊಬ್ಬ ಗೌರವ ಡಾಕ್ಟರೇಟ್ ಪುರಷ್ಕೃತೆ ಗುಜರಾತ್ನ ಪುನರುತ್ಥಾನ ವಿದ್ಯಾಪೀಠದ ಕುಲಪತಿ ಇಂದುಮತಿ ಕಾಟದಾರೆ ಅವರು ಘಟಿಕೋತ್ಸವಕ್ಕೆ ಗೈರಾಗಿದ್ದರು.</p>.<p>ಘಟಿಕೋತ್ಸವದಲ್ಲಿ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್ಗಳಲ್ಲಿ ಗರಿಷ್ಠ ಅಂಕಗಳನ್ನು ಗಳಿಸಿ ತೇರ್ಗಡೆಯಾದ ಒಟ್ಟು 167 ವಿದ್ಯಾರ್ಥಿನಿಯರಿಗೆ 202 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು.</p>.<p>ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಬಿ.ಎಸ್.ನಾವಿ, ಮೌಲ್ಯಮಾಪನ ಕುಲಸಚಿವ ಪ್ರೊ.ರಮೇಶ ಕೆ.ಘಟಿಕೋತ್ಸವದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಮಹಿಳಾ ಶಿಕ್ಷಣವು ಕುಟುಂಬ, ಸಮಾಜದ ಆಧಾರವಾಗಿದ್ದು, ನಾರಿ ಶಕ್ತಿಯು ನಮ್ಮ ದೇಶದ ಪ್ರತೀಕ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.</p>.<p>ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದಲ್ಲಿ ನಡೆದ 13 ಮತ್ತು 14ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಮಹಿಳಾ ಸಶಕ್ತೀಕರಣಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಇದನ್ನು ಎಲ್ಲಾ ಮಹಿಳೆಯರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.</p>.<p>ಶ್ರೇಷ್ಠ ಭಾರತ, ನಿರ್ಭರ ಭಾರತ ಮಾಡಲು ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಧಾನ ಕಾರ್ಯ ನಿರ್ವನಿರ್ವಹಿಸುತ್ತಿದ್ದು, ಮಹಿಳೆಯರು ಅದರ ಸದುಪಯೋಗ ಪಡೆದುಕೊಂಡು ಎಲ್ಲ ರಂಗದಲ್ಲೂ ಮಹಿಳೆ ಕೆಲಸ ಮಾಡಬೇಕು ಎಂದು ಹೇಳಿದರು.</p>.<p>ಚಿನ್ನದ ಪದಕ ಪಡೆದ ಎಲ್ಲ ಮಹಿಳೆಯರು ರಾಷ್ಟ್ರಕ್ಕೆ ಯೋಗದಾನ ಕೊಡುವುದರ ಜೊತೆಗೆ ಪ್ರೇರಣೆ ನೀಡಬೇಕು. ಈ ವಿಶ್ವವಿದ್ಯಾನಿಲಯದಿಂದ ಉತ್ತಮ ಮಟ್ಟದ ಶಿಕ್ಷಣ ತೆಗೆದುಕೊಂಡು ತಮ್ಮ ಜೀವನದಲ್ಲಿ ಮುಂದೆ ಹೋಗಲು ಹಾಗೂ ಸಬಲೀಕರಣ ಹೊಂದಲು ಈ ವಿಶ್ವವಿದ್ಯಾನಿಲಯ ಸಹಾಯಕವಾಗಿದೆ. ಮಹಿಳಾ ವಿಶ್ವವಿದ್ಯಾನಿಲಯವು ರಾಷ್ಟ್ರದ ಆದರ್ಶ ವಿಶ್ವವಿದ್ಯಾಲಯವಾಗಬೇಕು ಎಂದು ತಿಳಿಸಿದರು.</p>.<p class="Subhead"><strong>ಪ್ರಾದೇಶಿಕ ಕೇಂದ್ರ ಆರಂಭ:</strong></p>.<p>ಬೀದರ್ನಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವುದ್ಯಾನಿಲಯದ ಪ್ರಾದೇಶಿಕ ಕೇಂದ್ರವನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಆರಂಭಿಸಲಾಗಿದೆ ಎಂದು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.</p>.<p>ದೂರದ ಜಿಲ್ಲೆಗಳ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣದ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಈ ಕ್ರಮ ವಹಿಸಲಾಗಿದೆ ಎಂದರು.</p>.<p>ಗ್ರಾಮೀಣ ಭಾಗದಲ್ಲಿ ಮಹಿಳೆಯರಿಗೆ ಉನ್ನತ ಶಿಕ್ಷಣದ ಅವಕಾಶಗಳನ್ನು ಸೃಷ್ಟಿಸುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೊಸ ಮಹಾವಿದ್ಯಾಲಯಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಅವರು ಹೇಳಿದರು.</p>.<p>ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ಉನ್ನತ ಶಿಕ್ಷಣ ಇಲಾಖೆಯ ಆದೇಶದಂತೆ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನುಷ್ಠಾನಗೊಳಿಸಿ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕ ಕೋರ್ಸುಗಳನ್ನು ಆರಂಭಿಸಿದೆ ಎಂದರು.</p>.<p>ಹೊಸ ಶಿಕ್ಷಣ ನೀತಿಯ ಪಠ್ಯಕ್ರಮದನುಸಾರ ಭಾಷಾ ಪಠ್ಯಪುಸ್ತಕಗಳನ್ನು ಪ್ರಸಾರಾಂಗದಿಂದ ಪ್ರಕಟಿಸಲು ತೀರ್ಮಾನಿಸಲಾಗಿದ್ದು, ಪ್ರಕಟಣಾ ಕಾರ್ಯ ಪ್ರಗತಿಯಲ್ಲಿದೆ. ಈಗ ನಮ್ಮ ವಿಶ್ವವಿದ್ಯಾನಿಲಯದಲ್ಲಿ ಒಟ್ಟು 4 ನಿಕಾಯಗಳಲ್ಲಿ 350 ಸ್ನಾತಕ ವಿದ್ಯಾರ್ಥಿನಿಯರು ಅಧ್ಯಯನದಲ್ಲಿ ತೊಡಗಿದ್ದಾರೆ ಎಂದು ಹೇಳಿದರು.</p>.<p>ಮಹಿಳಾ ವಿಶ್ವವಿದ್ಯಾನಿಲಯವು ತನ್ನ ಶೈಕ್ಷಣಿಕ ಹಾಗೂ ಸಂಶೋಧನಾ ಚಟುವಟಿಕೆಗಳಲ್ಲಿ ಹಾಗೂ ಆಡಳಿತದಲ್ಲಿ ಮಾಹಿತಿ ತಂತ್ರಜ್ಞಾನದ ಗರಿಷ್ಠ ಬಳಕೆ ಮಾಡುತ್ತಿದೆ. ಕನ್ನಡದಲ್ಲಿ ವಿಶ್ವವಿದ್ಯಾಲಯದ ವೆಬ್ಸೈಟ್ ಅನ್ನು ಸಿದ್ಧಪಡಿಸಿ ಅಳವಡಿಸಲಾಗಿದೆ. ಈ ಮೂಲಕ ಪ್ರಾದೇಶಿಕ ಭಾಷೆಯಲ್ಲಿ ವಿಶ್ವವಿದ್ಯಾಲಯದ ಮಾಹಿತಿಗಳನ್ನು ಪಡೆಯಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಅವರು ಹೇಳಿದರು.</p>.<p>ಮಹಿಳಾ ವಿಶ್ವವಿದ್ಯಾನಿಲಯವು ಸಮುದಾಯದೊಂದಿಗೆ ಸಹಭಾಗಿತ್ವ ಹೊಂದುವ ನೆಲೆಯಲ್ಲಿ 5 ಗ್ರಾಮಗಳನ್ನು ದತ್ತು ಪಡೆದಿದ್ದು ಅಲ್ಲಿ ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ ಹಾಗೂ ಸಮುದಾಯ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಕುಲಪತಿ ತಿಳಿಸಿದರು.</p>.<p class="Subhead"><strong>ಡಾಕ್ಟರೇಟ್ ಪದವಿ ಪ್ರದಾನ:</strong></p>.<p>ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಸಮಾಜ ಸೇವಕಿ ಡಾ.ಎಸ್.ಜಿ.ಸುಶೀಲಮ್ಮ ಮತ್ತು ರೇಷ್ಮಾ ಕೌರ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.</p>.<p>ಇನ್ನೊಬ್ಬ ಗೌರವ ಡಾಕ್ಟರೇಟ್ ಪುರಷ್ಕೃತೆ ಗುಜರಾತ್ನ ಪುನರುತ್ಥಾನ ವಿದ್ಯಾಪೀಠದ ಕುಲಪತಿ ಇಂದುಮತಿ ಕಾಟದಾರೆ ಅವರು ಘಟಿಕೋತ್ಸವಕ್ಕೆ ಗೈರಾಗಿದ್ದರು.</p>.<p>ಘಟಿಕೋತ್ಸವದಲ್ಲಿ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್ಗಳಲ್ಲಿ ಗರಿಷ್ಠ ಅಂಕಗಳನ್ನು ಗಳಿಸಿ ತೇರ್ಗಡೆಯಾದ ಒಟ್ಟು 167 ವಿದ್ಯಾರ್ಥಿನಿಯರಿಗೆ 202 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು.</p>.<p>ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಬಿ.ಎಸ್.ನಾವಿ, ಮೌಲ್ಯಮಾಪನ ಕುಲಸಚಿವ ಪ್ರೊ.ರಮೇಶ ಕೆ.ಘಟಿಕೋತ್ಸವದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>