<p><strong>ವಿಜಯಪುರ</strong>: ‘ಕುವೆಂಪು ರಚಿಸಿದ ನಾಡಗೀತೆ ಕನ್ನಡಿಗರ, ಕನ್ನಡ ಸಾಹಿತ್ಯದ ಶ್ರೀಮಂತ ಸಂಸ್ಕೃತಿ, ಸ್ವಾಭಿಮಾನ ಮತ್ತು ಘನತೆ, ಇತಿಹಾಸ, ಭೂಗೋಳ ವೈವಿಧ್ಯತೆಯನ್ನು ಸಾರುವ ನಮ್ಮೆಲ್ಲರ ಹೆಮ್ಮೆಯ ಗೀತೆಯಾಗಿದೆ. ಈ ಗೀತೆಗೆ ನೂರು ವರ್ಷ ಸಂದಿದ್ದು ಕನ್ನಡಿಗರಿಗೆ ಸ್ವಾಭಿಮಾನದ ಸಂಕೇತ’ ಎಂದು ಚಾಣಕ್ಯ ಕರಿಯರ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಎನ್.ಎಂ.ಬಿರಾದಾರ ಹೇಳಿದರು.</p>.<p>ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಬುಧವಾರ ಕುವೆಂಪುರವರ ಜನ್ಮ ದಿನಾಚರಣೆ ನಿಮಿತ್ಯ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ ಹಾಗೂ ನಾಡಗೀತೆಗೆ ನೂರರ ಸಂಭ್ರಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.</p>.<p>‘ಕರ್ನಾಟಕವು ಸರ್ವ ಜನಾಂಗದ ಶಾಂತಿಯ ತೋಟವೆಂದು ಬಣ್ಣಿಸುವುದರೊಂದಿಗೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಪಾರ್ಸಿ, ಜೈನರಂತಹ ವಿವಿಧ ಸಮುದಾಯಗಳ ಸಹಬಾಳ್ವೆಯನ್ನು ಗೀತೆ ಸಾರುತ್ತದೆ’ ಎಂದರು.</p>.<p>ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ಕುವೆಂಪುರವರು ಕನ್ನಡಾಂಬೆಗೆ ಅನೇಕ ಪ್ರಶಸ್ತಿ, ಪುರಸ್ಕಾರಗಳನ್ನು ತಂದುಕೊಡುವ ಮೂಲಕ ಕನ್ನಡ ನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದರು.</p>.<p>ಪಿ.ಡಿ.ಜೆ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಸಂತೋಷ ಕುಲಕರ್ಣಿ ‘ಕುವೆಂಪುರವರ ವಿಶ್ವಮಾನವ ಕಲ್ಪನೆ ಹಾಗೂ ನಾಡಗೀತೆಗೆ ನೂರರ ಸಂಭ್ರಮ’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.</p>.<p>ಸಹಕಾರಿ ಧುರೀಣ ರಾಜೇಂದ್ರ ಕೊರಡ್ಡಿ, ಪಿ ಕೆ ಪಿ ಎಸ್ ಬ್ಯಾಂಕಿನ ವ್ಯವಸ್ಥಾಪಕ ಮಲ್ಲಿಕಾರ್ಜುನ ನಾಗಶೆಟ್ಟಿ, ಬ್ಯಾಂಕಿನ ನಿರ್ದೇಶಕ ಸುಭಾಷ ಯಂಭತ್ತನಾಳ, ಮಹಮ್ಮದ ಹುಸೇನ ವಾಲಿಕಾರ, ಗುರುಲಿಂಗಪ್ಪ ನಾಟಿಕಾರ, ಸುಭಾಷ ಚವ್ವಾಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ‘ಕುವೆಂಪು ರಚಿಸಿದ ನಾಡಗೀತೆ ಕನ್ನಡಿಗರ, ಕನ್ನಡ ಸಾಹಿತ್ಯದ ಶ್ರೀಮಂತ ಸಂಸ್ಕೃತಿ, ಸ್ವಾಭಿಮಾನ ಮತ್ತು ಘನತೆ, ಇತಿಹಾಸ, ಭೂಗೋಳ ವೈವಿಧ್ಯತೆಯನ್ನು ಸಾರುವ ನಮ್ಮೆಲ್ಲರ ಹೆಮ್ಮೆಯ ಗೀತೆಯಾಗಿದೆ. ಈ ಗೀತೆಗೆ ನೂರು ವರ್ಷ ಸಂದಿದ್ದು ಕನ್ನಡಿಗರಿಗೆ ಸ್ವಾಭಿಮಾನದ ಸಂಕೇತ’ ಎಂದು ಚಾಣಕ್ಯ ಕರಿಯರ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಎನ್.ಎಂ.ಬಿರಾದಾರ ಹೇಳಿದರು.</p>.<p>ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಬುಧವಾರ ಕುವೆಂಪುರವರ ಜನ್ಮ ದಿನಾಚರಣೆ ನಿಮಿತ್ಯ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ ಹಾಗೂ ನಾಡಗೀತೆಗೆ ನೂರರ ಸಂಭ್ರಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.</p>.<p>‘ಕರ್ನಾಟಕವು ಸರ್ವ ಜನಾಂಗದ ಶಾಂತಿಯ ತೋಟವೆಂದು ಬಣ್ಣಿಸುವುದರೊಂದಿಗೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಪಾರ್ಸಿ, ಜೈನರಂತಹ ವಿವಿಧ ಸಮುದಾಯಗಳ ಸಹಬಾಳ್ವೆಯನ್ನು ಗೀತೆ ಸಾರುತ್ತದೆ’ ಎಂದರು.</p>.<p>ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ಕುವೆಂಪುರವರು ಕನ್ನಡಾಂಬೆಗೆ ಅನೇಕ ಪ್ರಶಸ್ತಿ, ಪುರಸ್ಕಾರಗಳನ್ನು ತಂದುಕೊಡುವ ಮೂಲಕ ಕನ್ನಡ ನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದರು.</p>.<p>ಪಿ.ಡಿ.ಜೆ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಸಂತೋಷ ಕುಲಕರ್ಣಿ ‘ಕುವೆಂಪುರವರ ವಿಶ್ವಮಾನವ ಕಲ್ಪನೆ ಹಾಗೂ ನಾಡಗೀತೆಗೆ ನೂರರ ಸಂಭ್ರಮ’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.</p>.<p>ಸಹಕಾರಿ ಧುರೀಣ ರಾಜೇಂದ್ರ ಕೊರಡ್ಡಿ, ಪಿ ಕೆ ಪಿ ಎಸ್ ಬ್ಯಾಂಕಿನ ವ್ಯವಸ್ಥಾಪಕ ಮಲ್ಲಿಕಾರ್ಜುನ ನಾಗಶೆಟ್ಟಿ, ಬ್ಯಾಂಕಿನ ನಿರ್ದೇಶಕ ಸುಭಾಷ ಯಂಭತ್ತನಾಳ, ಮಹಮ್ಮದ ಹುಸೇನ ವಾಲಿಕಾರ, ಗುರುಲಿಂಗಪ್ಪ ನಾಟಿಕಾರ, ಸುಭಾಷ ಚವ್ವಾಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>