‘ಕೇವಲ ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜ ಹಾರಿಸುವುದಾಗಿ ಕೆರಗೋಡು ಗ್ರಾಮ ಪಂಚಾಯಿತಿಯಲ್ಲಿ ಅನುಮತಿ ಪಡೆದು ಕೇಸರಿ ಧ್ವಜ ಹಾರಿಸಲು ಮುಂದಾಗಿದ್ದರು. ಅವರಿಗೆ ರಾಷ್ಟ್ರಧ್ವಜದ ಬಗ್ಗೆ ಯಾವ ಗೌರವವಿಲ್ಲ. ರಾಷ್ಟ್ರಧ್ವಜ, ಭಾರತ ದೇಶದ 140 ಕೋಟಿ ಜನರ ಅಸ್ಮಿತೆಯ ಪ್ರತೀಕ. ಇಂತಹ ರಾಷ್ಟ್ರಧ್ವಜವನ್ನು ಹಾಕಲು ಒಪ್ಪದಿರುವವರು ದೇಶಭಕ್ತರೆಂದು ಹೇಳಿಕೊಳ್ಳುತ್ತಾರೆ’ ಎಂದು ಅವರು ಮುದ್ದೇಬಿಹಾಳದಲ್ಲಿ ಸುದ್ದಿಗಾರರಿಗೆ ತಿಳಿಸಿದರು.