ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಮರಳು ನೀತಿ ಕರಡು ಸಿದ್ದ: ನಿರಾಣಿ

Last Updated 3 ಮೇ 2021, 14:02 IST
ಅಕ್ಷರ ಗಾತ್ರ

ವಿಜಯಪುರ: ಹೊಸ ಮರಳು ನೀತಿ ಕರಡು ಸಿದ್ಧಪಡಿಸಲಾಗಿದ್ದು, ಈ ಕುರಿತು ಅಭಿಪ್ರಾಯ ಸಂಗ್ರಹಿಸಲು ರಾಜ್ಯದ ಎಲ್ಲ ಜಿಲ್ಲಾಡಳಿತಗಳಿಗೆ ಕಳುಹಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಮರಳು ನೀತಿಗೆ ಅಭಿಪ್ರಾಯ ಪಡೆದ ನಂತರ ಶೀಘ್ರದಲ್ಲಿಯೇ ಹೊಸ ಮರಳು ನೀತಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಜಲ್ಲಿ ಕ್ರಷರ್‌ಗಳು ಬಂದ ಆಗಬಾರದು, ಮಾರುಕಟ್ಟೆಯಲ್ಲಿ ವಸ್ತುಗಳ ಕೊರತೆ ಆಗಬಾರದು ಹಾಗೂ ಕ್ರಷರ್‌ಗಳು ಸುಲಲಿತವಾಗಿ ನಡೆಯಬೇಕು ಎಂದರು.

ನೂತನ ಗಣಿ ಮತ್ತು ನೂತನ ಮರಳು ನೀತಿ ಹಾಗೂ ನೂತನ ಗಣಿ ಅದಾಲತ್ ಬಗ್ಗೆಯೂ ರಾಜ್ಯಮಟ್ಟದಲ್ಲಿ ಅವಶ್ಯಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT