<p>ನಿಡಗುಂದಿ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಮುಸ್ಲಿಂ ಧರ್ಮೀಯರು ಗುರುವಾರ ಬಕ್ರೀದ್ ಅನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದರು.</p>.<p>ಪ್ರಮುಖ ಮಸೀದಿಗಳಿಗೆ ತೆರಳಿ ವಿಶೇಷ ನಮಾಜ್ ಸಲ್ಲಿಸಿದರು. ಈದ್ ಸಂದೇಶ ಹಾಗೂ ಧಾರ್ಮಿಕ ಪ್ರವಚನಗಳನ್ನು ಆಲಿಸಿ, ಪರಸ್ಪರ ಆಲಂಗಿಸಿಕೊಳ್ಳುವ ಮೂಲಕ ಶುಭ ಕೋರಿದರು.</p>.<p>ಜಾಮೀಯಾ ಮಸೀದಿ ಬಳಿ ಸಾವಿರಾರು ಸಂಖ್ಯೆಯಲ್ಲಿ ನೆರೆದ ಮುಸ್ಲಿಮರು ‘ತಕಬೀರಾ’ ಪಠಣ ಮಾಡುತ್ತ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.</p>.<p>ಬಳಿಕ ಈದ್ಗಾ ಮೈದಾನದಲ್ಲಿ ಜಮಾಯಿಸಿ ವಿಶ್ವಶಾಂತಿ ಮತ್ತು ಸೌಹಾರ್ದಕ್ಕಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.</p>.<p>ಧಾರ್ಮಿಕ ಗುರುಗಳಾದ ಮೌಲಾನಾ ಆಸಿಫ್ ಚಪ್ಪರಬಂದ ಸಾಮೂಹಿಕ ಪ್ರಾರ್ಥನೆ ಮಾಡಿಸಿದರು. ಹಾಫಿಜ್ ಜಾಹೀದ ಸೌದಾಗಾರ ಅವರು ಧರ್ಮೋಪದೇಶ ನೀಡಿದರು.</p>.<p>ಅಂಜುಮನ್ ಸಂಸ್ಥೆಯ ಅಧ್ಯಕ್ಷರಾದ ಎಂ.ಎಮ್. ಮುಲ್ಲಾ, ಪ್ರಮುಖ ಮುಖಂಡರಾದ ಹಾಜಿ ಜಾಕೀರ್ ಬೇಪಾರಿ, ಲಾಲಸಾಬ ಬಾಣಕಾರ, ರಾಜಾಸಾಬ ಬಾಣಕಾರ, ಮೌಲಾಸಾಬ್ ಅತ್ತಾರ, ಅಲಿ ಚಪ್ಪರಬಂದ, ರಮಜಾನ ನದಾಫ್, ರಾಜು ನದಾಫ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-26-361624016</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಿಡಗುಂದಿ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಮುಸ್ಲಿಂ ಧರ್ಮೀಯರು ಗುರುವಾರ ಬಕ್ರೀದ್ ಅನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದರು.</p>.<p>ಪ್ರಮುಖ ಮಸೀದಿಗಳಿಗೆ ತೆರಳಿ ವಿಶೇಷ ನಮಾಜ್ ಸಲ್ಲಿಸಿದರು. ಈದ್ ಸಂದೇಶ ಹಾಗೂ ಧಾರ್ಮಿಕ ಪ್ರವಚನಗಳನ್ನು ಆಲಿಸಿ, ಪರಸ್ಪರ ಆಲಂಗಿಸಿಕೊಳ್ಳುವ ಮೂಲಕ ಶುಭ ಕೋರಿದರು.</p>.<p>ಜಾಮೀಯಾ ಮಸೀದಿ ಬಳಿ ಸಾವಿರಾರು ಸಂಖ್ಯೆಯಲ್ಲಿ ನೆರೆದ ಮುಸ್ಲಿಮರು ‘ತಕಬೀರಾ’ ಪಠಣ ಮಾಡುತ್ತ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.</p>.<p>ಬಳಿಕ ಈದ್ಗಾ ಮೈದಾನದಲ್ಲಿ ಜಮಾಯಿಸಿ ವಿಶ್ವಶಾಂತಿ ಮತ್ತು ಸೌಹಾರ್ದಕ್ಕಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.</p>.<p>ಧಾರ್ಮಿಕ ಗುರುಗಳಾದ ಮೌಲಾನಾ ಆಸಿಫ್ ಚಪ್ಪರಬಂದ ಸಾಮೂಹಿಕ ಪ್ರಾರ್ಥನೆ ಮಾಡಿಸಿದರು. ಹಾಫಿಜ್ ಜಾಹೀದ ಸೌದಾಗಾರ ಅವರು ಧರ್ಮೋಪದೇಶ ನೀಡಿದರು.</p>.<p>ಅಂಜುಮನ್ ಸಂಸ್ಥೆಯ ಅಧ್ಯಕ್ಷರಾದ ಎಂ.ಎಮ್. ಮುಲ್ಲಾ, ಪ್ರಮುಖ ಮುಖಂಡರಾದ ಹಾಜಿ ಜಾಕೀರ್ ಬೇಪಾರಿ, ಲಾಲಸಾಬ ಬಾಣಕಾರ, ರಾಜಾಸಾಬ ಬಾಣಕಾರ, ಮೌಲಾಸಾಬ್ ಅತ್ತಾರ, ಅಲಿ ಚಪ್ಪರಬಂದ, ರಮಜಾನ ನದಾಫ್, ರಾಜು ನದಾಫ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-26-361624016</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>