<p><strong>ವಿಜಯಪುರ</strong>: ‘ಸಾವಿರ ದಿನಗಳ ಸಾಧನೆ’ ಎಂದು ರಾಜ್ಯ ಸರ್ಕಾರ ಸಂಭ್ರಮ ಆಚರಿಸುತ್ತಿದೆ. ಸರ್ಕಾರ ಪ್ರತಿ ವರ್ಷ ₹1 ಲಕ್ಷ ಕೋಟಿ ಸಾಲ ಮಾಡಿ ಜನರ ಮೇಲೆ ಸಾಲ ಹೊರೆಸುತ್ತಿದೆ. ಇದೇ ಸರ್ಕಾರದ ದೊಡ್ಡ ಸಾಧನೆ ಮತ್ತು ಕೊಡುಗೆ’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.</p>.<p>‘ಸಿ.ಎಂ., ಡಿಸಿಎಂ ನಿತ್ಯ ಕುರ್ಚಿ ಕಿತ್ತಾಟದಲ್ಲೇ ಕಾಲ ಕಳೆಯುತ್ತಿದ್ದಾರೆ. ಇದರಿಂದ ಸಂಪದ್ಭರಿತ ರಾಜ್ಯದಲ್ಲಿ ಬಡತನ ಆವರಿಸುತ್ತಿದೆ’ ಎಂದು ಸೋಮವಾರ ಸುದ್ದಿಗಾರರಿಗೆ ಮಾತನಾಡಿದ ಅವರು ಟೀಕಿಸಿದರು. </p>.<p>‘ಜೆಡಿಎಸ್ ಬೆಳ್ಳಿಹಬ್ಬ ಆಚರಿಸುತ್ತಿದ್ದು, ಈ ನಿಮಿತ್ತ ಫೆ.27ರಂದು ವಿಜಯಪುರ, ಧಾರವಾಡ, ಬಾಗಲಕೋಟೆ ಸೇರಿ ಏಳು ಜಿಲ್ಲೆಗಳ ಜನತಾ ಸಮಾವೇಶ ವಿಜಯಪುರದಲ್ಲಿ ನಡೆಸಲಾಗುವುದು’ ಎಂದರು.</p>.<p>‘ದೇವೇಗೌಡರು ಕಟ್ಟಿ ಬೆಳೆಸಿದ ಪ್ರಾದೇಶಿಕ ಪಕ್ಷ ಜೆಡಿಎಸ್, ನಾಯಕರನ್ನು ರೂಪಿಸುವ ಕಾರ್ಖಾನೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರೂ ಜೆಡಿಎಸ್ ತನ್ನ ಜಾತ್ಯತೀತ ಧೋರಣೆಯಿಂದ ಹಿಂದೆ ಸರಿದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ‘ಸಾವಿರ ದಿನಗಳ ಸಾಧನೆ’ ಎಂದು ರಾಜ್ಯ ಸರ್ಕಾರ ಸಂಭ್ರಮ ಆಚರಿಸುತ್ತಿದೆ. ಸರ್ಕಾರ ಪ್ರತಿ ವರ್ಷ ₹1 ಲಕ್ಷ ಕೋಟಿ ಸಾಲ ಮಾಡಿ ಜನರ ಮೇಲೆ ಸಾಲ ಹೊರೆಸುತ್ತಿದೆ. ಇದೇ ಸರ್ಕಾರದ ದೊಡ್ಡ ಸಾಧನೆ ಮತ್ತು ಕೊಡುಗೆ’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.</p>.<p>‘ಸಿ.ಎಂ., ಡಿಸಿಎಂ ನಿತ್ಯ ಕುರ್ಚಿ ಕಿತ್ತಾಟದಲ್ಲೇ ಕಾಲ ಕಳೆಯುತ್ತಿದ್ದಾರೆ. ಇದರಿಂದ ಸಂಪದ್ಭರಿತ ರಾಜ್ಯದಲ್ಲಿ ಬಡತನ ಆವರಿಸುತ್ತಿದೆ’ ಎಂದು ಸೋಮವಾರ ಸುದ್ದಿಗಾರರಿಗೆ ಮಾತನಾಡಿದ ಅವರು ಟೀಕಿಸಿದರು. </p>.<p>‘ಜೆಡಿಎಸ್ ಬೆಳ್ಳಿಹಬ್ಬ ಆಚರಿಸುತ್ತಿದ್ದು, ಈ ನಿಮಿತ್ತ ಫೆ.27ರಂದು ವಿಜಯಪುರ, ಧಾರವಾಡ, ಬಾಗಲಕೋಟೆ ಸೇರಿ ಏಳು ಜಿಲ್ಲೆಗಳ ಜನತಾ ಸಮಾವೇಶ ವಿಜಯಪುರದಲ್ಲಿ ನಡೆಸಲಾಗುವುದು’ ಎಂದರು.</p>.<p>‘ದೇವೇಗೌಡರು ಕಟ್ಟಿ ಬೆಳೆಸಿದ ಪ್ರಾದೇಶಿಕ ಪಕ್ಷ ಜೆಡಿಎಸ್, ನಾಯಕರನ್ನು ರೂಪಿಸುವ ಕಾರ್ಖಾನೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರೂ ಜೆಡಿಎಸ್ ತನ್ನ ಜಾತ್ಯತೀತ ಧೋರಣೆಯಿಂದ ಹಿಂದೆ ಸರಿದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>