<p><strong>ವಿಜಯಪುರ</strong>: ತಮ್ಮ 26ನೇ ವಯಸ್ಸಿನಲ್ಲಿ ಕಾರಿನಲ್ಲಿ ಪಯಣಿಸುವಾಗ ಆಕಸ್ಮಿಕವಾಗಿ ಅಪಘಾತಕ್ಕೀಡಾಗಿ ತಮ್ಮ ಬೆನ್ನು ಹುರಿಯನ್ನು ಕಳೆದುಕೊಂಡರು ವಿಜಯಪುರದ ನಿಮಿಷ ಆಚಾರ್ಯ.</p>.<p>ವರ್ಷಾನುಗಟ್ಟಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಕೂಡ ಅವರ ಬೆನ್ನುಹರಿ ಸರಿಯಾಗಲಿಲ್ಲ. ಹಾಗಂತ ಮನೆಮಂದಿಗೆ ಹೊರಯಾಗದೇ ತಮ್ಮ ಕೆಲಸವನ್ನು ತಾವೇ ಮಾಡಿಕೊಳ್ಳುವ ಜೊತೆಗೆ ತಮ್ಮಹಾಗೆ ಬೆನ್ನುಹುರಿ ಕಳೆದುಕೊಂಡು ಬಾಳುತ್ತಿರುವವರ ಬಗ್ಗೆ ಯೋಚಿಸಿ ಅವರ ಸೇವೆ ಮಾಡುತ್ತಾ ಬರುತ್ತಿದ್ದಾರೆ ನಿಮಿಷ ಆಚಾರ್ಯ.</p>.<p>ರಾಜ್ಯದಾದ್ಯಂತ ಸಂಚರಿಸಿ, ಬೆನ್ನುಹುರಿ ಅಪಘಾತಕ್ಕೀಡಾದವರ ಕಷ್ಟ ಹಾಗೂ ಆರೋಗ್ಯ, ಭವಿಷ್ಯದ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡು 2006ರಲ್ಲಿ ಕರ್ನಾಟಕ ರಾಜ್ಯ ಬೆನ್ನುಹುರಿ ಅಪಘಾತಕ್ಕೆ ಒಳಗಾದವರ ಸಂಘವನ್ನು ಸ್ಥಾಪಿಸಿ, ಸಂಸ್ಥಾಪಕ ಅಧ್ಯಕ್ಷರಾಗಿ ಈಗಲೂ ಅವರ ಸೇವೆಯಲ್ಲಿ ನಿರತವಾಗಿದ್ದಾರೆ.</p>.<p>ತಮ್ಮ ಬೆನ್ನುಹುರಿ ಅಪಘಾತವನ್ನು ಮರೆತು, ತಮ್ಮಂತೆ ಬೆನ್ನುಹುರಿ ಅಪಘಾತಕ್ಕೆ ಒಳಗಾದವರ ಮನೆ, ಮನೆ ಭೇಟಿ ಮಾಡಿ ಅವರ ವೈದ್ಯಕೀಯ ವೆಚ್ಚಕ್ಕೆ ಕ್ರಮವಹಿಸಿದ್ದಾರೆ. ವಿಜಯಪುರ ಜಿಲ್ಲೆಯೊಂದರಲ್ಲೇ ಸುಮಾರು 250ಕ್ಕೂ ಹೆಚ್ಚು ಬೆನ್ನುಹುರಿ ಅಪಘಾತಕ್ಕೀಡಾದವರ ಮನೆಗಳಿಗೆ ಭೇಟಿ ನೀಡಿ ಅಗತ್ಯ ವೈದ್ಯಕೀಯ ವ್ಯವಸ್ಥೆ ಮಾಡುತ್ತಿದ್ದಾರೆ.</p>.<p>2006 ರಿಂದ ತಮ್ಮ ಸ್ವಂತ ಖರ್ಚಿನಲ್ಲಿ ಬೆನ್ನುಹುರಿ ಅಪಘಾತಕ್ಕೆ ಒಳಗಾದವರಿಗೆ ವೈದ್ಯಕೀಯ ಕಿಟ್ ನೀಡಿ, ಅದರ ಬಳಕೆ ಬಗ್ಗೆ ತರಬೇತಿ ನೀಡುತ್ತಿದ್ದಾರೆ. ಬೆನ್ನುಹುರಿ ಅಪಘಾತದಿಂದ ಬಳಲುತ್ತಿರುವವರ ಕುಟುಂಬದವರು, ಸಂಬಂಧಿಕರು, ಶೂಶ್ರೂಷಕರನ್ನು ಕರೆಯಿಸಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಜೊತೆ ಹೇಗೆ ವರ್ತಿಸಬೇಕು ಎಂದು ತಿಳಿಹೇಳುತ್ತಿದ್ದಾರೆ.</p>.<p>2012ರಿಂದ ಪ್ರತಿ ವರ್ಷ ಸೆಪ್ಟೆಂಬರ್ 5ರಂದು ವಿಶ್ವ ಬೆನ್ನುಹುರಿ ಅಪಘಾತಕ್ಕೊಳಗಾದವರ ದಿನವನ್ನು ತಮ್ಮ ಸ್ವಂತ ಖರ್ಚಿನಿಂದ ಆಚರಿಸುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. ಬೆನ್ನುಹುರಿ ಅಪಘಾತಕ್ಕೊಳಗಾದವರ ನೆರವಿಗೆ ಸರ್ಕಾರ, ಸಮಾಜ ಕೈಜೋಡಿಸುವಂತೆ ಮಾಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ತಮ್ಮ 26ನೇ ವಯಸ್ಸಿನಲ್ಲಿ ಕಾರಿನಲ್ಲಿ ಪಯಣಿಸುವಾಗ ಆಕಸ್ಮಿಕವಾಗಿ ಅಪಘಾತಕ್ಕೀಡಾಗಿ ತಮ್ಮ ಬೆನ್ನು ಹುರಿಯನ್ನು ಕಳೆದುಕೊಂಡರು ವಿಜಯಪುರದ ನಿಮಿಷ ಆಚಾರ್ಯ.</p>.<p>ವರ್ಷಾನುಗಟ್ಟಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಕೂಡ ಅವರ ಬೆನ್ನುಹರಿ ಸರಿಯಾಗಲಿಲ್ಲ. ಹಾಗಂತ ಮನೆಮಂದಿಗೆ ಹೊರಯಾಗದೇ ತಮ್ಮ ಕೆಲಸವನ್ನು ತಾವೇ ಮಾಡಿಕೊಳ್ಳುವ ಜೊತೆಗೆ ತಮ್ಮಹಾಗೆ ಬೆನ್ನುಹುರಿ ಕಳೆದುಕೊಂಡು ಬಾಳುತ್ತಿರುವವರ ಬಗ್ಗೆ ಯೋಚಿಸಿ ಅವರ ಸೇವೆ ಮಾಡುತ್ತಾ ಬರುತ್ತಿದ್ದಾರೆ ನಿಮಿಷ ಆಚಾರ್ಯ.</p>.<p>ರಾಜ್ಯದಾದ್ಯಂತ ಸಂಚರಿಸಿ, ಬೆನ್ನುಹುರಿ ಅಪಘಾತಕ್ಕೀಡಾದವರ ಕಷ್ಟ ಹಾಗೂ ಆರೋಗ್ಯ, ಭವಿಷ್ಯದ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡು 2006ರಲ್ಲಿ ಕರ್ನಾಟಕ ರಾಜ್ಯ ಬೆನ್ನುಹುರಿ ಅಪಘಾತಕ್ಕೆ ಒಳಗಾದವರ ಸಂಘವನ್ನು ಸ್ಥಾಪಿಸಿ, ಸಂಸ್ಥಾಪಕ ಅಧ್ಯಕ್ಷರಾಗಿ ಈಗಲೂ ಅವರ ಸೇವೆಯಲ್ಲಿ ನಿರತವಾಗಿದ್ದಾರೆ.</p>.<p>ತಮ್ಮ ಬೆನ್ನುಹುರಿ ಅಪಘಾತವನ್ನು ಮರೆತು, ತಮ್ಮಂತೆ ಬೆನ್ನುಹುರಿ ಅಪಘಾತಕ್ಕೆ ಒಳಗಾದವರ ಮನೆ, ಮನೆ ಭೇಟಿ ಮಾಡಿ ಅವರ ವೈದ್ಯಕೀಯ ವೆಚ್ಚಕ್ಕೆ ಕ್ರಮವಹಿಸಿದ್ದಾರೆ. ವಿಜಯಪುರ ಜಿಲ್ಲೆಯೊಂದರಲ್ಲೇ ಸುಮಾರು 250ಕ್ಕೂ ಹೆಚ್ಚು ಬೆನ್ನುಹುರಿ ಅಪಘಾತಕ್ಕೀಡಾದವರ ಮನೆಗಳಿಗೆ ಭೇಟಿ ನೀಡಿ ಅಗತ್ಯ ವೈದ್ಯಕೀಯ ವ್ಯವಸ್ಥೆ ಮಾಡುತ್ತಿದ್ದಾರೆ.</p>.<p>2006 ರಿಂದ ತಮ್ಮ ಸ್ವಂತ ಖರ್ಚಿನಲ್ಲಿ ಬೆನ್ನುಹುರಿ ಅಪಘಾತಕ್ಕೆ ಒಳಗಾದವರಿಗೆ ವೈದ್ಯಕೀಯ ಕಿಟ್ ನೀಡಿ, ಅದರ ಬಳಕೆ ಬಗ್ಗೆ ತರಬೇತಿ ನೀಡುತ್ತಿದ್ದಾರೆ. ಬೆನ್ನುಹುರಿ ಅಪಘಾತದಿಂದ ಬಳಲುತ್ತಿರುವವರ ಕುಟುಂಬದವರು, ಸಂಬಂಧಿಕರು, ಶೂಶ್ರೂಷಕರನ್ನು ಕರೆಯಿಸಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಜೊತೆ ಹೇಗೆ ವರ್ತಿಸಬೇಕು ಎಂದು ತಿಳಿಹೇಳುತ್ತಿದ್ದಾರೆ.</p>.<p>2012ರಿಂದ ಪ್ರತಿ ವರ್ಷ ಸೆಪ್ಟೆಂಬರ್ 5ರಂದು ವಿಶ್ವ ಬೆನ್ನುಹುರಿ ಅಪಘಾತಕ್ಕೊಳಗಾದವರ ದಿನವನ್ನು ತಮ್ಮ ಸ್ವಂತ ಖರ್ಚಿನಿಂದ ಆಚರಿಸುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. ಬೆನ್ನುಹುರಿ ಅಪಘಾತಕ್ಕೊಳಗಾದವರ ನೆರವಿಗೆ ಸರ್ಕಾರ, ಸಮಾಜ ಕೈಜೋಡಿಸುವಂತೆ ಮಾಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>