ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರಾಣಿ ಫೌಂಡೇಶನ್: ಮಾಸ್ಕ್, ಸ್ಯಾನಿಟೈಸರ್ ವಿತರಣೆ

Last Updated 15 ಜುಲೈ 2021, 16:34 IST
ಅಕ್ಷರ ಗಾತ್ರ

ವಿಜಯಪುರ: ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿನ ಪ್ರಮುಖ ಘಟ್ಟವಾಗಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಅತ್ಯಂತ ಶಿಸ್ತುಬದ್ಧತೆ ಹಾಗೂ ಕೋವಿಡ್ ನಿಯಮಗಳನ್ನು ಅನುಸರಿಸಿ, ಕಾಳಜಿ ಪೂರ್ವಕವಾಗಿ ನಡೆಸಬೇಕು ಎಂದು ವಿಧಾನಪರಿಷತ್ ಸದಸ್ಯ ಹನುಮಂತ ನಿರಾಣಿ ಹೇಳಿದರು.

ನಗರದ ಅಲ್ ಅಮಿನ್ ಆಸ್ಪತ್ರೆ ಎದುರಿಗೆ ಇರುವ ಶಿಕ್ಷಕರ ತರಬೇತಿ ಸಂಸ್ಥೆ (ಡಯಟ್)ಯಲ್ಲಿ ನಿರಾಣಿ ಫೌಂಡೇಷನ್‌ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾರ್ಥಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಿ ಮಾತನಾಡಿದರು.

ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಯನ್ನು ವಿದ್ಯಾರ್ಥಿಗಳು ಹೆದರದೆ ಧೈರ್ಯದಿಂದ ಎದುರಿಸಿ ವಿಜಯಶಾಲಿಗಳಾಗಬೇಕು. ನಿಮ್ಮೆಲ್ಲ ಗೆಲುವಿಗೆ ನಾವೆಲ್ಲರೂ ಬೆಂಬಲವಾಗಿದ್ದೇವೆ ಎಂದು ಅವರು ಹೇಳಿದರು.

ಎಸ್.ಎಸ್.ಎಲ್.ಸಿ. ಪರೀಕ್ಷೆ ವಿಷಯದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ದೃಢ ನಿಲುವು ತಾಳಿದ್ದು ಸ್ವಾಗತಾರ್ಹ ಮತ್ತು ಶ್ಲಾಘನೀಯ. ಇಲಾಖೆಯು ಅಧಿಕಾರಿವೃಂದ, ಪಾಲಕರು, ಸಂಘ-ಸಂಸ್ಥೆಗಳ ತಮ್ಮ ಬೆನ್ನೆಲುಬಿಗೆ ನಿಂತು ಈ ಕೊರೊನಾ ಮಧ್ಯೆಯೂ ಈ ಪರೀಕ್ಷೆಯನ್ನು ಆಯೋಜಿಸಿರುವುದು ದೇಶವೇ ಗಮನಿಸುತ್ತಿದೆ ಎಂದರು.

ಕೋವಿಡ್‌ ಸಂದರ್ಭದಲ್ಲಿ ಪರೀಕ್ಷೆ ಬರೆಯದೇ ಪಾಸಾಗಿ ಜೀವನದುದ್ದಕ್ಕೂ ‘ಕೊರೊನಾ ಪಾಸ್‌’ ಎಂಬ ಹಣೆಪಟ್ಟಿಯನ್ನು ಅಂಟಿಸಿಕೊಳ್ಳದೆ, ಕೊರೊನಾ ಎದುರಿಸಿ ಪರೀಕ್ಷೆ ಬರೆದು ವಾರಿಯರ್ಸ್‌ಗಳಾಗಿ ತಲೆಯೆತ್ತಿ ನಡೆಯೋದು ಹೆಮ್ಮೆಯ ವಿಷಯ ಎಂದು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು(ಆಡಳಿತ) ಎನ್.ವಿ.ಹೊಸೂರ, ಎಸ್.ಪಿ‌.ಬಾಡಂಗಡಿ, ಎಸ್.ಜೆ.ಹಂಚಿನಾಳ, ರವೀಂದ್ರ ತುಂಗಳ, ಭೀಮಾಶಂಕರ ಹಧನೂರು, ಮಾಳುಗೌಡ ಪಾಟೀಲ, ಗೋಪಾಲ ಘಟಕಾಂಬಳೆ, ರವಿ ಖಾನಾಪುರ, ವಿನಾಯಕ ದಹಿಂಡೆ, ಬಸವರಾಜ ಗೋಲಾಯಿ, ವಿಜಯ ಜೋಶಿ, ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT