<p><strong>ವಿಜಯಪುರ</strong>: ವಿಜಯಪುರ- ಚಿತ್ರದುರ್ಗ ಮತ್ತು ವಿಜಯಪುರ- ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50ರ ದುರಸ್ಥಿಗೆ ಆಗ್ರಹಿಸಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರು ಬರೆದ ಪತ್ರಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್ ಗಡ್ಕರಿ ಸ್ಪಂದಿಸಿದ್ದು, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.</p>.<p>ಮಹಾರಾಷ್ಟ್ರದ ಸೋಲಾಪುರದಿಂದ ಪ್ರಾರಂಭವಾಗಿ ರಾಜ್ಯದ ವಿಜಯಪುರ ಮೂಲಕ ಚಿತ್ರದುರ್ಗ ಮೂಲಕ ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50 ಪ್ರಮುಖ ಹೆದ್ದಾರಿಗಳಲ್ಲಿ ಒಂದಾಗಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕವನ್ನು ಸಂಪರ್ಕಿಸುವ ಆಂತರರಾಜ್ಯ ಪ್ರಮುಖ ರಾಷ್ಟ್ರೀಯ ಹೆದ್ದಾರಿಯಾಗಿರುವ ಈ ರಸ್ತೆ ಹದಗೆಟ್ಟಿದೆ. ವಿಜಯಪುರದಿಂದ ಚಿತ್ರದುರ್ಗದವರೆಗೆ ರಸ್ತೆಯ ಮೇಲ್ಪದರು ಕಿತ್ತು ಹೋಗಿದೆ. ವಿಜಯಪುರ- ಸೋಲಾಪುರ ರಾಷ್ಟ್ರೀಯ ಹೆದ್ದಾರಿಯೂ ಬಹುತೇಕ ಹಾಳಾಗಿದೆ. ಈ ಎರಡೂ ಮಾರ್ಗಗಳಲ್ಲಿ ರಸ್ತೆ ಮಧ್ಯದಲ್ಲಿ ಕುಣಿಗಳು ಉಂಟಾಗಿದ್ದು, ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಇದರಿಂದ ವಾಹನಗಳ ಸಂಚಾರ ನಿಧಾನವಾಗಿದ್ದು, ದಿನನಿತ್ಯ ಸಂಚಾರಕ್ಕೆ ಸಾರ್ವಜನಿಕರಿಗೆ ಅಪಾಯ ಎದುರಾಗಿದೆ ಎಂದು ಸುನೀಲಗೌಡ ಪತ್ರದಲ್ಲಿ ಸಚಿವರ ಗಮನಕ್ಕೆ ತಂದಿದ್ದರು.</p>.<p>ಭಾರಿ ವಾಹನಗಳೂ ಈ ರಸ್ತೆಯಲ್ಲಿ ಸಂಚರಿಸುವುದರಿಂದ ಈ ಸಮಸ್ಯೆ ಮತ್ತಷ್ಟು ಉಲ್ಬಣಿಸಲು ಕಾರಣವಾಗಿದೆ. ಅಲ್ಲದೇ, ಅತೀ ಹೆಚ್ಚು ವಾಹನಗಳು ಸಂಚರಿಸುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈ ಮಾರ್ಗವೂ ಒಂದಾಗಿದೆ. ಪ್ರತಿನಿತ್ಯ ಈ ಎರಡೂ ಮಾರ್ಗಗಳಲ್ಲಿ ಸುಮಾರು 27 ಸಾವಿರ ವಾಹನಗಳು ಸಂಚರಿಸುತ್ತವೆ. ದಿನೇ ದಿನೇ ವಾಹನಗಳ ಸಂಚಾರ ಹೆಚ್ಚಾಗುತ್ತಿದೆ ಎಂದು ಪಾಟೀಲ ತಿಳಿಸಿದ್ದರು.</p>.<p>ವಿಜಯಪುರದಿಂದ ಬೆಂಗಳೂರು ಮಾರ್ಗದಲ್ಲಿ ಹುನಗುಂದ, ಕುಷ್ಟಗಿ ಹಾಗೂ ಹೊಸಪೇಟೆಗಳಿಗೆ ಬೇರೆ ಹೆದ್ದಾರಿಗಳು ಸಂಪರ್ಕಿಸುವುದರಿಂದ ಆ ಮಾರ್ಗದ ವಾಹನಗಳೂ ಇದೇ ರಸ್ತೆಗೆ ಸೇರಿ ವಾಹನ ದಟ್ಟಣೆ ಇನ್ನೂ ಹೆಚ್ಚಾಗುತ್ತಿದೆ ಎಂದು ಅವರು ಅಂಕಿ-ಅಂಶ ಸಮೇತ ಪತ್ರದಲ್ಲಿ ಪ್ರಸ್ತಾಪಿಸಿದ್ದರು.</p>.<p>ಅಷ್ಟೇ ಅಲ್ಲ, ಅತೀ ಹೆಚ್ಚು ಟೋಲ್ ಸಂಗ್ರಹವಾಗುವ ಮಾರ್ಗಗಳಲ್ಲಿ ಇದೂ ಒಂದಾಗಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಂದ ಪ್ರತಿದಿನ ಸರಾಸರಿ ಸುಮಾರು ₹ 30 ಲಕ್ಷ ಟೋಲ್ ಸಂಗ್ರಹಿಸಲಾಗುತ್ತಿದೆ. ಇಷ್ಟೋಂದು ಟೋಲ್ ಹಣ ಸಂಗ್ರಹವಾಗುತ್ತಿದ್ದರೂ ರಸ್ತೆ ಮಾತ್ರ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಾನದಂಡಕ್ಕೆ ಅನುಗುಣವಾಗಿರದೇ ಕಳಪೆಯಾಗಿದೆ. ಆದ್ದರಿಂದ ಈ ರಸ್ತೆಯನ್ನು ನಿರ್ದಿಷ್ಠ ಮಾನದಂಡಗಳಿಗೆ ಅನುಗುಣವಾಗಿ ದುರಸ್ತಿ ಮಾಡಿ ಮೂಲ ಸೌಲಭ್ಯ ಒದಗಿಸಬೇಕು. ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚಿ ಹೆದ್ದಾರಿಯಲ್ಲಿ ಹೊಸದಾಗಿ ಮೇಲ್ಪದರು ಹಾಕಬೇಕು. ಅಗತ್ಯವಿರುವ ಕಡೆ ಹೆದ್ದಾರಿಯನ್ನು ಅಗಲೀಕರಣ ಮಾಡಬೇಕು ಎಂದು ತಮ್ಮ ಪತ್ರದಲ್ಲಿ ಮಾಹಿತಿ ನೀಡಿದ್ದರು.</p>.<p>ಕೇಂದ್ರ ಸಚಿವರು ಮುತುವರ್ಜಿ ವಹಿಸಿ, ಈ ರಸ್ತೆ ದುರಸ್ಥಿ ಮಾಡಿಸಿದರೆ ಕರ್ನಾಟಕ ಮತ್ತು ಮಹಾರಾಷ್ಟ್ರದ ಜನರಿಗೆ ಸಂಚಾರಕ್ಕೆ ಅನುಕೂಲ ಒದಗಿಸಬೇಕು. ಇದರಿಂದ ಈ ಮಾರ್ಗದಲ್ಲಿ ಬರುವ ಬಹಳಷ್ಟು ಜಿಲ್ಲೆಗಳಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ಸಿಗಲಿದೆ. ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳೇಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ವಿಜಯಪುರ- ಚಿತ್ರದುರ್ಗ ಮತ್ತು ವಿಜಯಪುರ- ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50ರ ದುರಸ್ಥಿಗೆ ಆಗ್ರಹಿಸಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರು ಬರೆದ ಪತ್ರಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್ ಗಡ್ಕರಿ ಸ್ಪಂದಿಸಿದ್ದು, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.</p>.<p>ಮಹಾರಾಷ್ಟ್ರದ ಸೋಲಾಪುರದಿಂದ ಪ್ರಾರಂಭವಾಗಿ ರಾಜ್ಯದ ವಿಜಯಪುರ ಮೂಲಕ ಚಿತ್ರದುರ್ಗ ಮೂಲಕ ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50 ಪ್ರಮುಖ ಹೆದ್ದಾರಿಗಳಲ್ಲಿ ಒಂದಾಗಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕವನ್ನು ಸಂಪರ್ಕಿಸುವ ಆಂತರರಾಜ್ಯ ಪ್ರಮುಖ ರಾಷ್ಟ್ರೀಯ ಹೆದ್ದಾರಿಯಾಗಿರುವ ಈ ರಸ್ತೆ ಹದಗೆಟ್ಟಿದೆ. ವಿಜಯಪುರದಿಂದ ಚಿತ್ರದುರ್ಗದವರೆಗೆ ರಸ್ತೆಯ ಮೇಲ್ಪದರು ಕಿತ್ತು ಹೋಗಿದೆ. ವಿಜಯಪುರ- ಸೋಲಾಪುರ ರಾಷ್ಟ್ರೀಯ ಹೆದ್ದಾರಿಯೂ ಬಹುತೇಕ ಹಾಳಾಗಿದೆ. ಈ ಎರಡೂ ಮಾರ್ಗಗಳಲ್ಲಿ ರಸ್ತೆ ಮಧ್ಯದಲ್ಲಿ ಕುಣಿಗಳು ಉಂಟಾಗಿದ್ದು, ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಇದರಿಂದ ವಾಹನಗಳ ಸಂಚಾರ ನಿಧಾನವಾಗಿದ್ದು, ದಿನನಿತ್ಯ ಸಂಚಾರಕ್ಕೆ ಸಾರ್ವಜನಿಕರಿಗೆ ಅಪಾಯ ಎದುರಾಗಿದೆ ಎಂದು ಸುನೀಲಗೌಡ ಪತ್ರದಲ್ಲಿ ಸಚಿವರ ಗಮನಕ್ಕೆ ತಂದಿದ್ದರು.</p>.<p>ಭಾರಿ ವಾಹನಗಳೂ ಈ ರಸ್ತೆಯಲ್ಲಿ ಸಂಚರಿಸುವುದರಿಂದ ಈ ಸಮಸ್ಯೆ ಮತ್ತಷ್ಟು ಉಲ್ಬಣಿಸಲು ಕಾರಣವಾಗಿದೆ. ಅಲ್ಲದೇ, ಅತೀ ಹೆಚ್ಚು ವಾಹನಗಳು ಸಂಚರಿಸುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈ ಮಾರ್ಗವೂ ಒಂದಾಗಿದೆ. ಪ್ರತಿನಿತ್ಯ ಈ ಎರಡೂ ಮಾರ್ಗಗಳಲ್ಲಿ ಸುಮಾರು 27 ಸಾವಿರ ವಾಹನಗಳು ಸಂಚರಿಸುತ್ತವೆ. ದಿನೇ ದಿನೇ ವಾಹನಗಳ ಸಂಚಾರ ಹೆಚ್ಚಾಗುತ್ತಿದೆ ಎಂದು ಪಾಟೀಲ ತಿಳಿಸಿದ್ದರು.</p>.<p>ವಿಜಯಪುರದಿಂದ ಬೆಂಗಳೂರು ಮಾರ್ಗದಲ್ಲಿ ಹುನಗುಂದ, ಕುಷ್ಟಗಿ ಹಾಗೂ ಹೊಸಪೇಟೆಗಳಿಗೆ ಬೇರೆ ಹೆದ್ದಾರಿಗಳು ಸಂಪರ್ಕಿಸುವುದರಿಂದ ಆ ಮಾರ್ಗದ ವಾಹನಗಳೂ ಇದೇ ರಸ್ತೆಗೆ ಸೇರಿ ವಾಹನ ದಟ್ಟಣೆ ಇನ್ನೂ ಹೆಚ್ಚಾಗುತ್ತಿದೆ ಎಂದು ಅವರು ಅಂಕಿ-ಅಂಶ ಸಮೇತ ಪತ್ರದಲ್ಲಿ ಪ್ರಸ್ತಾಪಿಸಿದ್ದರು.</p>.<p>ಅಷ್ಟೇ ಅಲ್ಲ, ಅತೀ ಹೆಚ್ಚು ಟೋಲ್ ಸಂಗ್ರಹವಾಗುವ ಮಾರ್ಗಗಳಲ್ಲಿ ಇದೂ ಒಂದಾಗಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಂದ ಪ್ರತಿದಿನ ಸರಾಸರಿ ಸುಮಾರು ₹ 30 ಲಕ್ಷ ಟೋಲ್ ಸಂಗ್ರಹಿಸಲಾಗುತ್ತಿದೆ. ಇಷ್ಟೋಂದು ಟೋಲ್ ಹಣ ಸಂಗ್ರಹವಾಗುತ್ತಿದ್ದರೂ ರಸ್ತೆ ಮಾತ್ರ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಾನದಂಡಕ್ಕೆ ಅನುಗುಣವಾಗಿರದೇ ಕಳಪೆಯಾಗಿದೆ. ಆದ್ದರಿಂದ ಈ ರಸ್ತೆಯನ್ನು ನಿರ್ದಿಷ್ಠ ಮಾನದಂಡಗಳಿಗೆ ಅನುಗುಣವಾಗಿ ದುರಸ್ತಿ ಮಾಡಿ ಮೂಲ ಸೌಲಭ್ಯ ಒದಗಿಸಬೇಕು. ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚಿ ಹೆದ್ದಾರಿಯಲ್ಲಿ ಹೊಸದಾಗಿ ಮೇಲ್ಪದರು ಹಾಕಬೇಕು. ಅಗತ್ಯವಿರುವ ಕಡೆ ಹೆದ್ದಾರಿಯನ್ನು ಅಗಲೀಕರಣ ಮಾಡಬೇಕು ಎಂದು ತಮ್ಮ ಪತ್ರದಲ್ಲಿ ಮಾಹಿತಿ ನೀಡಿದ್ದರು.</p>.<p>ಕೇಂದ್ರ ಸಚಿವರು ಮುತುವರ್ಜಿ ವಹಿಸಿ, ಈ ರಸ್ತೆ ದುರಸ್ಥಿ ಮಾಡಿಸಿದರೆ ಕರ್ನಾಟಕ ಮತ್ತು ಮಹಾರಾಷ್ಟ್ರದ ಜನರಿಗೆ ಸಂಚಾರಕ್ಕೆ ಅನುಕೂಲ ಒದಗಿಸಬೇಕು. ಇದರಿಂದ ಈ ಮಾರ್ಗದಲ್ಲಿ ಬರುವ ಬಹಳಷ್ಟು ಜಿಲ್ಲೆಗಳಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ಸಿಗಲಿದೆ. ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳೇಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>