<p><strong>ವಿಜಯಪುರ</strong>: ಜ್ಞಾನಕ್ಕಿಂತ ಮಿಗಿಲಾದ ವಸ್ತು ಜಗತ್ತಿನಲ್ಲಿ ಯಾವುದೂ ಇಲ್ಲ ಎಂದು ನರ್ಮದಾ ಬಚಾವೋ ಆಂದೋಲನದ ರೂವಾರಿ, ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಹೇಳಿದರು.</p>.<p>ನಗರದ ಸಿಎನ್ಎಫ್ ಸಂಸ್ಥೆಯಸಂಗಮೇಶ ಬಬಲೇಶ್ವರ ಅವರು ಕೈಗೊಂಡಿರುವ ‘ಜ್ಞಾನ ಜೋಳಿಗೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ತಮ್ಮ ಬಳಿಯಿದ್ದ ಪುಸ್ತಕವನ್ನು ಜ್ಞಾನ ಜೋಳಿಗೆಗೆ ಹಾಕುವುದರ ಮೂಲಕ ಶುಭ ಹಾರೈಸಿ ಅವರು ಮಾತನಾಡಿದರು.</p>.<p>ಜ್ಞಾನ ಜೋಳಿಗೆ ಮೂಲಕ ಪುಸ್ತಕಗಳನ್ನು ಸಂಗ್ರಹಿಸಿ, ಸರ್ಕಾರಿ ಶಾಲೆಗಳ ಗ್ರಂಥಾಲಯಗಳಿಗೆ ನೀಡುತ್ತಿರುವುದು ನಿಜಕ್ಕೂ ಅಭಿಮಾನದ ಸಂಗತಿ ಎಂದರು.</p>.<p>ಗ್ರಾಮೀಣ ಭಾಗದ ಮಕ್ಕಳ ಜ್ಞಾನದಾಹವನ್ನು ತಣಿಸುವ ಸಿಎನ್ಎಫ್ ಸಂಸ್ಥೆಯ ಜ್ಞಾನ ಯಜ್ಞ ನಿರಂತರವಾಗಿ ಸಾಗಲಿ ಎಂದು ಶುಭ ಹಾರೈಸಿದರು.</p>.<p>ಜ್ಞಾನ ಜೋಳಿಗೆ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿ, ಜ್ಞಾನ ಜೋಳಿಗೆ ಕಾರ್ಯಕ್ಕೆ ನಾಡಿನಾದ್ಯಂತ ವ್ಯಾಪಕವಾಗಿ ಪ್ರಶಂಸೆ ವ್ಯಕ್ತವಾಗುತ್ತಿದೆ. ಸಾಹಿತ್ಯಾಸಕ್ತರು, ಶಿಕ್ಷಕರು, ಸಾಹಿತಿಗಳು ತಾವು ಓದಿ ಎತ್ತಿಟ್ಟಿರುವ ಪುಸ್ತಕಗಳನ್ನು ಜ್ಞಾನ ಜೋಳಿಗೆ ದಾಸೋಹ ಮಾಡುವಂತೆ ಅವರು ಮನವಿ ಮಾಡಿದರು.</p>.<p>ಸಿಎನ್ ಎಫ್ ವಿಭಾಗದ ಮುಖ್ಯಸ್ಥ ಟಿಯೋಲ್ ಮಾಚಾಡೊ ಆಲ್ವಿನ್, ಸಿದ್ಧಲಿಂಗ ಬಾಗೇವಾಡಿ, ಭರತ್ ರೆಡ್ಡಿ, ಚಂದ್ರಶೇಖರ್ ಗಂಟೆಪ್ಪಗೋಳ, ಭರತ್ ಕುಮಾರ್, ರವಿ ಕೆಂಗನಾಳ ಉಪಸ್ಥಿತರಿದ್ದರು.</p>.<p>ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಹಾಗೂ ಜ್ಞಾನ ಜೋಳಿಗೆ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನ ಪರವಾಗಿ ಸಂಗಮೇಶ ಬಬಲೇಶ್ವರ ಅವರು ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ಸತ್ಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಜ್ಞಾನಕ್ಕಿಂತ ಮಿಗಿಲಾದ ವಸ್ತು ಜಗತ್ತಿನಲ್ಲಿ ಯಾವುದೂ ಇಲ್ಲ ಎಂದು ನರ್ಮದಾ ಬಚಾವೋ ಆಂದೋಲನದ ರೂವಾರಿ, ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಹೇಳಿದರು.</p>.<p>ನಗರದ ಸಿಎನ್ಎಫ್ ಸಂಸ್ಥೆಯಸಂಗಮೇಶ ಬಬಲೇಶ್ವರ ಅವರು ಕೈಗೊಂಡಿರುವ ‘ಜ್ಞಾನ ಜೋಳಿಗೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ತಮ್ಮ ಬಳಿಯಿದ್ದ ಪುಸ್ತಕವನ್ನು ಜ್ಞಾನ ಜೋಳಿಗೆಗೆ ಹಾಕುವುದರ ಮೂಲಕ ಶುಭ ಹಾರೈಸಿ ಅವರು ಮಾತನಾಡಿದರು.</p>.<p>ಜ್ಞಾನ ಜೋಳಿಗೆ ಮೂಲಕ ಪುಸ್ತಕಗಳನ್ನು ಸಂಗ್ರಹಿಸಿ, ಸರ್ಕಾರಿ ಶಾಲೆಗಳ ಗ್ರಂಥಾಲಯಗಳಿಗೆ ನೀಡುತ್ತಿರುವುದು ನಿಜಕ್ಕೂ ಅಭಿಮಾನದ ಸಂಗತಿ ಎಂದರು.</p>.<p>ಗ್ರಾಮೀಣ ಭಾಗದ ಮಕ್ಕಳ ಜ್ಞಾನದಾಹವನ್ನು ತಣಿಸುವ ಸಿಎನ್ಎಫ್ ಸಂಸ್ಥೆಯ ಜ್ಞಾನ ಯಜ್ಞ ನಿರಂತರವಾಗಿ ಸಾಗಲಿ ಎಂದು ಶುಭ ಹಾರೈಸಿದರು.</p>.<p>ಜ್ಞಾನ ಜೋಳಿಗೆ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿ, ಜ್ಞಾನ ಜೋಳಿಗೆ ಕಾರ್ಯಕ್ಕೆ ನಾಡಿನಾದ್ಯಂತ ವ್ಯಾಪಕವಾಗಿ ಪ್ರಶಂಸೆ ವ್ಯಕ್ತವಾಗುತ್ತಿದೆ. ಸಾಹಿತ್ಯಾಸಕ್ತರು, ಶಿಕ್ಷಕರು, ಸಾಹಿತಿಗಳು ತಾವು ಓದಿ ಎತ್ತಿಟ್ಟಿರುವ ಪುಸ್ತಕಗಳನ್ನು ಜ್ಞಾನ ಜೋಳಿಗೆ ದಾಸೋಹ ಮಾಡುವಂತೆ ಅವರು ಮನವಿ ಮಾಡಿದರು.</p>.<p>ಸಿಎನ್ ಎಫ್ ವಿಭಾಗದ ಮುಖ್ಯಸ್ಥ ಟಿಯೋಲ್ ಮಾಚಾಡೊ ಆಲ್ವಿನ್, ಸಿದ್ಧಲಿಂಗ ಬಾಗೇವಾಡಿ, ಭರತ್ ರೆಡ್ಡಿ, ಚಂದ್ರಶೇಖರ್ ಗಂಟೆಪ್ಪಗೋಳ, ಭರತ್ ಕುಮಾರ್, ರವಿ ಕೆಂಗನಾಳ ಉಪಸ್ಥಿತರಿದ್ದರು.</p>.<p>ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಹಾಗೂ ಜ್ಞಾನ ಜೋಳಿಗೆ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನ ಪರವಾಗಿ ಸಂಗಮೇಶ ಬಬಲೇಶ್ವರ ಅವರು ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ಸತ್ಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>