<p><strong>ವಿಜಯಪುರ:</strong> ನಗರ ಸ್ಥಳಿಯ ಸಂಸ್ಥೆಗಳ ಹಾಗೂ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಸಫಾಯಿ ಕರ್ಮಚಾರಿಗಳ ಮರು ಸಮೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೂಚಿಸಿದರು.</p>.<p>ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಸಫಾಯಿ ಕರ್ಮಾಚಾರಿಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>1993ರ ಹಿಂದಿನಿಂದಲೂ ಇರುವ ನೈಜ ಸಫಾಯಿ ಕರ್ಮಚಾರಿಗಳನ್ನು ಗುರುತಿಸಿ, ದೃಢೀಕರಿಸಿ ಪ್ರಮಾಣ ಪತ್ರದ ಜೊತೆಗೆ ಸರ್ಕಾರದ ಸೌಲಭ್ಯಗಳು ಸಕಾಲಕ್ಕೆ ದೊರಕಿಸುವಂತೆ ಸೂಚನೆ ನೀಡಿದರು.</p>.<p>ಮಲ ಹೊರುವ ಪದ್ಥತಿ (ಮ್ಯಾನ್ಯುವಲ್ ಸ್ಕ್ಯಾವೆಂಜರ್) ನಿಷೇಧವಿದ್ದು, ಈ ಕುರಿತು ತೀವ್ರ ನಿಗಾ ಇಡಬೇಕು. ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.</p>.<p>ಅರ್ಹ ಪೌರ ಕಾರ್ಮಿಕರಿಗೆ ಮಾತ್ರ ವೇತನ ನೇರ ಪಾವತಿಯಾಗಬೇಕು. ಪೌರಕಾರ್ಮಿಕರಿಗೆ ಸುರಕ್ಷಿತ ಸಾಧನ ಸಲಕರಣೆಗಳು ಸೇರಿದಂತೆ ಇನ್ನೀತರ ಸೌಲಭ್ಯಗಳನ್ನು ಕಲ್ಪಿಸುವಂತೆ ತಿಳಿಸಿದರು.</p>.<p>ಸಫಾಯಿ ಕರ್ಮಚಾರಿಗಳ ಮತ್ತು ಪೌರ ಕಾರ್ಮಿಕರನ್ನು ಸಮರ್ಪಕವಾಗಿ ಗುರುತಿಸಿ ಸೌಲಭ್ಯ ಕಲ್ಪಿಸಬೇಕು. ದಾಖಲಾತಿಗಳ ಸೂಕ್ತ ಪರಿಶೀಲನಾ ಆಧಾರದ ಮೇಲೆ ಅರ್ಹರಿಗೆ ಗುರುತಿಸಿ ಸೌಲಭ್ಯ ಕಲ್ಪಿಸಬೇಕು. ಸಫಾಯಿ ಕರ್ಮಚಾರಿಗಳಿಗೆ ಪುನರ್ ವಸತಿ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.</p>.<p>ಜಿಲ್ಲಾ ಪಂಚಾಯ್ತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಮನಗೌಡ ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ನಗರ ಸ್ಥಳಿಯ ಸಂಸ್ಥೆಗಳ ಹಾಗೂ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಸಫಾಯಿ ಕರ್ಮಚಾರಿಗಳ ಮರು ಸಮೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೂಚಿಸಿದರು.</p>.<p>ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಸಫಾಯಿ ಕರ್ಮಾಚಾರಿಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>1993ರ ಹಿಂದಿನಿಂದಲೂ ಇರುವ ನೈಜ ಸಫಾಯಿ ಕರ್ಮಚಾರಿಗಳನ್ನು ಗುರುತಿಸಿ, ದೃಢೀಕರಿಸಿ ಪ್ರಮಾಣ ಪತ್ರದ ಜೊತೆಗೆ ಸರ್ಕಾರದ ಸೌಲಭ್ಯಗಳು ಸಕಾಲಕ್ಕೆ ದೊರಕಿಸುವಂತೆ ಸೂಚನೆ ನೀಡಿದರು.</p>.<p>ಮಲ ಹೊರುವ ಪದ್ಥತಿ (ಮ್ಯಾನ್ಯುವಲ್ ಸ್ಕ್ಯಾವೆಂಜರ್) ನಿಷೇಧವಿದ್ದು, ಈ ಕುರಿತು ತೀವ್ರ ನಿಗಾ ಇಡಬೇಕು. ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.</p>.<p>ಅರ್ಹ ಪೌರ ಕಾರ್ಮಿಕರಿಗೆ ಮಾತ್ರ ವೇತನ ನೇರ ಪಾವತಿಯಾಗಬೇಕು. ಪೌರಕಾರ್ಮಿಕರಿಗೆ ಸುರಕ್ಷಿತ ಸಾಧನ ಸಲಕರಣೆಗಳು ಸೇರಿದಂತೆ ಇನ್ನೀತರ ಸೌಲಭ್ಯಗಳನ್ನು ಕಲ್ಪಿಸುವಂತೆ ತಿಳಿಸಿದರು.</p>.<p>ಸಫಾಯಿ ಕರ್ಮಚಾರಿಗಳ ಮತ್ತು ಪೌರ ಕಾರ್ಮಿಕರನ್ನು ಸಮರ್ಪಕವಾಗಿ ಗುರುತಿಸಿ ಸೌಲಭ್ಯ ಕಲ್ಪಿಸಬೇಕು. ದಾಖಲಾತಿಗಳ ಸೂಕ್ತ ಪರಿಶೀಲನಾ ಆಧಾರದ ಮೇಲೆ ಅರ್ಹರಿಗೆ ಗುರುತಿಸಿ ಸೌಲಭ್ಯ ಕಲ್ಪಿಸಬೇಕು. ಸಫಾಯಿ ಕರ್ಮಚಾರಿಗಳಿಗೆ ಪುನರ್ ವಸತಿ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.</p>.<p>ಜಿಲ್ಲಾ ಪಂಚಾಯ್ತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಮನಗೌಡ ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>