<p><strong>ವಿಜಯಪುರ:</strong> ಸಿಂದಗಿ ತಾಲ್ಲೂಕಿನ ಮೋರಟಗಿ ಚೆಕ್ ಪೋಸ್ಟ್ಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಹಾಗೂ ಇಂಡಿ ಉಪವಿಭಾಗಾಧಿಕಾರಿ ರಾಹುಲ್ ಸಿಂಧೆ ಅವರು ಬುಧವಾರ ಭೇಟಿ, ನೀಡಿ ಪರಿಶೀಲನೆ ನಡೆಸಿದರು.</p>.<p>ಚೆಕ್ ಪೋಸ್ಟ್ನಲ್ಲಿನ ಸಿ.ಸಿ.ಟಿ.ವಿ ದೃಶ್ಯಾವಳಿ ವೀಕ್ಷಿಸಿ, ಅಕ್ರಮವಾಗಿ ಮರಳು ತುಂಬಿದ ವಾಹನಗಳು ಚೆಕ್ ಪೋಸ್ಟ್ ಮೂಲಕ ದಾಟಿ ಹೋಗದಂತೆ ಕ್ರಮ ವಹಿಸಲು ಸ್ಥಳದಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಬಗಲೂರ ಗ್ರಾಮದ ಮೂಲಕ ಘತ್ತರಗಿ ಸೇತುವೆಯನ್ನು ವೀಕ್ಷಣೆ ಮಾಡಿದ ಅವರು ನಂತರ ದೇವಣಗಾಂವ ಗ್ರಾಮದ ಚೆಕ್ ಪೋಸ್ಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ದೇವಣಗಾಂವ ಗ್ರಾಮದ ಭೀಮಾ ನದಿ ದಂಡೆಯಲ್ಲಿ ಈಗಾಗಲೇ ವಶಪಡಿಸಿಕೊಂಡ ಅಕ್ರಮ ಮರಳನ್ನು ವೀಕ್ಷಿಸಿದರು. ₹5 ಲಕ್ಷ ಮೌಲ್ಯದ ಮರಳು ವಶಪಡಿಸಿಕೊಳ್ಳಲಾಗಿದೆ ಎಂದು ಉಪ ವಿಭಾಗಾಧಿಕಾರಿ ತಿಳಿಸಿದರು.</p>.<p>ಇಂಡಿ ತಾಲ್ಲೂಕಿನಲ್ಲಿ ಈವರೆಗೆ ₹ 17 ಲಕ್ಷ ಮೌಲ್ಯದ ಅಕ್ರಮ ಮರಳನ್ನು ವಶಪಡಿಸಿಕೊಂಡಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.</p>.<p>ಇಂಡಿ ಉಪವಿಭಾಗ ವ್ಯಾಪ್ತಿಯಲ್ಲಿ ಎರಡು ತಿಂಗಳಲ್ಲಿ ಒಟ್ಟು 8 ಪ್ರಕರಣ ದಾಖಲಿಸಲಾಗಿದೆ. ಫೆಬ್ರುವರಿಯಲ್ಲಿ 3 ಹಾಗೂ ಮೇನಲ್ಲಿ 5 ಪ್ರಕರಣ ದಾಖಲಿಸಲಾಗಿದೆ. 5 ವಾಹನಗಳನ್ನು ಸೀಜ್ ಮಾಡಲಾಗಿದ್ದು, 3,344 ಟನ್ ಅಕ್ರಮ ಮರಳು ವಶಪಡಿಸಿಕೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ತಿಳಿಸಿದರು.</p>.<p>ಯಾವುದೇ ಕಾರಣಕ್ಕೂ ಅಕ್ರಮ ಮರಳು ಗಣಿಗಾರಿಕೆ ನಡೆಯದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p><strong>ಮರಳು ವಶ: </strong>ಬಬಲೇಶ್ವರ ತಾಲ್ಲೂಕಿನ ಚಿಕ್ಕ ಗಲಗಲಿ ಕಡೆಯಿಂದ ಬಬಲೇಶ್ವರ ಕಡೆಗೆ ಮೂರು ಟಿಪ್ಪರ್ಗಳ ಮೂಲಕ ಒಟ್ಟು 5 ಬ್ರಾಸ್ (14 ಕ್ಯೂಬಿಕ್ ಮೀಟರ್) ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<p>ತಹಶೀಲ್ದಾರ್ ಸಂಜೀವ ಕುಮಾರ್ ದಾಸರ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಚಿದಂಬರ, ಸಿಂದಗಿ ಪಿ.ಎಸ್.ಐ. ಸಂಗಮೇಶ ಹೊಸಮನಿ ಹಾಗೂ ಆಲಮೇಲ ಪಿ.ಎಸ್.ಐ ಸುರೇಶ್ ಗಡ್ಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಸಿಂದಗಿ ತಾಲ್ಲೂಕಿನ ಮೋರಟಗಿ ಚೆಕ್ ಪೋಸ್ಟ್ಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಹಾಗೂ ಇಂಡಿ ಉಪವಿಭಾಗಾಧಿಕಾರಿ ರಾಹುಲ್ ಸಿಂಧೆ ಅವರು ಬುಧವಾರ ಭೇಟಿ, ನೀಡಿ ಪರಿಶೀಲನೆ ನಡೆಸಿದರು.</p>.<p>ಚೆಕ್ ಪೋಸ್ಟ್ನಲ್ಲಿನ ಸಿ.ಸಿ.ಟಿ.ವಿ ದೃಶ್ಯಾವಳಿ ವೀಕ್ಷಿಸಿ, ಅಕ್ರಮವಾಗಿ ಮರಳು ತುಂಬಿದ ವಾಹನಗಳು ಚೆಕ್ ಪೋಸ್ಟ್ ಮೂಲಕ ದಾಟಿ ಹೋಗದಂತೆ ಕ್ರಮ ವಹಿಸಲು ಸ್ಥಳದಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಬಗಲೂರ ಗ್ರಾಮದ ಮೂಲಕ ಘತ್ತರಗಿ ಸೇತುವೆಯನ್ನು ವೀಕ್ಷಣೆ ಮಾಡಿದ ಅವರು ನಂತರ ದೇವಣಗಾಂವ ಗ್ರಾಮದ ಚೆಕ್ ಪೋಸ್ಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ದೇವಣಗಾಂವ ಗ್ರಾಮದ ಭೀಮಾ ನದಿ ದಂಡೆಯಲ್ಲಿ ಈಗಾಗಲೇ ವಶಪಡಿಸಿಕೊಂಡ ಅಕ್ರಮ ಮರಳನ್ನು ವೀಕ್ಷಿಸಿದರು. ₹5 ಲಕ್ಷ ಮೌಲ್ಯದ ಮರಳು ವಶಪಡಿಸಿಕೊಳ್ಳಲಾಗಿದೆ ಎಂದು ಉಪ ವಿಭಾಗಾಧಿಕಾರಿ ತಿಳಿಸಿದರು.</p>.<p>ಇಂಡಿ ತಾಲ್ಲೂಕಿನಲ್ಲಿ ಈವರೆಗೆ ₹ 17 ಲಕ್ಷ ಮೌಲ್ಯದ ಅಕ್ರಮ ಮರಳನ್ನು ವಶಪಡಿಸಿಕೊಂಡಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.</p>.<p>ಇಂಡಿ ಉಪವಿಭಾಗ ವ್ಯಾಪ್ತಿಯಲ್ಲಿ ಎರಡು ತಿಂಗಳಲ್ಲಿ ಒಟ್ಟು 8 ಪ್ರಕರಣ ದಾಖಲಿಸಲಾಗಿದೆ. ಫೆಬ್ರುವರಿಯಲ್ಲಿ 3 ಹಾಗೂ ಮೇನಲ್ಲಿ 5 ಪ್ರಕರಣ ದಾಖಲಿಸಲಾಗಿದೆ. 5 ವಾಹನಗಳನ್ನು ಸೀಜ್ ಮಾಡಲಾಗಿದ್ದು, 3,344 ಟನ್ ಅಕ್ರಮ ಮರಳು ವಶಪಡಿಸಿಕೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ತಿಳಿಸಿದರು.</p>.<p>ಯಾವುದೇ ಕಾರಣಕ್ಕೂ ಅಕ್ರಮ ಮರಳು ಗಣಿಗಾರಿಕೆ ನಡೆಯದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p><strong>ಮರಳು ವಶ: </strong>ಬಬಲೇಶ್ವರ ತಾಲ್ಲೂಕಿನ ಚಿಕ್ಕ ಗಲಗಲಿ ಕಡೆಯಿಂದ ಬಬಲೇಶ್ವರ ಕಡೆಗೆ ಮೂರು ಟಿಪ್ಪರ್ಗಳ ಮೂಲಕ ಒಟ್ಟು 5 ಬ್ರಾಸ್ (14 ಕ್ಯೂಬಿಕ್ ಮೀಟರ್) ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<p>ತಹಶೀಲ್ದಾರ್ ಸಂಜೀವ ಕುಮಾರ್ ದಾಸರ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಚಿದಂಬರ, ಸಿಂದಗಿ ಪಿ.ಎಸ್.ಐ. ಸಂಗಮೇಶ ಹೊಸಮನಿ ಹಾಗೂ ಆಲಮೇಲ ಪಿ.ಎಸ್.ಐ ಸುರೇಶ್ ಗಡ್ಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>