ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಸಾಲ ವಸೂಲಾತಿ ಮಾಡದಿರಲು ಸೂಚನೆ

Last Updated 2 ಜೂನ್ 2021, 13:04 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ಹಾಗೂ ಸೌಹಾರ್ದ ಸಹಕಾರಿ ಸಂಘಗಳ ಸದಸ್ಯರು ಪಡೆದಿರುವ ಸಾಲವನ್ನು ಒತ್ತಾಯ ಪೂರ್ವಕವಾಗಿ ಹಾಗೂ ಕಿರುಕುಳ ನೀಡುವ ಮೂಲಕ ವಸೂಲಾತಿ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣ ಆಗುವವರೆಗೆ ಸಹಕಾರ ಸಂಘಗಳು ಹಾಗೂ ಸೌಹಾರ್ದ ಸಹಕಾರಿಗಳು, ಸಹಕಾರಿ ಹಾಗೂ ಸೌಹಾರ್ದ ಕಾನೂನು ಪ್ರಕಾರ ಸಾಲ ವಸೂಲಾತಿಗೆ ಕ್ರಮ ಕೈಗೊಳ್ಳುವಂತಿಲ್ಲ. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಲಾಭದಲ್ಲಿರುವ ಸಂಸ್ಥೆಗಳ ಮೂಲಕ ಸಂಕಷ್ಟದಲ್ಲಿರುವ ಕಾರ್ಯಕರ್ತರಿಗೆ ಹಾಗೂ ತೊಂದರೆ ಇರುವ ಕುಟುಂಬದ ಸದಸ್ಯರಿಗೆ ದಿನಸಿ ವಸ್ತುಗಳ ವಿತರಣೆ ಮಾಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT